ಆರೂಡಿ ಅರಣ್ಯ ಪ್ರದೇಶದಲ್ಲಿ ವೈವಿಧ್ಯತೆಯ ಕಾಡು ಬೀಜಗಳ ನೇರ ಬೀಜ ಬಿತ್ತನೆ ಕಾರ್ಯ

ದೊಡ್ಡಬಳ್ಳಾಪುರ ತಾಲೂಕಿನ ಆರೂಡಿ ಅರಣ್ಯ ಪ್ರದೇಶದಲ್ಲಿ ನೀಲಗಿರಿ ಮರಗಳನ್ನು ತೆರವುಗೊಳಿಸಿರುವ ಅರಣ್ಯದಲ್ಲಿ ವೈವಿಧ್ಯತೆಯ ಕಾಡು ಬೀಜಗಳ ನೇರ ಬೀಜ ಬಿತ್ತನೆ ಕಾರ್ಯಕ್ರಮವನ್ನು ಯುವ ಸಂಚಲನ (ರಿ), ವಲಯ ಅರಣ್ಯ ಇಲಾಖೆ ದೊಡ್ಡಬಳ್ಳಾಪುರ ಹಾಗೂ ಸೇಂಟ್ ಕ್ಲಾರೆಟ್ ಕಾಲೇಜು ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ಎಲ್ಲಾ ಜನರು ಅರಿತುಕೊಂಡರೆ ಪರಿಸರದ ಎಷ್ಟೋ ಸಮಸ್ಯೆಗಳು ಬಗೆಹರಿಯುತ್ತವೆ. ಅದರಲ್ಲೂ, ಇಂದಿನ ಯುವಜನತೆಗೆ ಪರಿಸರದ ಕುರಿತು ಅರಿವು ಮೂಡಿಸುವುದು ಬಹುಮುಖ್ಯ ಕೆಲಸವಾಗಿದೆ. ಇಂತಹ ಪರಿಸರದ ಕಾರ್ಯಗಳು ಯಶಸ್ವಿಯಾಗಬೇಕಾದರೆ ಯುವ ಸಂಚಲನದಂತಹ ಕೊಂಡಿಗಳು ಅರಣ್ಯ ಇಲಾಖೆಗೆ ಬಹುಮುಖ್ಯವಾಗಿ ಬೇಕಾಗುತ್ತದೆ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣೇಗೌಡ ತಿಳಿಸಿದರು.

ಯುವ ಸಂಚಲನದ ಅಧ್ಯಕ್ಷ ಚಿದಾನಂದ ಮೂರ್ತಿ ಮಾತನಾಡಿ, ಆರೂಡಿ ಅರಣ್ಯ ಪ್ರದೇಶದ ವ್ಯಾಪ್ತಿಯ ಸುಮಾರು 25 ಹೆಕ್ಟೇರ್ ಪ್ರದೇಶದಲ್ಲಿ 15 ಕ್ಕೂ ಹೆಚ್ಚು ವಿವಿಧ ಜಾತಿಯ (ಅಂಕೋಲೆ, ತಪ್ಸಿ, ಹಿಪ್ಪೆ, ಮಡ್ಡಿಮರ, ಸೀತಾಪಲ, ತಾರೆ, ಕಿರು ಬಿದಿರು, ಕಕ್ಕೆ, ಬಿಕ್ಕೆ, ಬಿಲ್ವರ, ಬೂರಗ, ಗೋಣಿ, ಬಸರೆ, ಅಮಟೆ, ಬಿಳಿದಾಳೆ) ಬೀಜಗಳನ್ನು ನೇರ ಬಿತ್ತನೆಯ ಮೂಲಕ ಮಾಡಲಾಯಿತು. ಪರಿಸರಕ್ಕೆ ನಮ್ಮಿಂದಾಗುವ ಮಟ್ಟಿಗೆ ಸೇವೆ ಸಲ್ಲಿಸಲು ಇದೊಂದು ಉತ್ತಮ ಅವಕಾಶ. ಈ ಕಾರ್ಯವನ್ನು ಇಂದಿಗೆ ಮಾತ್ರ ಸೀಮಿತಗೊಳಿಸದೆ ನಮ್ಮ ನಮ್ಮ ವ್ಯಾಪ್ತಿಯಲ್ಲಿ ನಮಗಾಗುವ ಮಟ್ಟಿಗೆ ಪರಿಸರದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಬಹು ಮುಖ್ಯ ಎಂದು ಯುವ ಜನರಿಗೆ ತಿಳಿಸಿದರು.

ಈ ಸಮಯದಲ್ಲಿ ಸೇಂಟ್ ಕ್ಲಾರೆಟ್ ಕಾಲೇಜಿನ ಉಪನ್ಯಾಸಕರಾದ ಶ್ರೀಯುತ ವಿನೀತ್ ಹಾಗೂ ಕಾಲೇಜಿನ ವಿವಿಧ  ವಿಭಾಗದ 50 ಕ್ಕೂ ಹೆಚ್ಚು ವಿದ್ಯಾರ್ಥಿ/ವಿದ್ಯಾರ್ಥಿನಿಯರು, ಯುವ ಸಂಚಲನ ತಂಡದ ಸದಸ್ಯರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

9 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

11 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

11 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

11 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

13 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

17 hours ago