ಚಾಮರಾಜನಗರದ ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ರವೀಶ್ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ ದರ್ಶನ್, ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅಸಲಿಯತ್ತು ಬಯಲಾಗಿದೆ. ಮದುವೆ ನಿಲ್ಲಿಸಲು ಪ್ರಿಯಕರನ ಜೊತೆ ಸೇರಿ ನಯನಾ (ರವೀಶ್ನ ಮದ್ವೆಯಾಗಬೇಕಿದ್ದ ಯುವತಿ) ಈ ರೀತಿ ಪ್ಲ್ಯಾನ್ ಮಾಡಿದ್ದಾಳೆ ಎನ್ನುವುದು ಕೊಳ್ಳೇಗಾಲ ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿದೆ.
ತಮಟೆ ಹೊಡೆಯುವ ಕೆಲಸ ಮಾಡ್ತಿದ್ದ ದರ್ಶನ್ ಎನ್ನುವಾತನನ್ನು ನಯನಾ ಲವ್ ಮಾಡುತ್ತಿದ್ದಳು. ಆದ್ರೆ, ದರ್ಶನ್ ಕೆಲಸದ ಬಗ್ಗೆ ಮನೆಯಲ್ಲಿ ಹೇಳಲು ಹೆದರಿದ್ದಳು. ಹೀಗಾಗಿ ಈ ಮದುವೆ ನೀನೇ ನಿಲ್ಲಿಸು ಎಂದು ನಯನಾ, ಪ್ರಿಯಕರ ದರ್ಶನ್ಗೆ ಹೇಳಿದ್ದಳು.
ಅದರಂತೆ ಪ್ರಿಯಕರ ದರ್ಶನ್ ಗ್ಯಾಂಗ್, ಜನವರಿ 27ರಂದು ರವೀಶ್ ಕೊಳ್ಳೇಗಾಲದ ಕಲ್ಯಾಣ ಮಂಟಪ್ಪಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆಯೇ ಕಾರು ಅಡ್ಡಗಟ್ಟಿದ್ದು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್ನಿಂದ ಹಲ್ಲೆ ಪರಾರಿಯಾಗಿತ್ತು.
ಬಳಿಕ ರವೀಶ್ ದಾಖಲಾಗಿದ್ದ ಆಸ್ಪತ್ರೆಗೆ ನಯನಾ ಬಂದು ತನ್ನ ಮದುವೆಯಾಗು ಎಂದು ನಾಟಕವಾಡಿದ್ದಳು. ಆದಾಗಲೇ ರವೀಶ್ಗೂ ಸಹ ಅನುಮಾನ ಬಂದಿದ್ದರಿಂದ ನಯನಾಳನ್ನು ಮದುವೆಯಾಗಲು ನಿರಾಕರಿಸಿದ್ದ. ಇದೀಗ ನಯನಾಳ ಅಸಲಿ ನೌಟಂಕಿ ಆಟ ಬಯಲಾಗಿದೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…