Categories: ರಾಜ್ಯ

ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ- ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರುವುದಾದರೆ ಸ್ವಾಗತ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಸ್ವಇಚ್ಛೆಯಿಂದ ಬರಲಿದ್ದಾರೆ.

ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿದ್ದಾರೆ. ಅವರು ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ.

ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಮಂತ್ರಿಗಳ ಆರೋಪ ಆಧಾರ ರಹಿತ ಮತ್ತು ರಾಜಕೀಯ ಹೇಳಿಕೆಯಾಗಿದೆ. 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ. ಪುರಾವೆಗಳು, ದಾಖಲೆಗಳಿಲ್ಲದೇ ಆರೋಪ ಮಾಡಬಾರದು. ಇಂದು ಇಡೀ ದೇಶವೇ ದಿವಾಳಿಯಾಗಿದೆ. ಅದರ ಬಗ್ಗೆ ಪ್ರಧಾನಿಗಳು ಮಾತನಾಡಲಿ.

ರಾಜ್ಯದ ವಿರುದ್ಧ ಕೇಂದ್ರ ಮಲತಾಯಿ ಧೋರಣೆಯನ್ನು ತಳೆದಿದೆ. ಬರಗಾಲದ ಪರಿಹಾರವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನಮಂತ್ರಿಗಳು ಹೇಳಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಸಾಧಿಸಿ ತೋರಿಸಿದೆ. ಇಂತಹ ಹೇಳಿಕೆಗಳನ್ನು ದೇಶದ ಪ್ರಧಾನಮಂತ್ರಿಗಳಿಂದ ಅಪೇಕ್ಷಿಸಿರಲಿಲ್ಲ. ತಮ್ಮ ರಾಜಕೀಯ ಭಾಷಣದಲ್ಲಿ ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಚಿವರೊಂದಿಗೆ ಸಭೆಯನ್ನು ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಿಎಂ ಆದವರು ಪ್ರಧಾನಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದಿದ್ದಾರೆ. ಅವಕಾಶ ನೀಡಿದರಲ್ಲವೇ ಭೇಟಿಯಾಗೋದು? ಬರಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಕುಮಾರಸ್ವಾಮಿಯವರು ಹೇಗಿದ್ದರೂ ಬಿಜೆಪಿಯವರೊಂದಿಗೆ ಸೇರಿದ್ದಾರೆ. ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಿಸಲು ಕೇಂದ್ರದೊಂದಿಗೆ ಮಾತನಾಡಲಿ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

6 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

13 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

14 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago