ಆಮಿಷಕ್ಕೆ ಒಳಗಾಗಿ ತಮ್ಮ ಮತ ಮಾರಾಟ ಮಾಡಬೇಡಿ- ಎಎಪಿ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ

ನಾವು ಕಟ್ಟುತ್ತಿರುವ ತೆರಿಗೆ ಹಣ ನಮ್ಮ ಜೇಬಿಗೆ ವಾಪಾಸ್ ಬರಬೇಕಾದರೇ ಈ ಬಾರಿ ವಿಧಾನಸಭಾ ಚುನಾವಣೆ ಆಪ್ ಚುನಾವಣೆ ಆಗಬಾರದು, ಒಬ್ಬ ಅಭ್ಯರ್ಥಿ ಚುನಾವಣೆ ಆಗಬಾರದು, ಪ್ರತಿ ಮನೆಯ ಚುನಾವಣೆ ಇದಾಗಬೇಕು ಆಗಷ್ಟೆ ಬದಲಾವಣೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ ಹೇಳಿದರು.

ನಗರದ ಆಪ್ ಕಛೇರಿಯಲ್ಲಿ ಪದಾಧಿಕಾರಿಗಳ ಆಯ್ಕೆ ಮತ್ತು ಬೈಕ್ ರ್ಯಾಲಿ ಕುರಿತು ಗುರುವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು, ದೆಹಲಿ ಚುನಾವಣೆಯಲ್ಲಿ ಹಿಂದು ಮುಸ್ಲಿಂ, ದಲಿತ, ಬ್ರಾಹ್ಮಣ, ಜಾತಿ, ಧರ್ಮ, ಭಾಷೆ ಎಲ್ಲಾ ಬಿಟ್ಟು ಒಂದಾದ ಮೇಲೆ 70 ಕ್ಷೇತ್ರಗಳಲ್ಲಿ ಗಳಿಗೆ 62 ಕ್ಷೇತ್ರದಲ್ಲಿ ಜಯಗಳಿಸಿ ದೆಹಲಿ ಗದ್ದುಗೆ‌ ಏರಲು ಸಹಕಾರಿಯಾಯಿತು.

ಆಪ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಲಿನ ಪ್ರತಿ ಮನೆಗೂ ಉಚಿತ ಮತ್ತು ಉತ್ತಮವಾದ ಆರೋಗ್ಯ, ಶಿಕ್ಷಣ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ವಿದ್ಯುತ್, ನೀರು, ಲೈಸೆನ್ಸ್ , ಹೀಗೆ ಹಲವು ಸೌಲಭ್ಯಗಳನ್ನು ಪಡೆಯಲು ಜನ ಕಛೇರಿ ಅಲೆದಾಟ ಇಲ್ಲ ಪ್ರತಿ ತಿಂಗಳು 10 ರಿಂದ 12 ಸಾವಿರ ಉಳಿತಾಯ ಪ್ರಾರಂಭವಾಗಿದೆ,

ನಾಲಾಯಕ್ ಕಾಂಗ್ರೆಸ್,ಜೆಡಿಎಸ್ ಪಕ್ಷ ಇಷ್ಟು ಅವಕಾಶ ನೀಡಿದ್ದೆವು ಇವರು ಯಾಕೆ‌ ಮಾಡಿಲ್ಲ, ಸದ್ಯ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆ‌ ಇವರ ಕೈಲಿ ಯಾಕೆ ಮಾಡೊಕೆ ಆಗ್ತಾ ಇಲ್ಲ ಇದನ್ನು ರಾಜ್ಯದ ಜನತೆ ಯೋಚಿಸಬೇಕು ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಪುರುಷೋತ್ತಮ್ ಮಾತನಾಡಿ, ನಮ್ಮ ಪಕ್ಷ ಇತರೇ ಪಕ್ಷಗಳಂತೆ ಯಾವುದೇ ಆಮಿಷಗಳನ್ನು ಕೊಡುವುದಿಲ್ಲ, ಅರವಿಂದ್ ಕೇಜ್ರಿವಾಲ್ ಆದೇಶದಂತೆ ಪ್ರತಿ ಮನೆಗೂ ವಿದ್ಯೆ,ಆರೋಗ್ಯ ಮತ್ತು ನೆಮ್ಮದಿ ಅಂದೋಲನವನ್ನು ಮಾಡುತ್ತ ಹೋದರೇ ಜನಗಳೇ ಅರ್ಥ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ,

ಈಗ ತಾಲ್ಲೂಕಿನಾದ್ಯಂತ ದೇವಾಲಯಗಳಿಗೆ ಪ್ರವಾಸ, ಉಚಿತ ಸೀರೆ, ಕುಕ್ಕರ್ ಆಮಿಷಗಳಿಗೆ ಜನರು ಮರುಳಾಗುವುದಿಲ್ಲ ಮತ್ತು ಇವರ ಆಟ ಹೆಚ್ಚು ದಿನ ನಡೆಯುವುದಿಲ್ಲ, ಮತದಾರರು ಜಾಗೃತರಾಗಿದ್ದೂ ತಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳದಿರಿ ಸೂಕ್ತ ವ್ಯಕ್ತಿಯನ್ನು ಆಯ್ಕೆ‌ ಮಾಡಿ ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಪದಾಧಿಕಾರಿಗಳು :
ತಾಲ್ಲೂಕು ಅಧ್ಯಕ್ಷರಾಗಿ ಜೆ.ಹರೀಶ್, ಉಪಾಧ್ಯಕ್ಷ ಇರ್ಫಾನ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಕೃಷ್ಣಮೂರ್ತಿ, ಕಾರ್ಯದರ್ಶಿ ಸುರೇಶ್,ಶೋಯೇಬ್ ಖಾನ್, ನರೇಂದ್ರಮೂರ್ತಿ, ವೀರಭದ್ರಯ್ಯ ಆಯ್ಕೆಯಾಗಿದ್ದಾರೆ.

ಈ ವೇಳೆ ಆಪ್ ನ ರಾಜ್ಯ ಕಾರ್ಯದರ್ಶಿ ಸುರೇಶ್ ರಾಥೋಡ್,ಜಂಟಿ ಕಾರ್ಯದರ್ಶಿ ಬಿ.ಕೆ.ಶಿವಪ್ಪ, ರಾಥೊಡ್ , ದೀಪಕ್ ಮತ್ತು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

1 hour ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

18 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

20 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

20 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

20 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

23 hours ago