ಆಮಿಷಕ್ಕೆ ಒಳಗಾಗಿ ತಮ್ಮ ಮತ ಮಾರಾಟ ಮಾಡಬೇಡಿ- ಎಎಪಿ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ

ನಾವು ಕಟ್ಟುತ್ತಿರುವ ತೆರಿಗೆ ಹಣ ನಮ್ಮ ಜೇಬಿಗೆ ವಾಪಾಸ್ ಬರಬೇಕಾದರೇ ಈ ಬಾರಿ ವಿಧಾನಸಭಾ ಚುನಾವಣೆ ಆಪ್ ಚುನಾವಣೆ ಆಗಬಾರದು, ಒಬ್ಬ ಅಭ್ಯರ್ಥಿ ಚುನಾವಣೆ ಆಗಬಾರದು, ಪ್ರತಿ ಮನೆಯ ಚುನಾವಣೆ ಇದಾಗಬೇಕು ಆಗಷ್ಟೆ ಬದಲಾವಣೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ ಹೇಳಿದರು.

ನಗರದ ಆಪ್ ಕಛೇರಿಯಲ್ಲಿ ಪದಾಧಿಕಾರಿಗಳ ಆಯ್ಕೆ ಮತ್ತು ಬೈಕ್ ರ್ಯಾಲಿ ಕುರಿತು ಗುರುವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು, ದೆಹಲಿ ಚುನಾವಣೆಯಲ್ಲಿ ಹಿಂದು ಮುಸ್ಲಿಂ, ದಲಿತ, ಬ್ರಾಹ್ಮಣ, ಜಾತಿ, ಧರ್ಮ, ಭಾಷೆ ಎಲ್ಲಾ ಬಿಟ್ಟು ಒಂದಾದ ಮೇಲೆ 70 ಕ್ಷೇತ್ರಗಳಲ್ಲಿ ಗಳಿಗೆ 62 ಕ್ಷೇತ್ರದಲ್ಲಿ ಜಯಗಳಿಸಿ ದೆಹಲಿ ಗದ್ದುಗೆ‌ ಏರಲು ಸಹಕಾರಿಯಾಯಿತು.

ಆಪ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಲಿನ ಪ್ರತಿ ಮನೆಗೂ ಉಚಿತ ಮತ್ತು ಉತ್ತಮವಾದ ಆರೋಗ್ಯ, ಶಿಕ್ಷಣ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ವಿದ್ಯುತ್, ನೀರು, ಲೈಸೆನ್ಸ್ , ಹೀಗೆ ಹಲವು ಸೌಲಭ್ಯಗಳನ್ನು ಪಡೆಯಲು ಜನ ಕಛೇರಿ ಅಲೆದಾಟ ಇಲ್ಲ ಪ್ರತಿ ತಿಂಗಳು 10 ರಿಂದ 12 ಸಾವಿರ ಉಳಿತಾಯ ಪ್ರಾರಂಭವಾಗಿದೆ,

ನಾಲಾಯಕ್ ಕಾಂಗ್ರೆಸ್,ಜೆಡಿಎಸ್ ಪಕ್ಷ ಇಷ್ಟು ಅವಕಾಶ ನೀಡಿದ್ದೆವು ಇವರು ಯಾಕೆ‌ ಮಾಡಿಲ್ಲ, ಸದ್ಯ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆ‌ ಇವರ ಕೈಲಿ ಯಾಕೆ ಮಾಡೊಕೆ ಆಗ್ತಾ ಇಲ್ಲ ಇದನ್ನು ರಾಜ್ಯದ ಜನತೆ ಯೋಚಿಸಬೇಕು ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಪುರುಷೋತ್ತಮ್ ಮಾತನಾಡಿ, ನಮ್ಮ ಪಕ್ಷ ಇತರೇ ಪಕ್ಷಗಳಂತೆ ಯಾವುದೇ ಆಮಿಷಗಳನ್ನು ಕೊಡುವುದಿಲ್ಲ, ಅರವಿಂದ್ ಕೇಜ್ರಿವಾಲ್ ಆದೇಶದಂತೆ ಪ್ರತಿ ಮನೆಗೂ ವಿದ್ಯೆ,ಆರೋಗ್ಯ ಮತ್ತು ನೆಮ್ಮದಿ ಅಂದೋಲನವನ್ನು ಮಾಡುತ್ತ ಹೋದರೇ ಜನಗಳೇ ಅರ್ಥ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ,

ಈಗ ತಾಲ್ಲೂಕಿನಾದ್ಯಂತ ದೇವಾಲಯಗಳಿಗೆ ಪ್ರವಾಸ, ಉಚಿತ ಸೀರೆ, ಕುಕ್ಕರ್ ಆಮಿಷಗಳಿಗೆ ಜನರು ಮರುಳಾಗುವುದಿಲ್ಲ ಮತ್ತು ಇವರ ಆಟ ಹೆಚ್ಚು ದಿನ ನಡೆಯುವುದಿಲ್ಲ, ಮತದಾರರು ಜಾಗೃತರಾಗಿದ್ದೂ ತಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳದಿರಿ ಸೂಕ್ತ ವ್ಯಕ್ತಿಯನ್ನು ಆಯ್ಕೆ‌ ಮಾಡಿ ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಪದಾಧಿಕಾರಿಗಳು :
ತಾಲ್ಲೂಕು ಅಧ್ಯಕ್ಷರಾಗಿ ಜೆ.ಹರೀಶ್, ಉಪಾಧ್ಯಕ್ಷ ಇರ್ಫಾನ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಕೃಷ್ಣಮೂರ್ತಿ, ಕಾರ್ಯದರ್ಶಿ ಸುರೇಶ್,ಶೋಯೇಬ್ ಖಾನ್, ನರೇಂದ್ರಮೂರ್ತಿ, ವೀರಭದ್ರಯ್ಯ ಆಯ್ಕೆಯಾಗಿದ್ದಾರೆ.

ಈ ವೇಳೆ ಆಪ್ ನ ರಾಜ್ಯ ಕಾರ್ಯದರ್ಶಿ ಸುರೇಶ್ ರಾಥೋಡ್,ಜಂಟಿ ಕಾರ್ಯದರ್ಶಿ ಬಿ.ಕೆ.ಶಿವಪ್ಪ, ರಾಥೊಡ್ , ದೀಪಕ್ ಮತ್ತು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

3 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

3 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

9 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

21 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

21 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

22 hours ago