Categories: ಕೊಡಗು

ಆನ್ ಲೈನ್ ವಂಚಕರಿಂದ ಮೋಸ ಹೋದ ಡಿವೈಎಸ್​ಪಿ…!: ರೂ. 15,98,761 ಗುಳುಂ ಮಾಡಿದ ಆನ್ ಲೈನ್ ಖದೀಮರು

ಆನ್ ಲೈನ್ ಖದೀಮರು ಡಿವೈಎಸ್​ಪಿವೊಬ್ಬರ ಎರಡು ಬ್ಯಾಂಕ್​ ಖಾತೆಗಳಿಗೆ ಕನ್ನ ಹಾಕಿ ಅವರ ಅರಿವಿಗೆ ಬಾರದಂತೆ 15,98,761 ರೂ. ಗಳನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ. ಇಂತಹ ದಗಾಕೋರತನವನ್ನು ಮಟ್ಟ ಹಾಕಬೇಕಾಗಿದ್ದ ಪೊಲೀಸ್ ಅಧಿಕಾರಿಯೇ ಜನಸಾಮಾನ್ಯರಂತೆ ವಂಚಕರಿಂದ ಚಳ್ಳೆಹಣ್ಣು ತಿಂದಿದ್ದಾರೆ.

ಈ ವಂಚನೆ ಪ್ರಕರಣ ಹಾಸನದಲ್ಲಿ ನಡೆದಿದ್ದು, ಕೊಡಗಿನ ಎರಡು ಪ್ರಮುಖ ಬ್ಯಾಂಕ್ ಗಳಲ್ಲಿದ್ದ ಇವರ ಹಣವನ್ನು  ಎಗರಿಸಲಾಗಿದೆ.

ಹಾಸನ ಉಪವಿಭಾಗದ ಡಿವೈಎಸ್​ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಿ.ಕೆ.ಮುರಳೀಧರ್ ಅವರೇ ಲಕ್ಷಾಂತರ ರೂ. ವನ್ನು ಕಳೆದುಕೊಂಡು ಸ್ವತಃ ದೂರಿನೊಂದಿಗೆ  ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಡಿವೈಎಸ್​ಪಿ ಪಿ.ಕೆ.ಮುರಳೀಧರ್ ಅವರು ಮಡಿಕೇರಿಯ ಕೆನರಾ ಬ್ಯಾಂಕ್ ನ ಮೈನ್ ಬ್ರ್ಯಾಂಚ್ ನಲ್ಲಿ ಮತ್ತು ಭಾಗಮಂಡಲದ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಮೇ. 20 ರಂದು ಮಧ್ಯಾಹ್ನ 1.30ರ ಸಮಯದಲ್ಲಿ ಇವರ ಫೋನ್​ಗೆ ಬಂದ ಮೆಸೇಜ್‌ಗಳನ್ನು ನೋಡಿ ಹೌಹಾರಿದ್ದಾರೆ. ಆ ಮೆಸೇಜ್‌ಗಳ ಮೂಲಕ  ಖದೀಮರ ಕೈಚಳಕ ಬೆಳಕಿಗೆ ಬಂದಿದೆ. ಡಿವೈಎಸ್‌ಪಿ ಅವರ  ಗಮನಕ್ಕೆ ಬಾರದೆ ಈ ಎರಡೂ ಖಾತೆಗಳಿಂದ ಖತರ್ನಾಕ್ ಚೋರರ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆ.

ಕೆನರಾ ಬ್ಯಾಂಕ್ ಮಡಿಕೇರಿ ಮೈನ್ ಬ್ರ್ಯಾಂಚ್ ನ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ಗಳಿಗೆ ಕನ್ನ ಹಾಕಲಾಗಿದೆ.

ಭಾಗಮಂಡಲ ಕೆನರಾಬ್ಯಾಂಕ್ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ ಒಟ್ಟು 3,88,050 ರೂ. ಗಳನ್ನು ಮಂಗಮಾಯ ಮಾಡಲಾಗಿದೆ.

ಈ ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ವನ್ನು  ವಂಚಕರು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಹಾಸನದ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿರುವ  ಡಿವೈಎಸ್​ಪಿ  ಪಿ.ಕೆ. ಮುರಳೀಧರ್ ಅವರು ಆನ್ ಲೈನ್ ಖದೀಮರನ್ನು ಪತ್ತೆ ಮಾಡಿ  ಹಣ ವಾಪಸ್ ಕೊಡಿಸುವಂತೆ ಕೇಳಿಕೊಂಡಿದ್ದಾರೆ.

Ramesh Babu

Journalist

Recent Posts

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

27 minutes ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

37 minutes ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

44 minutes ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

6 hours ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

12 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

12 hours ago