ಆಪರೇಷನ್ ಸಿಂಧೂರ: ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ: ಸಿಎಂ ಸಿದ್ದರಾಮಯ್ಯ ಏನಂದ್ರು..?

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ, ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ ಎಂದರು.

ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ ತಿಳಿಸಿದ್ದಾರೆ.

ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದರು.

ಕಾಶ್ಮೀರದ ಪಹಲ್ಗಾವ್‌ನಲ್ಲಿ ಅಮಾಯಕ 26ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ ಎಂದು ತಿಳಿಸಿದರು.

ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಹೇಳಿದ್ದಾರೆ.

ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ ಎಂದರು.

ಉಗ್ರರ ನೆಲೆಗಳ ಮೇಲೆ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ ಎಂದು ಹೇಳಿದರು.

ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ ಎಂದರು.

ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ತಿಳಿಸಿದರು.

ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್ ಎಂದು ಹೇಳಿದರು.

ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ ಎಂದರು.

ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

29 minutes ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

5 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

9 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

10 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

21 hours ago