Categories: ಕೊಡಗು

ಆನ್ ಲೈನ್ ವಂಚಕರಿಂದ ಮೋಸ ಹೋದ ಡಿವೈಎಸ್​ಪಿ…!: ರೂ. 15,98,761 ಗುಳುಂ ಮಾಡಿದ ಆನ್ ಲೈನ್ ಖದೀಮರು

ಆನ್ ಲೈನ್ ಖದೀಮರು ಡಿವೈಎಸ್​ಪಿವೊಬ್ಬರ ಎರಡು ಬ್ಯಾಂಕ್​ ಖಾತೆಗಳಿಗೆ ಕನ್ನ ಹಾಕಿ ಅವರ ಅರಿವಿಗೆ ಬಾರದಂತೆ 15,98,761 ರೂ. ಗಳನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ. ಇಂತಹ ದಗಾಕೋರತನವನ್ನು ಮಟ್ಟ ಹಾಕಬೇಕಾಗಿದ್ದ ಪೊಲೀಸ್ ಅಧಿಕಾರಿಯೇ ಜನಸಾಮಾನ್ಯರಂತೆ ವಂಚಕರಿಂದ ಚಳ್ಳೆಹಣ್ಣು ತಿಂದಿದ್ದಾರೆ.

ಈ ವಂಚನೆ ಪ್ರಕರಣ ಹಾಸನದಲ್ಲಿ ನಡೆದಿದ್ದು, ಕೊಡಗಿನ ಎರಡು ಪ್ರಮುಖ ಬ್ಯಾಂಕ್ ಗಳಲ್ಲಿದ್ದ ಇವರ ಹಣವನ್ನು  ಎಗರಿಸಲಾಗಿದೆ.

ಹಾಸನ ಉಪವಿಭಾಗದ ಡಿವೈಎಸ್​ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಿ.ಕೆ.ಮುರಳೀಧರ್ ಅವರೇ ಲಕ್ಷಾಂತರ ರೂ. ವನ್ನು ಕಳೆದುಕೊಂಡು ಸ್ವತಃ ದೂರಿನೊಂದಿಗೆ  ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಡಿವೈಎಸ್​ಪಿ ಪಿ.ಕೆ.ಮುರಳೀಧರ್ ಅವರು ಮಡಿಕೇರಿಯ ಕೆನರಾ ಬ್ಯಾಂಕ್ ನ ಮೈನ್ ಬ್ರ್ಯಾಂಚ್ ನಲ್ಲಿ ಮತ್ತು ಭಾಗಮಂಡಲದ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಮೇ. 20 ರಂದು ಮಧ್ಯಾಹ್ನ 1.30ರ ಸಮಯದಲ್ಲಿ ಇವರ ಫೋನ್​ಗೆ ಬಂದ ಮೆಸೇಜ್‌ಗಳನ್ನು ನೋಡಿ ಹೌಹಾರಿದ್ದಾರೆ. ಆ ಮೆಸೇಜ್‌ಗಳ ಮೂಲಕ  ಖದೀಮರ ಕೈಚಳಕ ಬೆಳಕಿಗೆ ಬಂದಿದೆ. ಡಿವೈಎಸ್‌ಪಿ ಅವರ  ಗಮನಕ್ಕೆ ಬಾರದೆ ಈ ಎರಡೂ ಖಾತೆಗಳಿಂದ ಖತರ್ನಾಕ್ ಚೋರರ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆ.

ಕೆನರಾ ಬ್ಯಾಂಕ್ ಮಡಿಕೇರಿ ಮೈನ್ ಬ್ರ್ಯಾಂಚ್ ನ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ಗಳಿಗೆ ಕನ್ನ ಹಾಕಲಾಗಿದೆ.

ಭಾಗಮಂಡಲ ಕೆನರಾಬ್ಯಾಂಕ್ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ ಒಟ್ಟು 3,88,050 ರೂ. ಗಳನ್ನು ಮಂಗಮಾಯ ಮಾಡಲಾಗಿದೆ.

ಈ ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ವನ್ನು  ವಂಚಕರು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಹಾಸನದ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿರುವ  ಡಿವೈಎಸ್​ಪಿ  ಪಿ.ಕೆ. ಮುರಳೀಧರ್ ಅವರು ಆನ್ ಲೈನ್ ಖದೀಮರನ್ನು ಪತ್ತೆ ಮಾಡಿ  ಹಣ ವಾಪಸ್ ಕೊಡಿಸುವಂತೆ ಕೇಳಿಕೊಂಡಿದ್ದಾರೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

13 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

13 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

14 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

15 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

18 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

18 hours ago