ಆಮಿಷಕ್ಕೆ ಒಳಗಾಗಿ ತಮ್ಮ ಮತ ಮಾರಾಟ ಮಾಡಬೇಡಿ- ಎಎಪಿ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ

ನಾವು ಕಟ್ಟುತ್ತಿರುವ ತೆರಿಗೆ ಹಣ ನಮ್ಮ ಜೇಬಿಗೆ ವಾಪಾಸ್ ಬರಬೇಕಾದರೇ ಈ ಬಾರಿ ವಿಧಾನಸಭಾ ಚುನಾವಣೆ ಆಪ್ ಚುನಾವಣೆ ಆಗಬಾರದು, ಒಬ್ಬ ಅಭ್ಯರ್ಥಿ ಚುನಾವಣೆ ಆಗಬಾರದು, ಪ್ರತಿ ಮನೆಯ ಚುನಾವಣೆ ಇದಾಗಬೇಕು ಆಗಷ್ಟೆ ಬದಲಾವಣೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ ಹೇಳಿದರು.

ನಗರದ ಆಪ್ ಕಛೇರಿಯಲ್ಲಿ ಪದಾಧಿಕಾರಿಗಳ ಆಯ್ಕೆ ಮತ್ತು ಬೈಕ್ ರ್ಯಾಲಿ ಕುರಿತು ಗುರುವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು, ದೆಹಲಿ ಚುನಾವಣೆಯಲ್ಲಿ ಹಿಂದು ಮುಸ್ಲಿಂ, ದಲಿತ, ಬ್ರಾಹ್ಮಣ, ಜಾತಿ, ಧರ್ಮ, ಭಾಷೆ ಎಲ್ಲಾ ಬಿಟ್ಟು ಒಂದಾದ ಮೇಲೆ 70 ಕ್ಷೇತ್ರಗಳಲ್ಲಿ ಗಳಿಗೆ 62 ಕ್ಷೇತ್ರದಲ್ಲಿ ಜಯಗಳಿಸಿ ದೆಹಲಿ ಗದ್ದುಗೆ‌ ಏರಲು ಸಹಕಾರಿಯಾಯಿತು.

ಆಪ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಲಿನ ಪ್ರತಿ ಮನೆಗೂ ಉಚಿತ ಮತ್ತು ಉತ್ತಮವಾದ ಆರೋಗ್ಯ, ಶಿಕ್ಷಣ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ವಿದ್ಯುತ್, ನೀರು, ಲೈಸೆನ್ಸ್ , ಹೀಗೆ ಹಲವು ಸೌಲಭ್ಯಗಳನ್ನು ಪಡೆಯಲು ಜನ ಕಛೇರಿ ಅಲೆದಾಟ ಇಲ್ಲ ಪ್ರತಿ ತಿಂಗಳು 10 ರಿಂದ 12 ಸಾವಿರ ಉಳಿತಾಯ ಪ್ರಾರಂಭವಾಗಿದೆ,

ನಾಲಾಯಕ್ ಕಾಂಗ್ರೆಸ್,ಜೆಡಿಎಸ್ ಪಕ್ಷ ಇಷ್ಟು ಅವಕಾಶ ನೀಡಿದ್ದೆವು ಇವರು ಯಾಕೆ‌ ಮಾಡಿಲ್ಲ, ಸದ್ಯ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆ‌ ಇವರ ಕೈಲಿ ಯಾಕೆ ಮಾಡೊಕೆ ಆಗ್ತಾ ಇಲ್ಲ ಇದನ್ನು ರಾಜ್ಯದ ಜನತೆ ಯೋಚಿಸಬೇಕು ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಪುರುಷೋತ್ತಮ್ ಮಾತನಾಡಿ, ನಮ್ಮ ಪಕ್ಷ ಇತರೇ ಪಕ್ಷಗಳಂತೆ ಯಾವುದೇ ಆಮಿಷಗಳನ್ನು ಕೊಡುವುದಿಲ್ಲ, ಅರವಿಂದ್ ಕೇಜ್ರಿವಾಲ್ ಆದೇಶದಂತೆ ಪ್ರತಿ ಮನೆಗೂ ವಿದ್ಯೆ,ಆರೋಗ್ಯ ಮತ್ತು ನೆಮ್ಮದಿ ಅಂದೋಲನವನ್ನು ಮಾಡುತ್ತ ಹೋದರೇ ಜನಗಳೇ ಅರ್ಥ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ,

ಈಗ ತಾಲ್ಲೂಕಿನಾದ್ಯಂತ ದೇವಾಲಯಗಳಿಗೆ ಪ್ರವಾಸ, ಉಚಿತ ಸೀರೆ, ಕುಕ್ಕರ್ ಆಮಿಷಗಳಿಗೆ ಜನರು ಮರುಳಾಗುವುದಿಲ್ಲ ಮತ್ತು ಇವರ ಆಟ ಹೆಚ್ಚು ದಿನ ನಡೆಯುವುದಿಲ್ಲ, ಮತದಾರರು ಜಾಗೃತರಾಗಿದ್ದೂ ತಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳದಿರಿ ಸೂಕ್ತ ವ್ಯಕ್ತಿಯನ್ನು ಆಯ್ಕೆ‌ ಮಾಡಿ ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಪದಾಧಿಕಾರಿಗಳು :
ತಾಲ್ಲೂಕು ಅಧ್ಯಕ್ಷರಾಗಿ ಜೆ.ಹರೀಶ್, ಉಪಾಧ್ಯಕ್ಷ ಇರ್ಫಾನ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಕೃಷ್ಣಮೂರ್ತಿ, ಕಾರ್ಯದರ್ಶಿ ಸುರೇಶ್,ಶೋಯೇಬ್ ಖಾನ್, ನರೇಂದ್ರಮೂರ್ತಿ, ವೀರಭದ್ರಯ್ಯ ಆಯ್ಕೆಯಾಗಿದ್ದಾರೆ.

ಈ ವೇಳೆ ಆಪ್ ನ ರಾಜ್ಯ ಕಾರ್ಯದರ್ಶಿ ಸುರೇಶ್ ರಾಥೋಡ್,ಜಂಟಿ ಕಾರ್ಯದರ್ಶಿ ಬಿ.ಕೆ.ಶಿವಪ್ಪ, ರಾಥೊಡ್ , ದೀಪಕ್ ಮತ್ತು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

36 minutes ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

4 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

12 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

13 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago