ಆಮಿಷಕ್ಕೆ ಒಳಗಾಗಿ ತಮ್ಮ ಮತ ಮಾರಾಟ ಮಾಡಬೇಡಿ- ಎಎಪಿ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ

ನಾವು ಕಟ್ಟುತ್ತಿರುವ ತೆರಿಗೆ ಹಣ ನಮ್ಮ ಜೇಬಿಗೆ ವಾಪಾಸ್ ಬರಬೇಕಾದರೇ ಈ ಬಾರಿ ವಿಧಾನಸಭಾ ಚುನಾವಣೆ ಆಪ್ ಚುನಾವಣೆ ಆಗಬಾರದು, ಒಬ್ಬ ಅಭ್ಯರ್ಥಿ ಚುನಾವಣೆ ಆಗಬಾರದು, ಪ್ರತಿ ಮನೆಯ ಚುನಾವಣೆ ಇದಾಗಬೇಕು ಆಗಷ್ಟೆ ಬದಲಾವಣೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ ಹೇಳಿದರು.

ನಗರದ ಆಪ್ ಕಛೇರಿಯಲ್ಲಿ ಪದಾಧಿಕಾರಿಗಳ ಆಯ್ಕೆ ಮತ್ತು ಬೈಕ್ ರ್ಯಾಲಿ ಕುರಿತು ಗುರುವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು, ದೆಹಲಿ ಚುನಾವಣೆಯಲ್ಲಿ ಹಿಂದು ಮುಸ್ಲಿಂ, ದಲಿತ, ಬ್ರಾಹ್ಮಣ, ಜಾತಿ, ಧರ್ಮ, ಭಾಷೆ ಎಲ್ಲಾ ಬಿಟ್ಟು ಒಂದಾದ ಮೇಲೆ 70 ಕ್ಷೇತ್ರಗಳಲ್ಲಿ ಗಳಿಗೆ 62 ಕ್ಷೇತ್ರದಲ್ಲಿ ಜಯಗಳಿಸಿ ದೆಹಲಿ ಗದ್ದುಗೆ‌ ಏರಲು ಸಹಕಾರಿಯಾಯಿತು.

ಆಪ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಲಿನ ಪ್ರತಿ ಮನೆಗೂ ಉಚಿತ ಮತ್ತು ಉತ್ತಮವಾದ ಆರೋಗ್ಯ, ಶಿಕ್ಷಣ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ವಿದ್ಯುತ್, ನೀರು, ಲೈಸೆನ್ಸ್ , ಹೀಗೆ ಹಲವು ಸೌಲಭ್ಯಗಳನ್ನು ಪಡೆಯಲು ಜನ ಕಛೇರಿ ಅಲೆದಾಟ ಇಲ್ಲ ಪ್ರತಿ ತಿಂಗಳು 10 ರಿಂದ 12 ಸಾವಿರ ಉಳಿತಾಯ ಪ್ರಾರಂಭವಾಗಿದೆ,

ನಾಲಾಯಕ್ ಕಾಂಗ್ರೆಸ್,ಜೆಡಿಎಸ್ ಪಕ್ಷ ಇಷ್ಟು ಅವಕಾಶ ನೀಡಿದ್ದೆವು ಇವರು ಯಾಕೆ‌ ಮಾಡಿಲ್ಲ, ಸದ್ಯ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆ‌ ಇವರ ಕೈಲಿ ಯಾಕೆ ಮಾಡೊಕೆ ಆಗ್ತಾ ಇಲ್ಲ ಇದನ್ನು ರಾಜ್ಯದ ಜನತೆ ಯೋಚಿಸಬೇಕು ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಪುರುಷೋತ್ತಮ್ ಮಾತನಾಡಿ, ನಮ್ಮ ಪಕ್ಷ ಇತರೇ ಪಕ್ಷಗಳಂತೆ ಯಾವುದೇ ಆಮಿಷಗಳನ್ನು ಕೊಡುವುದಿಲ್ಲ, ಅರವಿಂದ್ ಕೇಜ್ರಿವಾಲ್ ಆದೇಶದಂತೆ ಪ್ರತಿ ಮನೆಗೂ ವಿದ್ಯೆ,ಆರೋಗ್ಯ ಮತ್ತು ನೆಮ್ಮದಿ ಅಂದೋಲನವನ್ನು ಮಾಡುತ್ತ ಹೋದರೇ ಜನಗಳೇ ಅರ್ಥ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ,

ಈಗ ತಾಲ್ಲೂಕಿನಾದ್ಯಂತ ದೇವಾಲಯಗಳಿಗೆ ಪ್ರವಾಸ, ಉಚಿತ ಸೀರೆ, ಕುಕ್ಕರ್ ಆಮಿಷಗಳಿಗೆ ಜನರು ಮರುಳಾಗುವುದಿಲ್ಲ ಮತ್ತು ಇವರ ಆಟ ಹೆಚ್ಚು ದಿನ ನಡೆಯುವುದಿಲ್ಲ, ಮತದಾರರು ಜಾಗೃತರಾಗಿದ್ದೂ ತಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳದಿರಿ ಸೂಕ್ತ ವ್ಯಕ್ತಿಯನ್ನು ಆಯ್ಕೆ‌ ಮಾಡಿ ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಪದಾಧಿಕಾರಿಗಳು :
ತಾಲ್ಲೂಕು ಅಧ್ಯಕ್ಷರಾಗಿ ಜೆ.ಹರೀಶ್, ಉಪಾಧ್ಯಕ್ಷ ಇರ್ಫಾನ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಕೃಷ್ಣಮೂರ್ತಿ, ಕಾರ್ಯದರ್ಶಿ ಸುರೇಶ್,ಶೋಯೇಬ್ ಖಾನ್, ನರೇಂದ್ರಮೂರ್ತಿ, ವೀರಭದ್ರಯ್ಯ ಆಯ್ಕೆಯಾಗಿದ್ದಾರೆ.

ಈ ವೇಳೆ ಆಪ್ ನ ರಾಜ್ಯ ಕಾರ್ಯದರ್ಶಿ ಸುರೇಶ್ ರಾಥೋಡ್,ಜಂಟಿ ಕಾರ್ಯದರ್ಶಿ ಬಿ.ಕೆ.ಶಿವಪ್ಪ, ರಾಥೊಡ್ , ದೀಪಕ್ ಮತ್ತು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

5 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

24 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago