Categories: ಕೊಡಗು

ಆನ್ ಲೈನ್ ವಂಚಕರಿಂದ ಮೋಸ ಹೋದ ಡಿವೈಎಸ್​ಪಿ…!: ರೂ. 15,98,761 ಗುಳುಂ ಮಾಡಿದ ಆನ್ ಲೈನ್ ಖದೀಮರು

ಆನ್ ಲೈನ್ ಖದೀಮರು ಡಿವೈಎಸ್​ಪಿವೊಬ್ಬರ ಎರಡು ಬ್ಯಾಂಕ್​ ಖಾತೆಗಳಿಗೆ ಕನ್ನ ಹಾಕಿ ಅವರ ಅರಿವಿಗೆ ಬಾರದಂತೆ 15,98,761 ರೂ. ಗಳನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ. ಇಂತಹ ದಗಾಕೋರತನವನ್ನು ಮಟ್ಟ ಹಾಕಬೇಕಾಗಿದ್ದ ಪೊಲೀಸ್ ಅಧಿಕಾರಿಯೇ ಜನಸಾಮಾನ್ಯರಂತೆ ವಂಚಕರಿಂದ ಚಳ್ಳೆಹಣ್ಣು ತಿಂದಿದ್ದಾರೆ.

ಈ ವಂಚನೆ ಪ್ರಕರಣ ಹಾಸನದಲ್ಲಿ ನಡೆದಿದ್ದು, ಕೊಡಗಿನ ಎರಡು ಪ್ರಮುಖ ಬ್ಯಾಂಕ್ ಗಳಲ್ಲಿದ್ದ ಇವರ ಹಣವನ್ನು  ಎಗರಿಸಲಾಗಿದೆ.

ಹಾಸನ ಉಪವಿಭಾಗದ ಡಿವೈಎಸ್​ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಿ.ಕೆ.ಮುರಳೀಧರ್ ಅವರೇ ಲಕ್ಷಾಂತರ ರೂ. ವನ್ನು ಕಳೆದುಕೊಂಡು ಸ್ವತಃ ದೂರಿನೊಂದಿಗೆ  ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಡಿವೈಎಸ್​ಪಿ ಪಿ.ಕೆ.ಮುರಳೀಧರ್ ಅವರು ಮಡಿಕೇರಿಯ ಕೆನರಾ ಬ್ಯಾಂಕ್ ನ ಮೈನ್ ಬ್ರ್ಯಾಂಚ್ ನಲ್ಲಿ ಮತ್ತು ಭಾಗಮಂಡಲದ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಮೇ. 20 ರಂದು ಮಧ್ಯಾಹ್ನ 1.30ರ ಸಮಯದಲ್ಲಿ ಇವರ ಫೋನ್​ಗೆ ಬಂದ ಮೆಸೇಜ್‌ಗಳನ್ನು ನೋಡಿ ಹೌಹಾರಿದ್ದಾರೆ. ಆ ಮೆಸೇಜ್‌ಗಳ ಮೂಲಕ  ಖದೀಮರ ಕೈಚಳಕ ಬೆಳಕಿಗೆ ಬಂದಿದೆ. ಡಿವೈಎಸ್‌ಪಿ ಅವರ  ಗಮನಕ್ಕೆ ಬಾರದೆ ಈ ಎರಡೂ ಖಾತೆಗಳಿಂದ ಖತರ್ನಾಕ್ ಚೋರರ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆ.

ಕೆನರಾ ಬ್ಯಾಂಕ್ ಮಡಿಕೇರಿ ಮೈನ್ ಬ್ರ್ಯಾಂಚ್ ನ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ಗಳಿಗೆ ಕನ್ನ ಹಾಕಲಾಗಿದೆ.

ಭಾಗಮಂಡಲ ಕೆನರಾಬ್ಯಾಂಕ್ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ ಒಟ್ಟು 3,88,050 ರೂ. ಗಳನ್ನು ಮಂಗಮಾಯ ಮಾಡಲಾಗಿದೆ.

ಈ ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ವನ್ನು  ವಂಚಕರು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಹಾಸನದ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿರುವ  ಡಿವೈಎಸ್​ಪಿ  ಪಿ.ಕೆ. ಮುರಳೀಧರ್ ಅವರು ಆನ್ ಲೈನ್ ಖದೀಮರನ್ನು ಪತ್ತೆ ಮಾಡಿ  ಹಣ ವಾಪಸ್ ಕೊಡಿಸುವಂತೆ ಕೇಳಿಕೊಂಡಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

7 minutes ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

4 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

11 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

12 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago