ಆಪರೇಷನ್ ಸಿಂಧೂರ: ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ: ಸಿಎಂ ಸಿದ್ದರಾಮಯ್ಯ ಏನಂದ್ರು..?

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ, ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ ಎಂದರು.

ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ ತಿಳಿಸಿದ್ದಾರೆ.

ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದರು.

ಕಾಶ್ಮೀರದ ಪಹಲ್ಗಾವ್‌ನಲ್ಲಿ ಅಮಾಯಕ 26ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ ಎಂದು ತಿಳಿಸಿದರು.

ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಹೇಳಿದ್ದಾರೆ.

ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ ಎಂದರು.

ಉಗ್ರರ ನೆಲೆಗಳ ಮೇಲೆ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ ಎಂದು ಹೇಳಿದರು.

ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ ಎಂದರು.

ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ತಿಳಿಸಿದರು.

ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್ ಎಂದು ಹೇಳಿದರು.

ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ ಎಂದರು.

ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

5 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

15 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

16 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

21 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

23 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago