ಆಮಿಷಕ್ಕೆ ಒಳಗಾಗಿ ತಮ್ಮ ಮತ ಮಾರಾಟ ಮಾಡಬೇಡಿ- ಎಎಪಿ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ

ನಾವು ಕಟ್ಟುತ್ತಿರುವ ತೆರಿಗೆ ಹಣ ನಮ್ಮ ಜೇಬಿಗೆ ವಾಪಾಸ್ ಬರಬೇಕಾದರೇ ಈ ಬಾರಿ ವಿಧಾನಸಭಾ ಚುನಾವಣೆ ಆಪ್ ಚುನಾವಣೆ ಆಗಬಾರದು, ಒಬ್ಬ ಅಭ್ಯರ್ಥಿ ಚುನಾವಣೆ ಆಗಬಾರದು, ಪ್ರತಿ ಮನೆಯ ಚುನಾವಣೆ ಇದಾಗಬೇಕು ಆಗಷ್ಟೆ ಬದಲಾವಣೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ ಹೇಳಿದರು.

ನಗರದ ಆಪ್ ಕಛೇರಿಯಲ್ಲಿ ಪದಾಧಿಕಾರಿಗಳ ಆಯ್ಕೆ ಮತ್ತು ಬೈಕ್ ರ್ಯಾಲಿ ಕುರಿತು ಗುರುವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು, ದೆಹಲಿ ಚುನಾವಣೆಯಲ್ಲಿ ಹಿಂದು ಮುಸ್ಲಿಂ, ದಲಿತ, ಬ್ರಾಹ್ಮಣ, ಜಾತಿ, ಧರ್ಮ, ಭಾಷೆ ಎಲ್ಲಾ ಬಿಟ್ಟು ಒಂದಾದ ಮೇಲೆ 70 ಕ್ಷೇತ್ರಗಳಲ್ಲಿ ಗಳಿಗೆ 62 ಕ್ಷೇತ್ರದಲ್ಲಿ ಜಯಗಳಿಸಿ ದೆಹಲಿ ಗದ್ದುಗೆ‌ ಏರಲು ಸಹಕಾರಿಯಾಯಿತು.

ಆಪ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಲಿನ ಪ್ರತಿ ಮನೆಗೂ ಉಚಿತ ಮತ್ತು ಉತ್ತಮವಾದ ಆರೋಗ್ಯ, ಶಿಕ್ಷಣ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ವಿದ್ಯುತ್, ನೀರು, ಲೈಸೆನ್ಸ್ , ಹೀಗೆ ಹಲವು ಸೌಲಭ್ಯಗಳನ್ನು ಪಡೆಯಲು ಜನ ಕಛೇರಿ ಅಲೆದಾಟ ಇಲ್ಲ ಪ್ರತಿ ತಿಂಗಳು 10 ರಿಂದ 12 ಸಾವಿರ ಉಳಿತಾಯ ಪ್ರಾರಂಭವಾಗಿದೆ,

ನಾಲಾಯಕ್ ಕಾಂಗ್ರೆಸ್,ಜೆಡಿಎಸ್ ಪಕ್ಷ ಇಷ್ಟು ಅವಕಾಶ ನೀಡಿದ್ದೆವು ಇವರು ಯಾಕೆ‌ ಮಾಡಿಲ್ಲ, ಸದ್ಯ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆ‌ ಇವರ ಕೈಲಿ ಯಾಕೆ ಮಾಡೊಕೆ ಆಗ್ತಾ ಇಲ್ಲ ಇದನ್ನು ರಾಜ್ಯದ ಜನತೆ ಯೋಚಿಸಬೇಕು ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಪುರುಷೋತ್ತಮ್ ಮಾತನಾಡಿ, ನಮ್ಮ ಪಕ್ಷ ಇತರೇ ಪಕ್ಷಗಳಂತೆ ಯಾವುದೇ ಆಮಿಷಗಳನ್ನು ಕೊಡುವುದಿಲ್ಲ, ಅರವಿಂದ್ ಕೇಜ್ರಿವಾಲ್ ಆದೇಶದಂತೆ ಪ್ರತಿ ಮನೆಗೂ ವಿದ್ಯೆ,ಆರೋಗ್ಯ ಮತ್ತು ನೆಮ್ಮದಿ ಅಂದೋಲನವನ್ನು ಮಾಡುತ್ತ ಹೋದರೇ ಜನಗಳೇ ಅರ್ಥ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ,

ಈಗ ತಾಲ್ಲೂಕಿನಾದ್ಯಂತ ದೇವಾಲಯಗಳಿಗೆ ಪ್ರವಾಸ, ಉಚಿತ ಸೀರೆ, ಕುಕ್ಕರ್ ಆಮಿಷಗಳಿಗೆ ಜನರು ಮರುಳಾಗುವುದಿಲ್ಲ ಮತ್ತು ಇವರ ಆಟ ಹೆಚ್ಚು ದಿನ ನಡೆಯುವುದಿಲ್ಲ, ಮತದಾರರು ಜಾಗೃತರಾಗಿದ್ದೂ ತಮ್ಮ ಮತಗಳನ್ನು ಹಣಕ್ಕಾಗಿ ಮಾರಿಕೊಳ್ಳದಿರಿ ಸೂಕ್ತ ವ್ಯಕ್ತಿಯನ್ನು ಆಯ್ಕೆ‌ ಮಾಡಿ ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಪದಾಧಿಕಾರಿಗಳು :
ತಾಲ್ಲೂಕು ಅಧ್ಯಕ್ಷರಾಗಿ ಜೆ.ಹರೀಶ್, ಉಪಾಧ್ಯಕ್ಷ ಇರ್ಫಾನ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಕೃಷ್ಣಮೂರ್ತಿ, ಕಾರ್ಯದರ್ಶಿ ಸುರೇಶ್,ಶೋಯೇಬ್ ಖಾನ್, ನರೇಂದ್ರಮೂರ್ತಿ, ವೀರಭದ್ರಯ್ಯ ಆಯ್ಕೆಯಾಗಿದ್ದಾರೆ.

ಈ ವೇಳೆ ಆಪ್ ನ ರಾಜ್ಯ ಕಾರ್ಯದರ್ಶಿ ಸುರೇಶ್ ರಾಥೋಡ್,ಜಂಟಿ ಕಾರ್ಯದರ್ಶಿ ಬಿ.ಕೆ.ಶಿವಪ್ಪ, ರಾಥೊಡ್ , ದೀಪಕ್ ಮತ್ತು ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

6 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

12 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

16 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

19 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago