ಚಾಮರಾಜನಗರದ ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ರವೀಶ್ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ ದರ್ಶನ್, ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅಸಲಿಯತ್ತು ಬಯಲಾಗಿದೆ. ಮದುವೆ ನಿಲ್ಲಿಸಲು ಪ್ರಿಯಕರನ ಜೊತೆ ಸೇರಿ ನಯನಾ (ರವೀಶ್ನ ಮದ್ವೆಯಾಗಬೇಕಿದ್ದ ಯುವತಿ) ಈ ರೀತಿ ಪ್ಲ್ಯಾನ್ ಮಾಡಿದ್ದಾಳೆ ಎನ್ನುವುದು ಕೊಳ್ಳೇಗಾಲ ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿದೆ.
ತಮಟೆ ಹೊಡೆಯುವ ಕೆಲಸ ಮಾಡ್ತಿದ್ದ ದರ್ಶನ್ ಎನ್ನುವಾತನನ್ನು ನಯನಾ ಲವ್ ಮಾಡುತ್ತಿದ್ದಳು. ಆದ್ರೆ, ದರ್ಶನ್ ಕೆಲಸದ ಬಗ್ಗೆ ಮನೆಯಲ್ಲಿ ಹೇಳಲು ಹೆದರಿದ್ದಳು. ಹೀಗಾಗಿ ಈ ಮದುವೆ ನೀನೇ ನಿಲ್ಲಿಸು ಎಂದು ನಯನಾ, ಪ್ರಿಯಕರ ದರ್ಶನ್ಗೆ ಹೇಳಿದ್ದಳು.
ಅದರಂತೆ ಪ್ರಿಯಕರ ದರ್ಶನ್ ಗ್ಯಾಂಗ್, ಜನವರಿ 27ರಂದು ರವೀಶ್ ಕೊಳ್ಳೇಗಾಲದ ಕಲ್ಯಾಣ ಮಂಟಪ್ಪಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆಯೇ ಕಾರು ಅಡ್ಡಗಟ್ಟಿದ್ದು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್ನಿಂದ ಹಲ್ಲೆ ಪರಾರಿಯಾಗಿತ್ತು.
ಬಳಿಕ ರವೀಶ್ ದಾಖಲಾಗಿದ್ದ ಆಸ್ಪತ್ರೆಗೆ ನಯನಾ ಬಂದು ತನ್ನ ಮದುವೆಯಾಗು ಎಂದು ನಾಟಕವಾಡಿದ್ದಳು. ಆದಾಗಲೇ ರವೀಶ್ಗೂ ಸಹ ಅನುಮಾನ ಬಂದಿದ್ದರಿಂದ ನಯನಾಳನ್ನು ಮದುವೆಯಾಗಲು ನಿರಾಕರಿಸಿದ್ದ. ಇದೀಗ ನಯನಾಳ ಅಸಲಿ ನೌಟಂಕಿ ಆಟ ಬಯಲಾಗಿದೆ.
ದೊಡ್ಡಬಳ್ಳಾಪುರದ ತೇರಿನ ಬೀದಿಯಲ್ಲಿ ಪ್ರಸನ್ನ ಲಕ್ಷ್ಮಿವೆಂಕಟರಮಣ ರಥೋತ್ಸವ ಫೆ.3ರ ಮಂಗಳವಾರ ಅದ್ಧೂರಿಯಾಗಿ ನಡೆಯಿತು. ರಥೋತ್ಸವ ಅಂಗವಾಗಿ ಸಹ್ಯಾದ್ರಿ ಆಸ್ಪತ್ರೆ ವತಿಯಿಂದ…
ರೈತರಿಗೆ ಗುಡ್ ನ್ಯೂಸ್: 'ಪಿ' ನಂಬರ್ ಜಮೀನುಗಳಿಗೆ ಪೋಡಿ ಭಾಗ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಲಾಗಿದೆ. ಬೆಂಗಳೂರು…
ಇಲ್ಲಿದೆ ನೋಡಿ ಕೆಲವು ಕುತೂಹಲಕರ ಅಂಕಿಅಂಶಗಳು ಮತ್ತು ನಮ್ಮ ದೇಶದ ರಿಪೋರ್ಟ್ ಕಾರ್ಡ್..... ಇದು ಪಕ್ಷಾತೀವಾಗಿ ದೇಶದ ವಾಸ್ತವ ಪರಿಸ್ಥಿತಿ...............…
ಯುವ ಕಾಂಗ್ರೆಸ್ ಸಮಿತಿಯ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್.ವಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್,…
ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್, ಮುಖಂಡರು, ಕಾರ್ಯಕರ್ತರು,…
ಬೆಂಗಳೂರು , ವೈಟ್ಫೀಲ್ದ್ - 48 ವರ್ಷದ ಉನ್ನಿಕೃಷ್ಣನ್ ಅವರ ಜೀವನ ಹಲವು ವರ್ಷಗಳಿಂದ ಡಯಾಲಿಸಿಸ್, ಔಷಧ ಮತ್ತುಬದುಕುವ ನಿರೀಕ್ಷೆಯಲ್ಲೇ…