ಆನ್ ಲೈನ್ ಖದೀಮರು ಡಿವೈಎಸ್ಪಿವೊಬ್ಬರ ಎರಡು ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿ ಅವರ ಅರಿವಿಗೆ ಬಾರದಂತೆ 15,98,761 ರೂ. ಗಳನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ. ಇಂತಹ ದಗಾಕೋರತನವನ್ನು ಮಟ್ಟ ಹಾಕಬೇಕಾಗಿದ್ದ ಪೊಲೀಸ್ ಅಧಿಕಾರಿಯೇ ಜನಸಾಮಾನ್ಯರಂತೆ ವಂಚಕರಿಂದ ಚಳ್ಳೆಹಣ್ಣು ತಿಂದಿದ್ದಾರೆ.
ಈ ವಂಚನೆ ಪ್ರಕರಣ ಹಾಸನದಲ್ಲಿ ನಡೆದಿದ್ದು, ಕೊಡಗಿನ ಎರಡು ಪ್ರಮುಖ ಬ್ಯಾಂಕ್ ಗಳಲ್ಲಿದ್ದ ಇವರ ಹಣವನ್ನು ಎಗರಿಸಲಾಗಿದೆ.
ಹಾಸನ ಉಪವಿಭಾಗದ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಿ.ಕೆ.ಮುರಳೀಧರ್ ಅವರೇ ಲಕ್ಷಾಂತರ ರೂ. ವನ್ನು ಕಳೆದುಕೊಂಡು ಸ್ವತಃ ದೂರಿನೊಂದಿಗೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ಡಿವೈಎಸ್ಪಿ ಪಿ.ಕೆ.ಮುರಳೀಧರ್ ಅವರು ಮಡಿಕೇರಿಯ ಕೆನರಾ ಬ್ಯಾಂಕ್ ನ ಮೈನ್ ಬ್ರ್ಯಾಂಚ್ ನಲ್ಲಿ ಮತ್ತು ಭಾಗಮಂಡಲದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಮೇ. 20 ರಂದು ಮಧ್ಯಾಹ್ನ 1.30ರ ಸಮಯದಲ್ಲಿ ಇವರ ಫೋನ್ಗೆ ಬಂದ ಮೆಸೇಜ್ಗಳನ್ನು ನೋಡಿ ಹೌಹಾರಿದ್ದಾರೆ. ಆ ಮೆಸೇಜ್ಗಳ ಮೂಲಕ ಖದೀಮರ ಕೈಚಳಕ ಬೆಳಕಿಗೆ ಬಂದಿದೆ. ಡಿವೈಎಸ್ಪಿ ಅವರ ಗಮನಕ್ಕೆ ಬಾರದೆ ಈ ಎರಡೂ ಖಾತೆಗಳಿಂದ ಖತರ್ನಾಕ್ ಚೋರರ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆ.
ಕೆನರಾ ಬ್ಯಾಂಕ್ ಮಡಿಕೇರಿ ಮೈನ್ ಬ್ರ್ಯಾಂಚ್ ನ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ಗಳಿಗೆ ಕನ್ನ ಹಾಕಲಾಗಿದೆ.
ಭಾಗಮಂಡಲ ಕೆನರಾಬ್ಯಾಂಕ್ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ ಒಟ್ಟು 3,88,050 ರೂ. ಗಳನ್ನು ಮಂಗಮಾಯ ಮಾಡಲಾಗಿದೆ.
ಈ ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ವನ್ನು ವಂಚಕರು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಹಾಸನದ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿರುವ ಡಿವೈಎಸ್ಪಿ ಪಿ.ಕೆ. ಮುರಳೀಧರ್ ಅವರು ಆನ್ ಲೈನ್ ಖದೀಮರನ್ನು ಪತ್ತೆ ಮಾಡಿ ಹಣ ವಾಪಸ್ ಕೊಡಿಸುವಂತೆ ಕೇಳಿಕೊಂಡಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…