ಚಾಮರಾಜನಗರದ ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ರವೀಶ್ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ ದರ್ಶನ್, ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅಸಲಿಯತ್ತು ಬಯಲಾಗಿದೆ. ಮದುವೆ ನಿಲ್ಲಿಸಲು ಪ್ರಿಯಕರನ ಜೊತೆ ಸೇರಿ ನಯನಾ (ರವೀಶ್ನ ಮದ್ವೆಯಾಗಬೇಕಿದ್ದ ಯುವತಿ) ಈ ರೀತಿ ಪ್ಲ್ಯಾನ್ ಮಾಡಿದ್ದಾಳೆ ಎನ್ನುವುದು ಕೊಳ್ಳೇಗಾಲ ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿದೆ.
ತಮಟೆ ಹೊಡೆಯುವ ಕೆಲಸ ಮಾಡ್ತಿದ್ದ ದರ್ಶನ್ ಎನ್ನುವಾತನನ್ನು ನಯನಾ ಲವ್ ಮಾಡುತ್ತಿದ್ದಳು. ಆದ್ರೆ, ದರ್ಶನ್ ಕೆಲಸದ ಬಗ್ಗೆ ಮನೆಯಲ್ಲಿ ಹೇಳಲು ಹೆದರಿದ್ದಳು. ಹೀಗಾಗಿ ಈ ಮದುವೆ ನೀನೇ ನಿಲ್ಲಿಸು ಎಂದು ನಯನಾ, ಪ್ರಿಯಕರ ದರ್ಶನ್ಗೆ ಹೇಳಿದ್ದಳು.
ಅದರಂತೆ ಪ್ರಿಯಕರ ದರ್ಶನ್ ಗ್ಯಾಂಗ್, ಜನವರಿ 27ರಂದು ರವೀಶ್ ಕೊಳ್ಳೇಗಾಲದ ಕಲ್ಯಾಣ ಮಂಟಪ್ಪಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆಯೇ ಕಾರು ಅಡ್ಡಗಟ್ಟಿದ್ದು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್ನಿಂದ ಹಲ್ಲೆ ಪರಾರಿಯಾಗಿತ್ತು.
ಬಳಿಕ ರವೀಶ್ ದಾಖಲಾಗಿದ್ದ ಆಸ್ಪತ್ರೆಗೆ ನಯನಾ ಬಂದು ತನ್ನ ಮದುವೆಯಾಗು ಎಂದು ನಾಟಕವಾಡಿದ್ದಳು. ಆದಾಗಲೇ ರವೀಶ್ಗೂ ಸಹ ಅನುಮಾನ ಬಂದಿದ್ದರಿಂದ ನಯನಾಳನ್ನು ಮದುವೆಯಾಗಲು ನಿರಾಕರಿಸಿದ್ದ. ಇದೀಗ ನಯನಾಳ ಅಸಲಿ ನೌಟಂಕಿ ಆಟ ಬಯಲಾಗಿದೆ.
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…