ಆಮಿಷಕ್ಕೆ ಒಳಗಾಗಿ ತಮ್ಮ ಮತ ಮಾರಾಟ ಮಾಡಬೇಡಿ- ಎಎಪಿ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ

ನಾವು ಕಟ್ಟುತ್ತಿರುವ ತೆರಿಗೆ ಹಣ ನಮ್ಮ ಜೇಬಿಗೆ ವಾಪಾಸ್ ಬರಬೇಕಾದರೇ ಈ ಬಾರಿ ವಿಧಾನಸಭಾ ಚುನಾವಣೆ ಆಪ್ ಚುನಾವಣೆ ಆಗಬಾರದು, ಒಬ್ಬ ಅಭ್ಯರ್ಥಿ ಚುನಾವಣೆ ಆಗಬಾರದು, ಪ್ರತಿ ಮನೆಯ ಚುನಾವಣೆ ಇದಾಗಬೇಕು ಆಗಷ್ಟೆ ಬದಲಾವಣೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ ಹೇಳಿದರು.

ನಗರದ ಆಪ್ ಕಛೇರಿಯಲ್ಲಿ ಪದಾಧಿಕಾರಿಗಳ ಆಯ್ಕೆ ಮತ್ತು ಬೈಕ್ ರ್ಯಾಲಿ ಕುರಿತು ಗುರುವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು, ದೆಹಲಿ ಚುನಾವಣೆಯಲ್ಲಿ ಹಿಂದು ಮುಸ್ಲಿಂ, ದಲಿತ, ಬ್ರಾಹ್ಮಣ, ಜಾತಿ, ಧರ್ಮ, ಭಾಷೆ ಎಲ್ಲಾ ಬಿಟ್ಟು ಒಂದಾದ ಮೇಲೆ 70 ಕ್ಷೇತ್ರಗಳಲ್ಲಿ ಗಳಿಗೆ 62 ಕ್ಷೇತ್ರದಲ್ಲಿ ಜಯಗಳಿಸಿ ದೆಹಲಿ ಗದ್ದುಗೆ‌ ಏರಲು ಸಹಕಾರಿಯಾಯಿತು.

ಆಪ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಲಿನ ಪ್ರತಿ ಮನೆಗೂ ಉಚಿತ ಮತ್ತು ಉತ್ತಮವಾದ ಆರೋಗ್ಯ, ಶಿಕ್ಷಣ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ವಿದ್ಯುತ್, ನೀರು, ಲೈಸೆನ್ಸ್ , ಹೀಗೆ ಹಲವು ಸೌಲಭ್ಯಗಳನ್ನು ಪಡೆಯಲು ಜನ ಕಛೇರಿ ಅಲೆದಾಟ ಇಲ್ಲ ಪ್ರತಿ ತಿಂಗಳು 10 ರಿಂದ 12 ಸಾವಿರ ಉಳಿತಾಯ ಪ್ರಾರಂಭವಾಗಿದೆ,

ನಾಲಾಯಕ್ ಕಾಂಗ್ರೆಸ್,ಜೆಡಿಎಸ್ ಪಕ್ಷ ಇಷ್ಟು ಅವಕಾಶ ನೀಡಿದ್ದೆವು ಇವರು ಯಾಕೆ‌ ಮಾಡಿಲ್ಲ, ಸದ್ಯ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆ‌ ಇವರ ಕೈಲಿ ಯಾಕೆ ಮಾಡೊಕೆ ಆಗ್ತಾ ಇಲ್ಲ ಇದನ್ನು ರಾಜ್ಯದ ಜನತೆ ಯೋಚಿಸಬೇಕು ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಪುರುಷೋತ್ತಮ್ ಮಾತನಾಡಿ, ನಮ್ಮ ಪಕ್ಷ ಇತರೇ ಪಕ್ಷಗಳಂತೆ ಯಾವುದೇ ಆಮಿಷಗಳನ್ನು ಕೊಡುವುದಿಲ್ಲ, ಅರವಿಂದ್ ಕೇಜ್ರಿವಾಲ್ ಆದೇಶದಂತೆ ಪ್ರತಿ ಮನೆಗೂ ವಿದ್ಯೆ,ಆರೋಗ್ಯ ಮತ್ತು ನೆಮ್ಮದಿ ಅಂದೋಲನವನ್ನು ಮಾಡುತ್ತ ಹೋದರೇ ಜನಗಳೇ ಅರ್ಥ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ,

ಈಗ ತಾಲ್ಲೂಕಿನಾದ್ಯಂತ ದೇವಾಲಯಗಳಿಗೆ ಪ್ರವಾಸ, ಉಚಿತ ಸೀರೆ, ಕುಕ್ಕರ್ ಆಮಿಷಗಳಿಗೆ ಜನರು ಮರುಳಾಗುವುದಿಲ್ಲ ಮತ್ತು ಇವರ ಆಟ ಹೆಚ್ಚು ದಿನ ನಡೆಯುವುದಿಲ್ಲ, ಮತದಾರರು ಜಾಗೃತರಾಗಿದ್ದೂ ತಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳದಿರಿ ಸೂಕ್ತ ವ್ಯಕ್ತಿಯನ್ನು ಆಯ್ಕೆ‌ ಮಾಡಿ ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಪದಾಧಿಕಾರಿಗಳು :
ತಾಲ್ಲೂಕು ಅಧ್ಯಕ್ಷರಾಗಿ ಜೆ.ಹರೀಶ್, ಉಪಾಧ್ಯಕ್ಷ ಇರ್ಫಾನ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಕೃಷ್ಣಮೂರ್ತಿ, ಕಾರ್ಯದರ್ಶಿ ಸುರೇಶ್,ಶೋಯೇಬ್ ಖಾನ್, ನರೇಂದ್ರಮೂರ್ತಿ, ವೀರಭದ್ರಯ್ಯ ಆಯ್ಕೆಯಾಗಿದ್ದಾರೆ.

ಈ ವೇಳೆ ಆಪ್ ನ ರಾಜ್ಯ ಕಾರ್ಯದರ್ಶಿ ಸುರೇಶ್ ರಾಥೋಡ್,ಜಂಟಿ ಕಾರ್ಯದರ್ಶಿ ಬಿ.ಕೆ.ಶಿವಪ್ಪ, ರಾಥೊಡ್ , ದೀಪಕ್ ಮತ್ತು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

18 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago