ಆಮಿಷಕ್ಕೆ ಒಳಗಾಗಿ ತಮ್ಮ ಮತ ಮಾರಾಟ ಮಾಡಬೇಡಿ- ಎಎಪಿ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ

ನಾವು ಕಟ್ಟುತ್ತಿರುವ ತೆರಿಗೆ ಹಣ ನಮ್ಮ ಜೇಬಿಗೆ ವಾಪಾಸ್ ಬರಬೇಕಾದರೇ ಈ ಬಾರಿ ವಿಧಾನಸಭಾ ಚುನಾವಣೆ ಆಪ್ ಚುನಾವಣೆ ಆಗಬಾರದು, ಒಬ್ಬ ಅಭ್ಯರ್ಥಿ ಚುನಾವಣೆ ಆಗಬಾರದು, ಪ್ರತಿ ಮನೆಯ ಚುನಾವಣೆ ಇದಾಗಬೇಕು ಆಗಷ್ಟೆ ಬದಲಾವಣೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ ಹೇಳಿದರು.

ನಗರದ ಆಪ್ ಕಛೇರಿಯಲ್ಲಿ ಪದಾಧಿಕಾರಿಗಳ ಆಯ್ಕೆ ಮತ್ತು ಬೈಕ್ ರ್ಯಾಲಿ ಕುರಿತು ಗುರುವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು, ದೆಹಲಿ ಚುನಾವಣೆಯಲ್ಲಿ ಹಿಂದು ಮುಸ್ಲಿಂ, ದಲಿತ, ಬ್ರಾಹ್ಮಣ, ಜಾತಿ, ಧರ್ಮ, ಭಾಷೆ ಎಲ್ಲಾ ಬಿಟ್ಟು ಒಂದಾದ ಮೇಲೆ 70 ಕ್ಷೇತ್ರಗಳಲ್ಲಿ ಗಳಿಗೆ 62 ಕ್ಷೇತ್ರದಲ್ಲಿ ಜಯಗಳಿಸಿ ದೆಹಲಿ ಗದ್ದುಗೆ‌ ಏರಲು ಸಹಕಾರಿಯಾಯಿತು.

ಆಪ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಲಿನ ಪ್ರತಿ ಮನೆಗೂ ಉಚಿತ ಮತ್ತು ಉತ್ತಮವಾದ ಆರೋಗ್ಯ, ಶಿಕ್ಷಣ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ವಿದ್ಯುತ್, ನೀರು, ಲೈಸೆನ್ಸ್ , ಹೀಗೆ ಹಲವು ಸೌಲಭ್ಯಗಳನ್ನು ಪಡೆಯಲು ಜನ ಕಛೇರಿ ಅಲೆದಾಟ ಇಲ್ಲ ಪ್ರತಿ ತಿಂಗಳು 10 ರಿಂದ 12 ಸಾವಿರ ಉಳಿತಾಯ ಪ್ರಾರಂಭವಾಗಿದೆ,

ನಾಲಾಯಕ್ ಕಾಂಗ್ರೆಸ್,ಜೆಡಿಎಸ್ ಪಕ್ಷ ಇಷ್ಟು ಅವಕಾಶ ನೀಡಿದ್ದೆವು ಇವರು ಯಾಕೆ‌ ಮಾಡಿಲ್ಲ, ಸದ್ಯ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆ‌ ಇವರ ಕೈಲಿ ಯಾಕೆ ಮಾಡೊಕೆ ಆಗ್ತಾ ಇಲ್ಲ ಇದನ್ನು ರಾಜ್ಯದ ಜನತೆ ಯೋಚಿಸಬೇಕು ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಪುರುಷೋತ್ತಮ್ ಮಾತನಾಡಿ, ನಮ್ಮ ಪಕ್ಷ ಇತರೇ ಪಕ್ಷಗಳಂತೆ ಯಾವುದೇ ಆಮಿಷಗಳನ್ನು ಕೊಡುವುದಿಲ್ಲ, ಅರವಿಂದ್ ಕೇಜ್ರಿವಾಲ್ ಆದೇಶದಂತೆ ಪ್ರತಿ ಮನೆಗೂ ವಿದ್ಯೆ,ಆರೋಗ್ಯ ಮತ್ತು ನೆಮ್ಮದಿ ಅಂದೋಲನವನ್ನು ಮಾಡುತ್ತ ಹೋದರೇ ಜನಗಳೇ ಅರ್ಥ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ,

ಈಗ ತಾಲ್ಲೂಕಿನಾದ್ಯಂತ ದೇವಾಲಯಗಳಿಗೆ ಪ್ರವಾಸ, ಉಚಿತ ಸೀರೆ, ಕುಕ್ಕರ್ ಆಮಿಷಗಳಿಗೆ ಜನರು ಮರುಳಾಗುವುದಿಲ್ಲ ಮತ್ತು ಇವರ ಆಟ ಹೆಚ್ಚು ದಿನ ನಡೆಯುವುದಿಲ್ಲ, ಮತದಾರರು ಜಾಗೃತರಾಗಿದ್ದೂ ತಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳದಿರಿ ಸೂಕ್ತ ವ್ಯಕ್ತಿಯನ್ನು ಆಯ್ಕೆ‌ ಮಾಡಿ ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಪದಾಧಿಕಾರಿಗಳು :
ತಾಲ್ಲೂಕು ಅಧ್ಯಕ್ಷರಾಗಿ ಜೆ.ಹರೀಶ್, ಉಪಾಧ್ಯಕ್ಷ ಇರ್ಫಾನ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಕೃಷ್ಣಮೂರ್ತಿ, ಕಾರ್ಯದರ್ಶಿ ಸುರೇಶ್,ಶೋಯೇಬ್ ಖಾನ್, ನರೇಂದ್ರಮೂರ್ತಿ, ವೀರಭದ್ರಯ್ಯ ಆಯ್ಕೆಯಾಗಿದ್ದಾರೆ.

ಈ ವೇಳೆ ಆಪ್ ನ ರಾಜ್ಯ ಕಾರ್ಯದರ್ಶಿ ಸುರೇಶ್ ರಾಥೋಡ್,ಜಂಟಿ ಕಾರ್ಯದರ್ಶಿ ಬಿ.ಕೆ.ಶಿವಪ್ಪ, ರಾಥೊಡ್ , ದೀಪಕ್ ಮತ್ತು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

2 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

2 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

5 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

9 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

14 hours ago