Categories: ರಾಜ್ಯ

ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ- ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರುವುದಾದರೆ ಸ್ವಾಗತ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಸ್ವಇಚ್ಛೆಯಿಂದ ಬರಲಿದ್ದಾರೆ.

ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿದ್ದಾರೆ. ಅವರು ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ.

ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಮಂತ್ರಿಗಳ ಆರೋಪ ಆಧಾರ ರಹಿತ ಮತ್ತು ರಾಜಕೀಯ ಹೇಳಿಕೆಯಾಗಿದೆ. 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ. ಪುರಾವೆಗಳು, ದಾಖಲೆಗಳಿಲ್ಲದೇ ಆರೋಪ ಮಾಡಬಾರದು. ಇಂದು ಇಡೀ ದೇಶವೇ ದಿವಾಳಿಯಾಗಿದೆ. ಅದರ ಬಗ್ಗೆ ಪ್ರಧಾನಿಗಳು ಮಾತನಾಡಲಿ.

ರಾಜ್ಯದ ವಿರುದ್ಧ ಕೇಂದ್ರ ಮಲತಾಯಿ ಧೋರಣೆಯನ್ನು ತಳೆದಿದೆ. ಬರಗಾಲದ ಪರಿಹಾರವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನಮಂತ್ರಿಗಳು ಹೇಳಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಸಾಧಿಸಿ ತೋರಿಸಿದೆ. ಇಂತಹ ಹೇಳಿಕೆಗಳನ್ನು ದೇಶದ ಪ್ರಧಾನಮಂತ್ರಿಗಳಿಂದ ಅಪೇಕ್ಷಿಸಿರಲಿಲ್ಲ. ತಮ್ಮ ರಾಜಕೀಯ ಭಾಷಣದಲ್ಲಿ ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಚಿವರೊಂದಿಗೆ ಸಭೆಯನ್ನು ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಿಎಂ ಆದವರು ಪ್ರಧಾನಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದಿದ್ದಾರೆ. ಅವಕಾಶ ನೀಡಿದರಲ್ಲವೇ ಭೇಟಿಯಾಗೋದು? ಬರಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಕುಮಾರಸ್ವಾಮಿಯವರು ಹೇಗಿದ್ದರೂ ಬಿಜೆಪಿಯವರೊಂದಿಗೆ ಸೇರಿದ್ದಾರೆ. ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಿಸಲು ಕೇಂದ್ರದೊಂದಿಗೆ ಮಾತನಾಡಲಿ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

10 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

21 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

22 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

22 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago