ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಸ್ವಇಚ್ಛೆಯಿಂದ ಬರಲಿದ್ದಾರೆ.
ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿದ್ದಾರೆ. ಅವರು ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ.
ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಮಂತ್ರಿಗಳ ಆರೋಪ ಆಧಾರ ರಹಿತ ಮತ್ತು ರಾಜಕೀಯ ಹೇಳಿಕೆಯಾಗಿದೆ. 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ. ಪುರಾವೆಗಳು, ದಾಖಲೆಗಳಿಲ್ಲದೇ ಆರೋಪ ಮಾಡಬಾರದು. ಇಂದು ಇಡೀ ದೇಶವೇ ದಿವಾಳಿಯಾಗಿದೆ. ಅದರ ಬಗ್ಗೆ ಪ್ರಧಾನಿಗಳು ಮಾತನಾಡಲಿ.
ರಾಜ್ಯದ ವಿರುದ್ಧ ಕೇಂದ್ರ ಮಲತಾಯಿ ಧೋರಣೆಯನ್ನು ತಳೆದಿದೆ. ಬರಗಾಲದ ಪರಿಹಾರವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನಮಂತ್ರಿಗಳು ಹೇಳಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಸಾಧಿಸಿ ತೋರಿಸಿದೆ. ಇಂತಹ ಹೇಳಿಕೆಗಳನ್ನು ದೇಶದ ಪ್ರಧಾನಮಂತ್ರಿಗಳಿಂದ ಅಪೇಕ್ಷಿಸಿರಲಿಲ್ಲ. ತಮ್ಮ ರಾಜಕೀಯ ಭಾಷಣದಲ್ಲಿ ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ.
ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಚಿವರೊಂದಿಗೆ ಸಭೆಯನ್ನು ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಿಎಂ ಆದವರು ಪ್ರಧಾನಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದಿದ್ದಾರೆ. ಅವಕಾಶ ನೀಡಿದರಲ್ಲವೇ ಭೇಟಿಯಾಗೋದು? ಬರಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಕುಮಾರಸ್ವಾಮಿಯವರು ಹೇಗಿದ್ದರೂ ಬಿಜೆಪಿಯವರೊಂದಿಗೆ ಸೇರಿದ್ದಾರೆ. ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಿಸಲು ಕೇಂದ್ರದೊಂದಿಗೆ ಮಾತನಾಡಲಿ.
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…