ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ನಂತರ ಭಾರತವು ಪಾಕಿಸ್ತಾನದ ಮೇಲೆ ತೀವ್ರ ಪ್ರತಿಕಾರದ ಕ್ರಮ ಕೈಗೊಂಡಿದ್ದು, ಇದೀಗ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ಪಾಕಿಸ್ತಾನದ ವಿರುದ್ಧ ಇಂದು ಅಧಿಕೃತವಾಗಿ ಪ್ರಾರಂಭಿಸಿದೆ.
ಪಹಲ್ಲಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ನಿರ್ದಿಷ್ಟ ದಾಳಿ ನಡೆಸಲಾಗುತ್ತಿದೆ.
ಒಂಬತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಹೇಳಿದೆ. ಈ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ” ಎಂದು ಹೆಸರಿಡಲಾಗಿದೆ. ಭಾರತದ ವಿವಿಧ ಸ್ಥಳಗಳ ಮೇಲೆ ಆಂತರಿಕ ಭದ್ರತಾ ಪಡೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
ಲಷ್ಕರ್ ಎ ತಯಬಾ ಮತ್ತು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತದಿಂದ ದಾಳಿ ನಡೆಸಲಾಗಿದೆ. ದಾಳಿಗಳಲ್ಲಿ ಮೂವತ್ತಕ್ಕೂ ಹೆಚ್ಚು ಉಗ್ರರು ಸತ್ತಿದ್ದಾರೆ ಎಂಬುದಾಗಿ ಕೆಲ ವರದಿಗಳು ಹೇಳಿವೆ.
ಮಾಕ್ ಡ್ರಿಲ್ ಗೆ ಸೂಚನೆ ಬಂದ ಬೆನ್ನಲ್ಲೇ ಪಾಕಿಸ್ತಾನದ ವಿರುದ್ಧ ಭಾರತ ಸೇನೆಗಳು ಅಧೀಕೃತವಾಗಿ ಕಾರ್ಯಾಚರಣೆಗೆ ಇಳಿದಿವೆ. ಅತ್ತ ಪಾಕಿಸ್ತಾನದ ಗಡಿಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಸೇನಾ ಚಟುವಟಿಕೆಗಳು ಬಿರುಸುಪಡೆದುಕೊಂಡಿವೆ.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…