ಚಾಮರಾಜನಗರದ ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ರವೀಶ್ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ ದರ್ಶನ್, ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅಸಲಿಯತ್ತು ಬಯಲಾಗಿದೆ. ಮದುವೆ ನಿಲ್ಲಿಸಲು ಪ್ರಿಯಕರನ ಜೊತೆ ಸೇರಿ ನಯನಾ (ರವೀಶ್ನ ಮದ್ವೆಯಾಗಬೇಕಿದ್ದ ಯುವತಿ) ಈ ರೀತಿ ಪ್ಲ್ಯಾನ್ ಮಾಡಿದ್ದಾಳೆ ಎನ್ನುವುದು ಕೊಳ್ಳೇಗಾಲ ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿದೆ.
ತಮಟೆ ಹೊಡೆಯುವ ಕೆಲಸ ಮಾಡ್ತಿದ್ದ ದರ್ಶನ್ ಎನ್ನುವಾತನನ್ನು ನಯನಾ ಲವ್ ಮಾಡುತ್ತಿದ್ದಳು. ಆದ್ರೆ, ದರ್ಶನ್ ಕೆಲಸದ ಬಗ್ಗೆ ಮನೆಯಲ್ಲಿ ಹೇಳಲು ಹೆದರಿದ್ದಳು. ಹೀಗಾಗಿ ಈ ಮದುವೆ ನೀನೇ ನಿಲ್ಲಿಸು ಎಂದು ನಯನಾ, ಪ್ರಿಯಕರ ದರ್ಶನ್ಗೆ ಹೇಳಿದ್ದಳು.
ಅದರಂತೆ ಪ್ರಿಯಕರ ದರ್ಶನ್ ಗ್ಯಾಂಗ್, ಜನವರಿ 27ರಂದು ರವೀಶ್ ಕೊಳ್ಳೇಗಾಲದ ಕಲ್ಯಾಣ ಮಂಟಪ್ಪಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆಯೇ ಕಾರು ಅಡ್ಡಗಟ್ಟಿದ್ದು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್ನಿಂದ ಹಲ್ಲೆ ಪರಾರಿಯಾಗಿತ್ತು.
ಬಳಿಕ ರವೀಶ್ ದಾಖಲಾಗಿದ್ದ ಆಸ್ಪತ್ರೆಗೆ ನಯನಾ ಬಂದು ತನ್ನ ಮದುವೆಯಾಗು ಎಂದು ನಾಟಕವಾಡಿದ್ದಳು. ಆದಾಗಲೇ ರವೀಶ್ಗೂ ಸಹ ಅನುಮಾನ ಬಂದಿದ್ದರಿಂದ ನಯನಾಳನ್ನು ಮದುವೆಯಾಗಲು ನಿರಾಕರಿಸಿದ್ದ. ಇದೀಗ ನಯನಾಳ ಅಸಲಿ ನೌಟಂಕಿ ಆಟ ಬಯಲಾಗಿದೆ.
ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…