Categories: ರಾಜ್ಯ

ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ- ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರುವುದಾದರೆ ಸ್ವಾಗತ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಸ್ವಇಚ್ಛೆಯಿಂದ ಬರಲಿದ್ದಾರೆ.

ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿದ್ದಾರೆ. ಅವರು ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ.

ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಮಂತ್ರಿಗಳ ಆರೋಪ ಆಧಾರ ರಹಿತ ಮತ್ತು ರಾಜಕೀಯ ಹೇಳಿಕೆಯಾಗಿದೆ. 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ. ಪುರಾವೆಗಳು, ದಾಖಲೆಗಳಿಲ್ಲದೇ ಆರೋಪ ಮಾಡಬಾರದು. ಇಂದು ಇಡೀ ದೇಶವೇ ದಿವಾಳಿಯಾಗಿದೆ. ಅದರ ಬಗ್ಗೆ ಪ್ರಧಾನಿಗಳು ಮಾತನಾಡಲಿ.

ರಾಜ್ಯದ ವಿರುದ್ಧ ಕೇಂದ್ರ ಮಲತಾಯಿ ಧೋರಣೆಯನ್ನು ತಳೆದಿದೆ. ಬರಗಾಲದ ಪರಿಹಾರವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನಮಂತ್ರಿಗಳು ಹೇಳಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಸಾಧಿಸಿ ತೋರಿಸಿದೆ. ಇಂತಹ ಹೇಳಿಕೆಗಳನ್ನು ದೇಶದ ಪ್ರಧಾನಮಂತ್ರಿಗಳಿಂದ ಅಪೇಕ್ಷಿಸಿರಲಿಲ್ಲ. ತಮ್ಮ ರಾಜಕೀಯ ಭಾಷಣದಲ್ಲಿ ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಚಿವರೊಂದಿಗೆ ಸಭೆಯನ್ನು ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಿಎಂ ಆದವರು ಪ್ರಧಾನಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದಿದ್ದಾರೆ. ಅವಕಾಶ ನೀಡಿದರಲ್ಲವೇ ಭೇಟಿಯಾಗೋದು? ಬರಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಕುಮಾರಸ್ವಾಮಿಯವರು ಹೇಗಿದ್ದರೂ ಬಿಜೆಪಿಯವರೊಂದಿಗೆ ಸೇರಿದ್ದಾರೆ. ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಿಸಲು ಕೇಂದ್ರದೊಂದಿಗೆ ಮಾತನಾಡಲಿ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

7 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

20 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

23 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

24 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago