Categories: Crime

ಆರತಕ್ಷತೆಗೆ ತೆರಳುವಾಗ ಅಡ್ಡಗಟ್ಟಿ ವರನಿಗೆ ಚಾಕು ಇರಿತ ಕೇಸ್​​​ಗೆ ಬಿಗ್ ಟ್ವಿಸ್ಟ್​: ಮದ್ವೆಯಾಗಬೇಕಿದ್ದವಳೇ ವಿಲನ್.!

ಚಾಮರಾಜನಗರದ ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ.

ರವೀಶ್​​ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ ದರ್ಶನ್​, ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅಸಲಿಯತ್ತು ಬಯಲಾಗಿದೆ. ಮದುವೆ ನಿಲ್ಲಿಸಲು ಪ್ರಿಯಕರನ ಜೊತೆ ಸೇರಿ ನಯನಾ (ರವೀಶ್​​ನ ಮದ್ವೆಯಾಗಬೇಕಿದ್ದ ಯುವತಿ) ಈ ರೀತಿ ಪ್ಲ್ಯಾನ್ ಮಾಡಿದ್ದಾಳೆ ಎನ್ನುವುದು ಕೊಳ್ಳೇಗಾಲ ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿದೆ.​

ತಮಟೆ ಹೊಡೆಯುವ ಕೆಲಸ ಮಾಡ್ತಿದ್ದ ದರ್ಶನ್​ ಎನ್ನುವಾತನನ್ನು ನಯನಾ ಲವ್ ಮಾಡುತ್ತಿದ್ದಳು. ಆದ್ರೆ,​​ ದರ್ಶನ್ ಕೆಲಸದ ಬಗ್ಗೆ ಮನೆಯಲ್ಲಿ ಹೇಳಲು ಹೆದರಿದ್ದಳು. ಹೀಗಾಗಿ ಈ ಮದುವೆ ನೀನೇ ನಿಲ್ಲಿಸು ಎಂದು ನಯನಾ, ಪ್ರಿಯಕರ ದರ್ಶನ್​​ಗೆ ಹೇಳಿದ್ದಳು.

ಅದರಂತೆ ಪ್ರಿಯಕರ ದರ್ಶನ್ ಗ್ಯಾಂಗ್, ಜನವರಿ 27ರಂದು ರವೀಶ್ ಕೊಳ್ಳೇಗಾಲದ ಕಲ್ಯಾಣ ಮಂಟಪ್ಪಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆಯೇ ಕಾರು ಅಡ್ಡಗಟ್ಟಿದ್ದು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್​​ನಿಂದ ಹಲ್ಲೆ ಪರಾರಿಯಾಗಿತ್ತು.

ಬಳಿಕ ರವೀಶ್ ದಾಖಲಾಗಿದ್ದ ಆಸ್ಪತ್ರೆಗೆ ನಯನಾ ಬಂದು ತನ್ನ ಮದುವೆಯಾಗು ಎಂದು ನಾಟಕವಾಡಿದ್ದಳು. ಆದಾಗಲೇ ರವೀಶ್​​ಗೂ ಸಹ ಅನುಮಾನ ಬಂದಿದ್ದರಿಂದ ನಯನಾಳನ್ನು ಮದುವೆಯಾಗಲು ನಿರಾಕರಿಸಿದ್ದ. ಇದೀಗ ನಯನಾಳ ಅಸಲಿ ನೌಟಂಕಿ ಆಟ ಬಯಲಾಗಿದೆ.

Ramesh Babu

Journalist

Recent Posts

ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ

ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…

5 hours ago

ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

8 hours ago

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

19 hours ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

1 day ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

1 day ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

1 day ago