ಆರೂಡಿ ಅರಣ್ಯ ಪ್ರದೇಶದಲ್ಲಿ ವೈವಿಧ್ಯತೆಯ ಕಾಡು ಬೀಜಗಳ ನೇರ ಬೀಜ ಬಿತ್ತನೆ ಕಾರ್ಯ

ದೊಡ್ಡಬಳ್ಳಾಪುರ ತಾಲೂಕಿನ ಆರೂಡಿ ಅರಣ್ಯ ಪ್ರದೇಶದಲ್ಲಿ ನೀಲಗಿರಿ ಮರಗಳನ್ನು ತೆರವುಗೊಳಿಸಿರುವ ಅರಣ್ಯದಲ್ಲಿ ವೈವಿಧ್ಯತೆಯ ಕಾಡು ಬೀಜಗಳ ನೇರ ಬೀಜ ಬಿತ್ತನೆ ಕಾರ್ಯಕ್ರಮವನ್ನು ಯುವ ಸಂಚಲನ (ರಿ), ವಲಯ ಅರಣ್ಯ ಇಲಾಖೆ ದೊಡ್ಡಬಳ್ಳಾಪುರ ಹಾಗೂ ಸೇಂಟ್ ಕ್ಲಾರೆಟ್ ಕಾಲೇಜು ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ಎಲ್ಲಾ ಜನರು ಅರಿತುಕೊಂಡರೆ ಪರಿಸರದ ಎಷ್ಟೋ ಸಮಸ್ಯೆಗಳು ಬಗೆಹರಿಯುತ್ತವೆ. ಅದರಲ್ಲೂ, ಇಂದಿನ ಯುವಜನತೆಗೆ ಪರಿಸರದ ಕುರಿತು ಅರಿವು ಮೂಡಿಸುವುದು ಬಹುಮುಖ್ಯ ಕೆಲಸವಾಗಿದೆ. ಇಂತಹ ಪರಿಸರದ ಕಾರ್ಯಗಳು ಯಶಸ್ವಿಯಾಗಬೇಕಾದರೆ ಯುವ ಸಂಚಲನದಂತಹ ಕೊಂಡಿಗಳು ಅರಣ್ಯ ಇಲಾಖೆಗೆ ಬಹುಮುಖ್ಯವಾಗಿ ಬೇಕಾಗುತ್ತದೆ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣೇಗೌಡ ತಿಳಿಸಿದರು.

ಯುವ ಸಂಚಲನದ ಅಧ್ಯಕ್ಷ ಚಿದಾನಂದ ಮೂರ್ತಿ ಮಾತನಾಡಿ, ಆರೂಡಿ ಅರಣ್ಯ ಪ್ರದೇಶದ ವ್ಯಾಪ್ತಿಯ ಸುಮಾರು 25 ಹೆಕ್ಟೇರ್ ಪ್ರದೇಶದಲ್ಲಿ 15 ಕ್ಕೂ ಹೆಚ್ಚು ವಿವಿಧ ಜಾತಿಯ (ಅಂಕೋಲೆ, ತಪ್ಸಿ, ಹಿಪ್ಪೆ, ಮಡ್ಡಿಮರ, ಸೀತಾಪಲ, ತಾರೆ, ಕಿರು ಬಿದಿರು, ಕಕ್ಕೆ, ಬಿಕ್ಕೆ, ಬಿಲ್ವರ, ಬೂರಗ, ಗೋಣಿ, ಬಸರೆ, ಅಮಟೆ, ಬಿಳಿದಾಳೆ) ಬೀಜಗಳನ್ನು ನೇರ ಬಿತ್ತನೆಯ ಮೂಲಕ ಮಾಡಲಾಯಿತು. ಪರಿಸರಕ್ಕೆ ನಮ್ಮಿಂದಾಗುವ ಮಟ್ಟಿಗೆ ಸೇವೆ ಸಲ್ಲಿಸಲು ಇದೊಂದು ಉತ್ತಮ ಅವಕಾಶ. ಈ ಕಾರ್ಯವನ್ನು ಇಂದಿಗೆ ಮಾತ್ರ ಸೀಮಿತಗೊಳಿಸದೆ ನಮ್ಮ ನಮ್ಮ ವ್ಯಾಪ್ತಿಯಲ್ಲಿ ನಮಗಾಗುವ ಮಟ್ಟಿಗೆ ಪರಿಸರದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಬಹು ಮುಖ್ಯ ಎಂದು ಯುವ ಜನರಿಗೆ ತಿಳಿಸಿದರು.

ಈ ಸಮಯದಲ್ಲಿ ಸೇಂಟ್ ಕ್ಲಾರೆಟ್ ಕಾಲೇಜಿನ ಉಪನ್ಯಾಸಕರಾದ ಶ್ರೀಯುತ ವಿನೀತ್ ಹಾಗೂ ಕಾಲೇಜಿನ ವಿವಿಧ  ವಿಭಾಗದ 50 ಕ್ಕೂ ಹೆಚ್ಚು ವಿದ್ಯಾರ್ಥಿ/ವಿದ್ಯಾರ್ಥಿನಿಯರು, ಯುವ ಸಂಚಲನ ತಂಡದ ಸದಸ್ಯರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

9 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

14 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

14 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

19 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago