Categories: ಕೊಡಗು

ಆನ್ ಲೈನ್ ವಂಚಕರಿಂದ ಮೋಸ ಹೋದ ಡಿವೈಎಸ್​ಪಿ…!: ರೂ. 15,98,761 ಗುಳುಂ ಮಾಡಿದ ಆನ್ ಲೈನ್ ಖದೀಮರು

ಆನ್ ಲೈನ್ ಖದೀಮರು ಡಿವೈಎಸ್​ಪಿವೊಬ್ಬರ ಎರಡು ಬ್ಯಾಂಕ್​ ಖಾತೆಗಳಿಗೆ ಕನ್ನ ಹಾಕಿ ಅವರ ಅರಿವಿಗೆ ಬಾರದಂತೆ 15,98,761 ರೂ. ಗಳನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ. ಇಂತಹ ದಗಾಕೋರತನವನ್ನು ಮಟ್ಟ ಹಾಕಬೇಕಾಗಿದ್ದ ಪೊಲೀಸ್ ಅಧಿಕಾರಿಯೇ ಜನಸಾಮಾನ್ಯರಂತೆ ವಂಚಕರಿಂದ ಚಳ್ಳೆಹಣ್ಣು ತಿಂದಿದ್ದಾರೆ.

ಈ ವಂಚನೆ ಪ್ರಕರಣ ಹಾಸನದಲ್ಲಿ ನಡೆದಿದ್ದು, ಕೊಡಗಿನ ಎರಡು ಪ್ರಮುಖ ಬ್ಯಾಂಕ್ ಗಳಲ್ಲಿದ್ದ ಇವರ ಹಣವನ್ನು  ಎಗರಿಸಲಾಗಿದೆ.

ಹಾಸನ ಉಪವಿಭಾಗದ ಡಿವೈಎಸ್​ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಿ.ಕೆ.ಮುರಳೀಧರ್ ಅವರೇ ಲಕ್ಷಾಂತರ ರೂ. ವನ್ನು ಕಳೆದುಕೊಂಡು ಸ್ವತಃ ದೂರಿನೊಂದಿಗೆ  ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಡಿವೈಎಸ್​ಪಿ ಪಿ.ಕೆ.ಮುರಳೀಧರ್ ಅವರು ಮಡಿಕೇರಿಯ ಕೆನರಾ ಬ್ಯಾಂಕ್ ನ ಮೈನ್ ಬ್ರ್ಯಾಂಚ್ ನಲ್ಲಿ ಮತ್ತು ಭಾಗಮಂಡಲದ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಮೇ. 20 ರಂದು ಮಧ್ಯಾಹ್ನ 1.30ರ ಸಮಯದಲ್ಲಿ ಇವರ ಫೋನ್​ಗೆ ಬಂದ ಮೆಸೇಜ್‌ಗಳನ್ನು ನೋಡಿ ಹೌಹಾರಿದ್ದಾರೆ. ಆ ಮೆಸೇಜ್‌ಗಳ ಮೂಲಕ  ಖದೀಮರ ಕೈಚಳಕ ಬೆಳಕಿಗೆ ಬಂದಿದೆ. ಡಿವೈಎಸ್‌ಪಿ ಅವರ  ಗಮನಕ್ಕೆ ಬಾರದೆ ಈ ಎರಡೂ ಖಾತೆಗಳಿಂದ ಖತರ್ನಾಕ್ ಚೋರರ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆ.

ಕೆನರಾ ಬ್ಯಾಂಕ್ ಮಡಿಕೇರಿ ಮೈನ್ ಬ್ರ್ಯಾಂಚ್ ನ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ಗಳಿಗೆ ಕನ್ನ ಹಾಕಲಾಗಿದೆ.

ಭಾಗಮಂಡಲ ಕೆನರಾಬ್ಯಾಂಕ್ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ ಒಟ್ಟು 3,88,050 ರೂ. ಗಳನ್ನು ಮಂಗಮಾಯ ಮಾಡಲಾಗಿದೆ.

ಈ ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ವನ್ನು  ವಂಚಕರು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಹಾಸನದ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿರುವ  ಡಿವೈಎಸ್​ಪಿ  ಪಿ.ಕೆ. ಮುರಳೀಧರ್ ಅವರು ಆನ್ ಲೈನ್ ಖದೀಮರನ್ನು ಪತ್ತೆ ಮಾಡಿ  ಹಣ ವಾಪಸ್ ಕೊಡಿಸುವಂತೆ ಕೇಳಿಕೊಂಡಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

6 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago