ಆಮಿಷಕ್ಕೆ ಒಳಗಾಗಿ ತಮ್ಮ ಮತ ಮಾರಾಟ ಮಾಡಬೇಡಿ- ಎಎಪಿ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ

ನಾವು ಕಟ್ಟುತ್ತಿರುವ ತೆರಿಗೆ ಹಣ ನಮ್ಮ ಜೇಬಿಗೆ ವಾಪಾಸ್ ಬರಬೇಕಾದರೇ ಈ ಬಾರಿ ವಿಧಾನಸಭಾ ಚುನಾವಣೆ ಆಪ್ ಚುನಾವಣೆ ಆಗಬಾರದು, ಒಬ್ಬ ಅಭ್ಯರ್ಥಿ ಚುನಾವಣೆ ಆಗಬಾರದು, ಪ್ರತಿ ಮನೆಯ ಚುನಾವಣೆ ಇದಾಗಬೇಕು ಆಗಷ್ಟೆ ಬದಲಾವಣೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ ಹೇಳಿದರು.

ನಗರದ ಆಪ್ ಕಛೇರಿಯಲ್ಲಿ ಪದಾಧಿಕಾರಿಗಳ ಆಯ್ಕೆ ಮತ್ತು ಬೈಕ್ ರ್ಯಾಲಿ ಕುರಿತು ಗುರುವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು, ದೆಹಲಿ ಚುನಾವಣೆಯಲ್ಲಿ ಹಿಂದು ಮುಸ್ಲಿಂ, ದಲಿತ, ಬ್ರಾಹ್ಮಣ, ಜಾತಿ, ಧರ್ಮ, ಭಾಷೆ ಎಲ್ಲಾ ಬಿಟ್ಟು ಒಂದಾದ ಮೇಲೆ 70 ಕ್ಷೇತ್ರಗಳಲ್ಲಿ ಗಳಿಗೆ 62 ಕ್ಷೇತ್ರದಲ್ಲಿ ಜಯಗಳಿಸಿ ದೆಹಲಿ ಗದ್ದುಗೆ‌ ಏರಲು ಸಹಕಾರಿಯಾಯಿತು.

ಆಪ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಲಿನ ಪ್ರತಿ ಮನೆಗೂ ಉಚಿತ ಮತ್ತು ಉತ್ತಮವಾದ ಆರೋಗ್ಯ, ಶಿಕ್ಷಣ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ವಿದ್ಯುತ್, ನೀರು, ಲೈಸೆನ್ಸ್ , ಹೀಗೆ ಹಲವು ಸೌಲಭ್ಯಗಳನ್ನು ಪಡೆಯಲು ಜನ ಕಛೇರಿ ಅಲೆದಾಟ ಇಲ್ಲ ಪ್ರತಿ ತಿಂಗಳು 10 ರಿಂದ 12 ಸಾವಿರ ಉಳಿತಾಯ ಪ್ರಾರಂಭವಾಗಿದೆ,

ನಾಲಾಯಕ್ ಕಾಂಗ್ರೆಸ್,ಜೆಡಿಎಸ್ ಪಕ್ಷ ಇಷ್ಟು ಅವಕಾಶ ನೀಡಿದ್ದೆವು ಇವರು ಯಾಕೆ‌ ಮಾಡಿಲ್ಲ, ಸದ್ಯ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆ‌ ಇವರ ಕೈಲಿ ಯಾಕೆ ಮಾಡೊಕೆ ಆಗ್ತಾ ಇಲ್ಲ ಇದನ್ನು ರಾಜ್ಯದ ಜನತೆ ಯೋಚಿಸಬೇಕು ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಪುರುಷೋತ್ತಮ್ ಮಾತನಾಡಿ, ನಮ್ಮ ಪಕ್ಷ ಇತರೇ ಪಕ್ಷಗಳಂತೆ ಯಾವುದೇ ಆಮಿಷಗಳನ್ನು ಕೊಡುವುದಿಲ್ಲ, ಅರವಿಂದ್ ಕೇಜ್ರಿವಾಲ್ ಆದೇಶದಂತೆ ಪ್ರತಿ ಮನೆಗೂ ವಿದ್ಯೆ,ಆರೋಗ್ಯ ಮತ್ತು ನೆಮ್ಮದಿ ಅಂದೋಲನವನ್ನು ಮಾಡುತ್ತ ಹೋದರೇ ಜನಗಳೇ ಅರ್ಥ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ,

ಈಗ ತಾಲ್ಲೂಕಿನಾದ್ಯಂತ ದೇವಾಲಯಗಳಿಗೆ ಪ್ರವಾಸ, ಉಚಿತ ಸೀರೆ, ಕುಕ್ಕರ್ ಆಮಿಷಗಳಿಗೆ ಜನರು ಮರುಳಾಗುವುದಿಲ್ಲ ಮತ್ತು ಇವರ ಆಟ ಹೆಚ್ಚು ದಿನ ನಡೆಯುವುದಿಲ್ಲ, ಮತದಾರರು ಜಾಗೃತರಾಗಿದ್ದೂ ತಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳದಿರಿ ಸೂಕ್ತ ವ್ಯಕ್ತಿಯನ್ನು ಆಯ್ಕೆ‌ ಮಾಡಿ ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಪದಾಧಿಕಾರಿಗಳು :
ತಾಲ್ಲೂಕು ಅಧ್ಯಕ್ಷರಾಗಿ ಜೆ.ಹರೀಶ್, ಉಪಾಧ್ಯಕ್ಷ ಇರ್ಫಾನ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಕೃಷ್ಣಮೂರ್ತಿ, ಕಾರ್ಯದರ್ಶಿ ಸುರೇಶ್,ಶೋಯೇಬ್ ಖಾನ್, ನರೇಂದ್ರಮೂರ್ತಿ, ವೀರಭದ್ರಯ್ಯ ಆಯ್ಕೆಯಾಗಿದ್ದಾರೆ.

ಈ ವೇಳೆ ಆಪ್ ನ ರಾಜ್ಯ ಕಾರ್ಯದರ್ಶಿ ಸುರೇಶ್ ರಾಥೋಡ್,ಜಂಟಿ ಕಾರ್ಯದರ್ಶಿ ಬಿ.ಕೆ.ಶಿವಪ್ಪ, ರಾಥೊಡ್ , ದೀಪಕ್ ಮತ್ತು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

9 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

9 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

10 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

10 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

12 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

16 hours ago