ಆಮಿಷಕ್ಕೆ ಒಳಗಾಗಿ ತಮ್ಮ ಮತ ಮಾರಾಟ ಮಾಡಬೇಡಿ- ಎಎಪಿ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ

ನಾವು ಕಟ್ಟುತ್ತಿರುವ ತೆರಿಗೆ ಹಣ ನಮ್ಮ ಜೇಬಿಗೆ ವಾಪಾಸ್ ಬರಬೇಕಾದರೇ ಈ ಬಾರಿ ವಿಧಾನಸಭಾ ಚುನಾವಣೆ ಆಪ್ ಚುನಾವಣೆ ಆಗಬಾರದು, ಒಬ್ಬ ಅಭ್ಯರ್ಥಿ ಚುನಾವಣೆ ಆಗಬಾರದು, ಪ್ರತಿ ಮನೆಯ ಚುನಾವಣೆ ಇದಾಗಬೇಕು ಆಗಷ್ಟೆ ಬದಲಾವಣೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ ಹೇಳಿದರು.

ನಗರದ ಆಪ್ ಕಛೇರಿಯಲ್ಲಿ ಪದಾಧಿಕಾರಿಗಳ ಆಯ್ಕೆ ಮತ್ತು ಬೈಕ್ ರ್ಯಾಲಿ ಕುರಿತು ಗುರುವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು, ದೆಹಲಿ ಚುನಾವಣೆಯಲ್ಲಿ ಹಿಂದು ಮುಸ್ಲಿಂ, ದಲಿತ, ಬ್ರಾಹ್ಮಣ, ಜಾತಿ, ಧರ್ಮ, ಭಾಷೆ ಎಲ್ಲಾ ಬಿಟ್ಟು ಒಂದಾದ ಮೇಲೆ 70 ಕ್ಷೇತ್ರಗಳಲ್ಲಿ ಗಳಿಗೆ 62 ಕ್ಷೇತ್ರದಲ್ಲಿ ಜಯಗಳಿಸಿ ದೆಹಲಿ ಗದ್ದುಗೆ‌ ಏರಲು ಸಹಕಾರಿಯಾಯಿತು.

ಆಪ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಲಿನ ಪ್ರತಿ ಮನೆಗೂ ಉಚಿತ ಮತ್ತು ಉತ್ತಮವಾದ ಆರೋಗ್ಯ, ಶಿಕ್ಷಣ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ವಿದ್ಯುತ್, ನೀರು, ಲೈಸೆನ್ಸ್ , ಹೀಗೆ ಹಲವು ಸೌಲಭ್ಯಗಳನ್ನು ಪಡೆಯಲು ಜನ ಕಛೇರಿ ಅಲೆದಾಟ ಇಲ್ಲ ಪ್ರತಿ ತಿಂಗಳು 10 ರಿಂದ 12 ಸಾವಿರ ಉಳಿತಾಯ ಪ್ರಾರಂಭವಾಗಿದೆ,

ನಾಲಾಯಕ್ ಕಾಂಗ್ರೆಸ್,ಜೆಡಿಎಸ್ ಪಕ್ಷ ಇಷ್ಟು ಅವಕಾಶ ನೀಡಿದ್ದೆವು ಇವರು ಯಾಕೆ‌ ಮಾಡಿಲ್ಲ, ಸದ್ಯ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆ‌ ಇವರ ಕೈಲಿ ಯಾಕೆ ಮಾಡೊಕೆ ಆಗ್ತಾ ಇಲ್ಲ ಇದನ್ನು ರಾಜ್ಯದ ಜನತೆ ಯೋಚಿಸಬೇಕು ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಪುರುಷೋತ್ತಮ್ ಮಾತನಾಡಿ, ನಮ್ಮ ಪಕ್ಷ ಇತರೇ ಪಕ್ಷಗಳಂತೆ ಯಾವುದೇ ಆಮಿಷಗಳನ್ನು ಕೊಡುವುದಿಲ್ಲ, ಅರವಿಂದ್ ಕೇಜ್ರಿವಾಲ್ ಆದೇಶದಂತೆ ಪ್ರತಿ ಮನೆಗೂ ವಿದ್ಯೆ,ಆರೋಗ್ಯ ಮತ್ತು ನೆಮ್ಮದಿ ಅಂದೋಲನವನ್ನು ಮಾಡುತ್ತ ಹೋದರೇ ಜನಗಳೇ ಅರ್ಥ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ,

ಈಗ ತಾಲ್ಲೂಕಿನಾದ್ಯಂತ ದೇವಾಲಯಗಳಿಗೆ ಪ್ರವಾಸ, ಉಚಿತ ಸೀರೆ, ಕುಕ್ಕರ್ ಆಮಿಷಗಳಿಗೆ ಜನರು ಮರುಳಾಗುವುದಿಲ್ಲ ಮತ್ತು ಇವರ ಆಟ ಹೆಚ್ಚು ದಿನ ನಡೆಯುವುದಿಲ್ಲ, ಮತದಾರರು ಜಾಗೃತರಾಗಿದ್ದೂ ತಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳದಿರಿ ಸೂಕ್ತ ವ್ಯಕ್ತಿಯನ್ನು ಆಯ್ಕೆ‌ ಮಾಡಿ ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಪದಾಧಿಕಾರಿಗಳು :
ತಾಲ್ಲೂಕು ಅಧ್ಯಕ್ಷರಾಗಿ ಜೆ.ಹರೀಶ್, ಉಪಾಧ್ಯಕ್ಷ ಇರ್ಫಾನ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಕೃಷ್ಣಮೂರ್ತಿ, ಕಾರ್ಯದರ್ಶಿ ಸುರೇಶ್,ಶೋಯೇಬ್ ಖಾನ್, ನರೇಂದ್ರಮೂರ್ತಿ, ವೀರಭದ್ರಯ್ಯ ಆಯ್ಕೆಯಾಗಿದ್ದಾರೆ.

ಈ ವೇಳೆ ಆಪ್ ನ ರಾಜ್ಯ ಕಾರ್ಯದರ್ಶಿ ಸುರೇಶ್ ರಾಥೋಡ್,ಜಂಟಿ ಕಾರ್ಯದರ್ಶಿ ಬಿ.ಕೆ.ಶಿವಪ್ಪ, ರಾಥೊಡ್ , ದೀಪಕ್ ಮತ್ತು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

5 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

7 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

7 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

9 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

17 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago