ಆಮಿಷಕ್ಕೆ ಒಳಗಾಗಿ ತಮ್ಮ ಮತ ಮಾರಾಟ ಮಾಡಬೇಡಿ- ಎಎಪಿ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ

ನಾವು ಕಟ್ಟುತ್ತಿರುವ ತೆರಿಗೆ ಹಣ ನಮ್ಮ ಜೇಬಿಗೆ ವಾಪಾಸ್ ಬರಬೇಕಾದರೇ ಈ ಬಾರಿ ವಿಧಾನಸಭಾ ಚುನಾವಣೆ ಆಪ್ ಚುನಾವಣೆ ಆಗಬಾರದು, ಒಬ್ಬ ಅಭ್ಯರ್ಥಿ ಚುನಾವಣೆ ಆಗಬಾರದು, ಪ್ರತಿ ಮನೆಯ ಚುನಾವಣೆ ಇದಾಗಬೇಕು ಆಗಷ್ಟೆ ಬದಲಾವಣೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ ಹೇಳಿದರು.

ನಗರದ ಆಪ್ ಕಛೇರಿಯಲ್ಲಿ ಪದಾಧಿಕಾರಿಗಳ ಆಯ್ಕೆ ಮತ್ತು ಬೈಕ್ ರ್ಯಾಲಿ ಕುರಿತು ಗುರುವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು, ದೆಹಲಿ ಚುನಾವಣೆಯಲ್ಲಿ ಹಿಂದು ಮುಸ್ಲಿಂ, ದಲಿತ, ಬ್ರಾಹ್ಮಣ, ಜಾತಿ, ಧರ್ಮ, ಭಾಷೆ ಎಲ್ಲಾ ಬಿಟ್ಟು ಒಂದಾದ ಮೇಲೆ 70 ಕ್ಷೇತ್ರಗಳಲ್ಲಿ ಗಳಿಗೆ 62 ಕ್ಷೇತ್ರದಲ್ಲಿ ಜಯಗಳಿಸಿ ದೆಹಲಿ ಗದ್ದುಗೆ‌ ಏರಲು ಸಹಕಾರಿಯಾಯಿತು.

ಆಪ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಲಿನ ಪ್ರತಿ ಮನೆಗೂ ಉಚಿತ ಮತ್ತು ಉತ್ತಮವಾದ ಆರೋಗ್ಯ, ಶಿಕ್ಷಣ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ವಿದ್ಯುತ್, ನೀರು, ಲೈಸೆನ್ಸ್ , ಹೀಗೆ ಹಲವು ಸೌಲಭ್ಯಗಳನ್ನು ಪಡೆಯಲು ಜನ ಕಛೇರಿ ಅಲೆದಾಟ ಇಲ್ಲ ಪ್ರತಿ ತಿಂಗಳು 10 ರಿಂದ 12 ಸಾವಿರ ಉಳಿತಾಯ ಪ್ರಾರಂಭವಾಗಿದೆ,

ನಾಲಾಯಕ್ ಕಾಂಗ್ರೆಸ್,ಜೆಡಿಎಸ್ ಪಕ್ಷ ಇಷ್ಟು ಅವಕಾಶ ನೀಡಿದ್ದೆವು ಇವರು ಯಾಕೆ‌ ಮಾಡಿಲ್ಲ, ಸದ್ಯ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆ‌ ಇವರ ಕೈಲಿ ಯಾಕೆ ಮಾಡೊಕೆ ಆಗ್ತಾ ಇಲ್ಲ ಇದನ್ನು ರಾಜ್ಯದ ಜನತೆ ಯೋಚಿಸಬೇಕು ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಪುರುಷೋತ್ತಮ್ ಮಾತನಾಡಿ, ನಮ್ಮ ಪಕ್ಷ ಇತರೇ ಪಕ್ಷಗಳಂತೆ ಯಾವುದೇ ಆಮಿಷಗಳನ್ನು ಕೊಡುವುದಿಲ್ಲ, ಅರವಿಂದ್ ಕೇಜ್ರಿವಾಲ್ ಆದೇಶದಂತೆ ಪ್ರತಿ ಮನೆಗೂ ವಿದ್ಯೆ,ಆರೋಗ್ಯ ಮತ್ತು ನೆಮ್ಮದಿ ಅಂದೋಲನವನ್ನು ಮಾಡುತ್ತ ಹೋದರೇ ಜನಗಳೇ ಅರ್ಥ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ,

ಈಗ ತಾಲ್ಲೂಕಿನಾದ್ಯಂತ ದೇವಾಲಯಗಳಿಗೆ ಪ್ರವಾಸ, ಉಚಿತ ಸೀರೆ, ಕುಕ್ಕರ್ ಆಮಿಷಗಳಿಗೆ ಜನರು ಮರುಳಾಗುವುದಿಲ್ಲ ಮತ್ತು ಇವರ ಆಟ ಹೆಚ್ಚು ದಿನ ನಡೆಯುವುದಿಲ್ಲ, ಮತದಾರರು ಜಾಗೃತರಾಗಿದ್ದೂ ತಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳದಿರಿ ಸೂಕ್ತ ವ್ಯಕ್ತಿಯನ್ನು ಆಯ್ಕೆ‌ ಮಾಡಿ ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಪದಾಧಿಕಾರಿಗಳು :
ತಾಲ್ಲೂಕು ಅಧ್ಯಕ್ಷರಾಗಿ ಜೆ.ಹರೀಶ್, ಉಪಾಧ್ಯಕ್ಷ ಇರ್ಫಾನ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಕೃಷ್ಣಮೂರ್ತಿ, ಕಾರ್ಯದರ್ಶಿ ಸುರೇಶ್,ಶೋಯೇಬ್ ಖಾನ್, ನರೇಂದ್ರಮೂರ್ತಿ, ವೀರಭದ್ರಯ್ಯ ಆಯ್ಕೆಯಾಗಿದ್ದಾರೆ.

ಈ ವೇಳೆ ಆಪ್ ನ ರಾಜ್ಯ ಕಾರ್ಯದರ್ಶಿ ಸುರೇಶ್ ರಾಥೋಡ್,ಜಂಟಿ ಕಾರ್ಯದರ್ಶಿ ಬಿ.ಕೆ.ಶಿವಪ್ಪ, ರಾಥೊಡ್ , ದೀಪಕ್ ಮತ್ತು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

7 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

13 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

14 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago