Categories: ರಾಜ್ಯ

ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ- ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರುವುದಾದರೆ ಸ್ವಾಗತ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಸ್ವಇಚ್ಛೆಯಿಂದ ಬರಲಿದ್ದಾರೆ.

ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿದ್ದಾರೆ. ಅವರು ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ.

ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಮಂತ್ರಿಗಳ ಆರೋಪ ಆಧಾರ ರಹಿತ ಮತ್ತು ರಾಜಕೀಯ ಹೇಳಿಕೆಯಾಗಿದೆ. 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ. ಪುರಾವೆಗಳು, ದಾಖಲೆಗಳಿಲ್ಲದೇ ಆರೋಪ ಮಾಡಬಾರದು. ಇಂದು ಇಡೀ ದೇಶವೇ ದಿವಾಳಿಯಾಗಿದೆ. ಅದರ ಬಗ್ಗೆ ಪ್ರಧಾನಿಗಳು ಮಾತನಾಡಲಿ.

ರಾಜ್ಯದ ವಿರುದ್ಧ ಕೇಂದ್ರ ಮಲತಾಯಿ ಧೋರಣೆಯನ್ನು ತಳೆದಿದೆ. ಬರಗಾಲದ ಪರಿಹಾರವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನಮಂತ್ರಿಗಳು ಹೇಳಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಸಾಧಿಸಿ ತೋರಿಸಿದೆ. ಇಂತಹ ಹೇಳಿಕೆಗಳನ್ನು ದೇಶದ ಪ್ರಧಾನಮಂತ್ರಿಗಳಿಂದ ಅಪೇಕ್ಷಿಸಿರಲಿಲ್ಲ. ತಮ್ಮ ರಾಜಕೀಯ ಭಾಷಣದಲ್ಲಿ ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಚಿವರೊಂದಿಗೆ ಸಭೆಯನ್ನು ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಿಎಂ ಆದವರು ಪ್ರಧಾನಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದಿದ್ದಾರೆ. ಅವಕಾಶ ನೀಡಿದರಲ್ಲವೇ ಭೇಟಿಯಾಗೋದು? ಬರಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಕುಮಾರಸ್ವಾಮಿಯವರು ಹೇಗಿದ್ದರೂ ಬಿಜೆಪಿಯವರೊಂದಿಗೆ ಸೇರಿದ್ದಾರೆ. ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಿಸಲು ಕೇಂದ್ರದೊಂದಿಗೆ ಮಾತನಾಡಲಿ.

Ramesh Babu

Journalist

Recent Posts

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

4 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

5 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

18 hours ago

ಹೀಟ್ ಸ್ಟ್ರೋಕ್​: ಯುವಕ ಸಾವು: ಬಿಸಿಲಿಗೆ ಬರುವ ಮುನ್ನ ಇರಲಿ ಎಚ್ಚರ

ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…

1 day ago

‘ಅಯ್ಯಾ ಬಸವಣ್ಣ ಸಮಾಜದ ನೆಮ್ಮದಿಗಾಗಿ ಮತ್ತೊಮ್ಮೆ ಹುಟ್ಟಿ ಬಾ’

ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…

1 day ago

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ: ಪತ್ನಿ, ಪ್ರಿಯಕರ ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು‌ ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…

2 days ago