ಆರತಿ ಹೊತ್ತ ದಲಿತ ಮಹಿಳೆಯರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ಆರೋಪ

ದೊಡ್ಡಬಳ್ಳಾಪುರ : ಭಾರತದಲ್ಲಿ ಇವತ್ತಿಗೂ ಅಸ್ಪೃಶ್ಯತೆ ಆಚರಣೆ ಜೀವಂತವಿದೆ. ಅದಕ್ಕೆ ಸಾಕ್ಷಿ ಅನ್ನುವಂತೆ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಲೇ ಇವೆ. ಕೊಪ್ಪಳದ ಮರಕುಂಬಿ ದಲಿತರ ದೌರ್ಜನ್ಯ ಪ್ರಕಣಕ್ಕೆ ಸಂಬಂಧಿಸಿದಂತೆ ಕೋರ್ಟ್ 98 ಸವರ್ಣಿಯ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನ ನೀಡಿದೆ. ಆದರೂ, ಬುದ್ದಿ ಕಲಿಯದ ಸವರ್ಣಿಯರು ದಲಿತರ ಮೇಲೆ ದೌರ್ಜನ್ಯವನ್ನ ನಡೆಸುತ್ತಲೇ ಬಂದಿದ್ದಾರೆ.

ದೊಡ್ಡಬಳ್ಳಾಪುರ ನಗರ ಕೇಂದ್ರದಿಂದ ಕೇವಲ 3 ಕಿ.ಮೀ ಅಂತರದಲ್ಲಿರುವ ಮಲ್ಲಾತಹಳ್ಳಿ ಗ್ರಾಮದಲ್ಲಿ ಇವತ್ತಿಗೂ ಅಸ್ಪೃಶ್ಯತೆ ಆಚರಣೆ ಜೀವಂತವಾಗಿರುವ ಘಟನೆ ಕಂಡುಬಂದಿದೆ. ಇಲ್ಲಿನ ದೇವಸ್ಥಾನಗಳಿಗೆ ದಲಿತರ ಪ್ರವೇಶವಿಲ್ಲ, ಬಾಗಿಲಲ್ಲೇ ನಿಂತು ದೇವರಿಗೆ ಕೈ ಮುಗಿಯ ಬೇಕು, ದಲಿತರ ಪೂಜಾ ಸಾಮಾಗ್ರಿಗಳನ್ನು ಸಹ ದೇವಸ್ಥಾನದ ಒಳಗೆ ತೆಗೆದುಕೊಂಡು ಹೋಗುವುದಿಲ್ಲ, ಕಾಂಪೌಂಡ್ ಹೊರಗಡೆಯ ದೇವರಿಗೆ ಹಣ್ಣುಕಾಯಿ ಕೊಟ್ಟು ಪೂಜೆ ಮಾಡಿಸಿಕೊಂಡು ಹೋಗುತ್ತಿದ್ದಾರೆ.

ಬಹಳ ಹಿಂದಿನಿಂದ ಮಲ್ಲಾತಹಳ್ಳಿ ಗ್ರಾಮದಲ್ಲಿ ಸವರ್ಣಿಯರು ಅಸ್ಪೃಶ್ಯತೆಯನ್ನ ಆಚರಿಸಿಕೊಂಡು ಬರುತ್ತಿದ್ದಾರೆ, ಹಳೆ ತಲೆಮಾರಿನ ದಲಿತರು ಇದ್ಯಾವುದನ್ನು ಪ್ರಶ್ನೆ ಮಾಡದೆ ತಮ್ಮ ಮೇಲಿನ ದೌರ್ಜನ್ಯಗಳನ್ನ ಸಹಿಸಿಕೊಂಡಿದ್ದರು. ಆದರೆ ಇವತ್ತಿನ ವಿದ್ಯಾವಂತ ಹುಡುಗರು ದಲಿತರ ಮೇಲೆ ನಡೆಸುತ್ತಿರುವ ಅಸ್ಪೃಶ್ಯತೆ ಆಚರಣೆಯನ್ನ ಪಶ್ನೆ ಮಾಡಲು ಪ್ರಾರಂಭಿಸಿದ್ದಾರೆ, ಇದೇ ಇವತ್ತು ಗ್ರಾಮದಲ್ಲಿ ಜಾತಿ ಸಂಘರ್ಷಕ್ಕೆ ಕಾರಣವಾಗಿದೆ.

ಗ್ರಾಮದಲ್ಲಿ ಚನ್ನಕೇಶವ, ಮದ್ದೂರಮ್ಮ, ಗಂಗಮ್ಮ ಮತ್ತು ಮಾರಮ್ಮ ದೇವಸ್ಥಾನಗಳಿವೆ, ಚನ್ನಕೇಶ ಮತ್ತು ಮದ್ದೂರಮ್ಮ ಸವರ್ಣಿಯರ ಒಡೆತನದಲ್ಲಿದ್ದು, ಗಂಗಮ್ಮ ದೇವಸ್ಥಾನ ದಲಿತರ ಒಡೆತನದಲ್ಲಿದೆ, 40 ವರ್ಷಗಳ ಹಳೆಯ ದೇವಸ್ಥಾನಗಳಾಗಿದ್ದು, ವರ್ಷದ ಹಿಂದೆ ದೇವಸ್ಥಾನಗಳ ಜೀರ್ಣೋದ್ಧಾರ ಮಾಡಲಾಗಿತ್ತು, 15 ದಿನಗಳ ಹಿಂದೆ ಗ್ರಾಮದಲ್ಲಿ ಸಭೆ ಮಾಡಿದ ದಲಿತರು ಮತ್ತು ಸವರ್ಣಿಯರು, ಗಂಗಮ್ಮ, ಮದ್ದೂರಮ್ಮ ಮತ್ತು ಚನ್ನಕೇಶವ ದೇವರಿಗೆ ದೀಪಾವಳಿ ಹಬ್ಬದಂದ್ದು ಆರತಿ ಮಾಡುವ ಬಗ್ಗೆ ಮಾತುಕಥೆ ಮಾಡಿದ್ದಾರೆ.

ಶುಕ್ರವಾರ ಬೆಳಗ್ಗೆ 12 ಗಂಟೆ ಸಮಯದಲ್ಲಿ ದಲಿತ ಮಹಿಳೆಯರು ಆರತಿಗಳನ್ನ ಹೊತ್ತುಕೊಂಡು ಚನ್ನಕೇಶವ,ಮದ್ದೂರಮ್ಮ ಮತ್ತು ಗಂಗಮ್ಮ ದೇವಸ್ಥಾನಗಳ ಬಳಿ ಹೋಗಿದ್ದಾರೆ, ಸ್ಥಳದಲ್ಲೇ ದಲಿತ ಮಹಿಳೆಯರನ್ನ ತಡೆದ ಸರ್ವಣಿಯರು, ಸವರ್ಣಿಯ ಮಹಿಳೆಯರ ಆರತಿ ಹಿಂದೆ ಬರುವಂತೆ ಹೇಳಿದ್ದಾರೆ, ಚನ್ನಕೇಶವ ಮತ್ತು ಮದ್ದೂರಮ್ಮ ದೇವಸ್ಥಾನಗಳ ಬಳಿ ಹೋದಾಗ, ಮೊದಲು ಸವರ್ಣಿಯ ಮಹಿಳೆಯರ ಆರತಿಗಳನ್ನ ಒಳಗೆ ಬಿಡಲಾಗಿದೆ, ದೇವಸ್ಥಾನದ ಒಳಗೆ ಆರತಿಗಳನ್ನ ಬೆಳಗಿ ಪೂಜೆ ಮಾಡಿದ್ದಾರೆ, ದಲಿತ ಮಹಿಳೆಯರು ಸಹ ಆರತಿಗಳನ್ನ ದೇವರಿಗೆ ಬೆಳಗಲು ಮುಂದಾಗಿದ್ದಾರೆ, ಈ ವೇಳೆ ದೇವಸ್ಥಾನದ ಕಾಂಪೌಂಡ್ ನಲ್ಲಿಯೇ ತಡೆದ ಸವರ್ಣಿಯರು ಕೌಂಪೌಂಡ್ ನಿಂದ ಹೊರಗೆ ನಿಂತು ಹೊರಗಿನಿಂದಲೇ ಪೂಜೆ ಮಾಡಿಕೊಂಡು ಹೋಗುವಂತೆ ಹೇಳಿದ್ದಾರೆ, ಪ್ರಶ್ನೆ ಮಾಡುತ್ತಲೇ ಒಳ ಹೋಗಲು ಪ್ರಯತ್ನಿಸಿದ್ದಾಗ ಕಾಂಪೌಂಡ್ ಗೆ ಬೀಗ ಹಾಕಿದ್ದಾರೆ, ಇವತ್ತಿನ ಕಾಲದಲ್ಲೂ ಇಂತಹ ಆಚರಣೆಗಳು ನಡೆಯುತ್ತಿರುವುದು ಮನಸ್ಸಿಗೆ ತುಂಬಾ ನೋವಾಗಿದೆ ಎಂದು ದಲಿತ ಯುವಕ ಅಶೋಕ್ ತಮ್ಮ ನೋವು ಹಂಚಿಕೊಂಡರು.

ದೇವಸ್ಥಾನ ಪ್ರವೇಶ ನಿರಾಕರಣೆ ವಿಚಾರಕ್ಕೆ ಸಂಬಂಧಿದಂತೆ ಸರ್ವಣಿಯ ಮುಖಂಡರ ಜೊತೆ ಮಾತನಾಡಲು ದಲಿತರು ಹೋದಾಗ, ದಲಿತರ ವಿರುದ್ಧವೇ ಆತ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ, ಈ ವೇಳೆ ದಲಿತ ಯುವಕ ಪ್ರಶಾಂತ್ ಎಂಬುವರನ್ನ ತಳ್ಳಲಾಗಿದ್ದು, ಅವರ ಕೈ ಕಾಲುಗಳಿಗೆ ತರಚಿದ ಗಾಯವಾಗಿದೆ, ದೇವಸ್ಥಾನಕ್ಕೆ ದಲಿತರ ಪ್ರವೇಶ ನಿರಾಕರಣೆಗೆ ಸಂಬಂಧಿಸಿದಂತೆ ದಲಿತರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

4 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

7 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

8 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

20 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 day ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

1 day ago