Categories: ಕೊಡಗು

ಆನ್ ಲೈನ್ ವಂಚಕರಿಂದ ಮೋಸ ಹೋದ ಡಿವೈಎಸ್​ಪಿ…!: ರೂ. 15,98,761 ಗುಳುಂ ಮಾಡಿದ ಆನ್ ಲೈನ್ ಖದೀಮರು

ಆನ್ ಲೈನ್ ಖದೀಮರು ಡಿವೈಎಸ್​ಪಿವೊಬ್ಬರ ಎರಡು ಬ್ಯಾಂಕ್​ ಖಾತೆಗಳಿಗೆ ಕನ್ನ ಹಾಕಿ ಅವರ ಅರಿವಿಗೆ ಬಾರದಂತೆ 15,98,761 ರೂ. ಗಳನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ. ಇಂತಹ ದಗಾಕೋರತನವನ್ನು ಮಟ್ಟ ಹಾಕಬೇಕಾಗಿದ್ದ ಪೊಲೀಸ್ ಅಧಿಕಾರಿಯೇ ಜನಸಾಮಾನ್ಯರಂತೆ ವಂಚಕರಿಂದ ಚಳ್ಳೆಹಣ್ಣು ತಿಂದಿದ್ದಾರೆ.

ಈ ವಂಚನೆ ಪ್ರಕರಣ ಹಾಸನದಲ್ಲಿ ನಡೆದಿದ್ದು, ಕೊಡಗಿನ ಎರಡು ಪ್ರಮುಖ ಬ್ಯಾಂಕ್ ಗಳಲ್ಲಿದ್ದ ಇವರ ಹಣವನ್ನು  ಎಗರಿಸಲಾಗಿದೆ.

ಹಾಸನ ಉಪವಿಭಾಗದ ಡಿವೈಎಸ್​ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಿ.ಕೆ.ಮುರಳೀಧರ್ ಅವರೇ ಲಕ್ಷಾಂತರ ರೂ. ವನ್ನು ಕಳೆದುಕೊಂಡು ಸ್ವತಃ ದೂರಿನೊಂದಿಗೆ  ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಡಿವೈಎಸ್​ಪಿ ಪಿ.ಕೆ.ಮುರಳೀಧರ್ ಅವರು ಮಡಿಕೇರಿಯ ಕೆನರಾ ಬ್ಯಾಂಕ್ ನ ಮೈನ್ ಬ್ರ್ಯಾಂಚ್ ನಲ್ಲಿ ಮತ್ತು ಭಾಗಮಂಡಲದ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಮೇ. 20 ರಂದು ಮಧ್ಯಾಹ್ನ 1.30ರ ಸಮಯದಲ್ಲಿ ಇವರ ಫೋನ್​ಗೆ ಬಂದ ಮೆಸೇಜ್‌ಗಳನ್ನು ನೋಡಿ ಹೌಹಾರಿದ್ದಾರೆ. ಆ ಮೆಸೇಜ್‌ಗಳ ಮೂಲಕ  ಖದೀಮರ ಕೈಚಳಕ ಬೆಳಕಿಗೆ ಬಂದಿದೆ. ಡಿವೈಎಸ್‌ಪಿ ಅವರ  ಗಮನಕ್ಕೆ ಬಾರದೆ ಈ ಎರಡೂ ಖಾತೆಗಳಿಂದ ಖತರ್ನಾಕ್ ಚೋರರ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆ.

ಕೆನರಾ ಬ್ಯಾಂಕ್ ಮಡಿಕೇರಿ ಮೈನ್ ಬ್ರ್ಯಾಂಚ್ ನ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ಗಳಿಗೆ ಕನ್ನ ಹಾಕಲಾಗಿದೆ.

ಭಾಗಮಂಡಲ ಕೆನರಾಬ್ಯಾಂಕ್ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ ಒಟ್ಟು 3,88,050 ರೂ. ಗಳನ್ನು ಮಂಗಮಾಯ ಮಾಡಲಾಗಿದೆ.

ಈ ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ವನ್ನು  ವಂಚಕರು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಹಾಸನದ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿರುವ  ಡಿವೈಎಸ್​ಪಿ  ಪಿ.ಕೆ. ಮುರಳೀಧರ್ ಅವರು ಆನ್ ಲೈನ್ ಖದೀಮರನ್ನು ಪತ್ತೆ ಮಾಡಿ  ಹಣ ವಾಪಸ್ ಕೊಡಿಸುವಂತೆ ಕೇಳಿಕೊಂಡಿದ್ದಾರೆ.

Ramesh Babu

Journalist

Recent Posts

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

4 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

5 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

19 hours ago

ಹೀಟ್ ಸ್ಟ್ರೋಕ್​: ಯುವಕ ಸಾವು: ಬಿಸಿಲಿಗೆ ಬರುವ ಮುನ್ನ ಇರಲಿ ಎಚ್ಚರ

ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…

1 day ago

‘ಅಯ್ಯಾ ಬಸವಣ್ಣ ಸಮಾಜದ ನೆಮ್ಮದಿಗಾಗಿ ಮತ್ತೊಮ್ಮೆ ಹುಟ್ಟಿ ಬಾ’

ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…

1 day ago

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ: ಪತ್ನಿ, ಪ್ರಿಯಕರ ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು‌ ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…

2 days ago