ಆಯತಪ್ಪಿ ಚರಂಡಿಗೆ ಬಿದ್ದ ಹಸು: ಸುರಕ್ಷಿತವಾಗಿ ಮೇಲೆ ತೆಗೆದ ಅಗ್ನಿಶಾಮಕ‌ ಸಿಬ್ಬಂದಿ

ಮನೆಯ‌ ಮುಂದೆ‌ ನೀರು ಕುಡಿಯಲು ಹೋದ ಹಸುವೊಂದು ಆಯತಪ್ಪಿ ಚರಂಡಿಗೆ ಬಿದ್ದ ಘಟನೆ ನಗರದ ರೈಲ್ವೆ ನಿಲ್ದಾಣದ ಎಂ.ಎ.ಪ್ರಕಾಶ್ ಲೇಔಟ್ 1ನೇ ಮುಖ್ಯರಸ್ತೆಯಲ್ಲಿ‌ ನಡೆದಿದೆ.

ಇಲ್ಲಿನ‌ ವೆಂಕಟೇಶ್ ಎಂಬುವರ ಹಸು ಚರಂಡಿಗೆ ಬಿದ್ದು ಸಿಕ್ಕಿಹಾಕಿಕೊಂಡಿತ್ತು. ಚರಂಡಿ‌ ಕಿರಿದಾಗಿದ್ದ ಕಾರಣ ಹಸು‌ ಮೇಲೆಳಲು ಸಾಧ್ಯವಾಗಲಿಲ್ಲ. ಕೂಡಲೇ ಸ್ಥಳೀಯರು ಅಗ್ನಿಶಾಮಕ‌ ದಳದ ಸಿಬ್ಬಂದಿಗೆ ಕರೆ‌ಮಾಡಿ‌ ಮಾಹಿತಿ‌ ನೀಡಿದರು.

ಸ್ಥಳಕ್ಕೆ ಬಂದ ಅಗ್ನಿಶಾಮಕ‌ ಸಿಬ್ಬಂದಿ ಹಗ್ಗ ಹಾಗೂ ಓಸ್ ಪೈಪ್ ಗಳ ಮೂಲಕ ಹಸುವನ್ನು ಸುರಕ್ಷಿತವಾಗಿ ಮೇಲೆ ತೆಗೆದರು. ರಕ್ಷಣಾ ಕಾರ್ಯಾಚರಣೆ ವೇಳೆ ಹಸುವಿಗೆ ಸಣ್ಣಪುಟ್ಟ ಗಾಯಗಳಾದವು. ಪಶುವೈದ್ಯರನ್ನು ಕರೆಸಿ‌ ಚಿಕಿತ್ಸೆ ಕೊಡಿಸಲಾಯಿತು.

ಚರಂಡಿಗಳ ಮೇಲೆ‌ ಸ್ಲ್ಯಾಬ್ ಅಳವಡಿಸಿದ ಕಾರಣ ಈ ರೀತಿಯ ಘಟನೆಗಳು ಸಂಭವಿಸುತ್ತಿವೆ. ಕೂಡಲೇ ನಗರಸಭೆಯವರು ಚರಂಡಿಗಳಿಗೆ ಸ್ಲ್ಯಾಬ್ ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

2 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

2 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

14 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago