ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ನಂತರ ಭಾರತವು ಪಾಕಿಸ್ತಾನದ ಮೇಲೆ ತೀವ್ರ ಪ್ರತಿಕಾರದ ಕ್ರಮ ಕೈಗೊಂಡಿದ್ದು, ಇದೀಗ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ಪಾಕಿಸ್ತಾನದ ವಿರುದ್ಧ ಇಂದು ಅಧಿಕೃತವಾಗಿ ಪ್ರಾರಂಭಿಸಿದೆ.
ಪಹಲ್ಲಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ನಿರ್ದಿಷ್ಟ ದಾಳಿ ನಡೆಸಲಾಗುತ್ತಿದೆ.
ಒಂಬತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಹೇಳಿದೆ. ಈ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ” ಎಂದು ಹೆಸರಿಡಲಾಗಿದೆ. ಭಾರತದ ವಿವಿಧ ಸ್ಥಳಗಳ ಮೇಲೆ ಆಂತರಿಕ ಭದ್ರತಾ ಪಡೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
ಲಷ್ಕರ್ ಎ ತಯಬಾ ಮತ್ತು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತದಿಂದ ದಾಳಿ ನಡೆಸಲಾಗಿದೆ. ದಾಳಿಗಳಲ್ಲಿ ಮೂವತ್ತಕ್ಕೂ ಹೆಚ್ಚು ಉಗ್ರರು ಸತ್ತಿದ್ದಾರೆ ಎಂಬುದಾಗಿ ಕೆಲ ವರದಿಗಳು ಹೇಳಿವೆ.
ಮಾಕ್ ಡ್ರಿಲ್ ಗೆ ಸೂಚನೆ ಬಂದ ಬೆನ್ನಲ್ಲೇ ಪಾಕಿಸ್ತಾನದ ವಿರುದ್ಧ ಭಾರತ ಸೇನೆಗಳು ಅಧೀಕೃತವಾಗಿ ಕಾರ್ಯಾಚರಣೆಗೆ ಇಳಿದಿವೆ. ಅತ್ತ ಪಾಕಿಸ್ತಾನದ ಗಡಿಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಸೇನಾ ಚಟುವಟಿಕೆಗಳು ಬಿರುಸುಪಡೆದುಕೊಂಡಿವೆ.
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…