ಆರೂಡಿ ಅರಣ್ಯ ಪ್ರದೇಶದಲ್ಲಿ ವೈವಿಧ್ಯತೆಯ ಕಾಡು ಬೀಜಗಳ ನೇರ ಬೀಜ ಬಿತ್ತನೆ ಕಾರ್ಯ

ದೊಡ್ಡಬಳ್ಳಾಪುರ ತಾಲೂಕಿನ ಆರೂಡಿ ಅರಣ್ಯ ಪ್ರದೇಶದಲ್ಲಿ ನೀಲಗಿರಿ ಮರಗಳನ್ನು ತೆರವುಗೊಳಿಸಿರುವ ಅರಣ್ಯದಲ್ಲಿ ವೈವಿಧ್ಯತೆಯ ಕಾಡು ಬೀಜಗಳ ನೇರ ಬೀಜ ಬಿತ್ತನೆ ಕಾರ್ಯಕ್ರಮವನ್ನು ಯುವ ಸಂಚಲನ (ರಿ), ವಲಯ ಅರಣ್ಯ ಇಲಾಖೆ ದೊಡ್ಡಬಳ್ಳಾಪುರ ಹಾಗೂ ಸೇಂಟ್ ಕ್ಲಾರೆಟ್ ಕಾಲೇಜು ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ಎಲ್ಲಾ ಜನರು ಅರಿತುಕೊಂಡರೆ ಪರಿಸರದ ಎಷ್ಟೋ ಸಮಸ್ಯೆಗಳು ಬಗೆಹರಿಯುತ್ತವೆ. ಅದರಲ್ಲೂ, ಇಂದಿನ ಯುವಜನತೆಗೆ ಪರಿಸರದ ಕುರಿತು ಅರಿವು ಮೂಡಿಸುವುದು ಬಹುಮುಖ್ಯ ಕೆಲಸವಾಗಿದೆ. ಇಂತಹ ಪರಿಸರದ ಕಾರ್ಯಗಳು ಯಶಸ್ವಿಯಾಗಬೇಕಾದರೆ ಯುವ ಸಂಚಲನದಂತಹ ಕೊಂಡಿಗಳು ಅರಣ್ಯ ಇಲಾಖೆಗೆ ಬಹುಮುಖ್ಯವಾಗಿ ಬೇಕಾಗುತ್ತದೆ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣೇಗೌಡ ತಿಳಿಸಿದರು.

ಯುವ ಸಂಚಲನದ ಅಧ್ಯಕ್ಷ ಚಿದಾನಂದ ಮೂರ್ತಿ ಮಾತನಾಡಿ, ಆರೂಡಿ ಅರಣ್ಯ ಪ್ರದೇಶದ ವ್ಯಾಪ್ತಿಯ ಸುಮಾರು 25 ಹೆಕ್ಟೇರ್ ಪ್ರದೇಶದಲ್ಲಿ 15 ಕ್ಕೂ ಹೆಚ್ಚು ವಿವಿಧ ಜಾತಿಯ (ಅಂಕೋಲೆ, ತಪ್ಸಿ, ಹಿಪ್ಪೆ, ಮಡ್ಡಿಮರ, ಸೀತಾಪಲ, ತಾರೆ, ಕಿರು ಬಿದಿರು, ಕಕ್ಕೆ, ಬಿಕ್ಕೆ, ಬಿಲ್ವರ, ಬೂರಗ, ಗೋಣಿ, ಬಸರೆ, ಅಮಟೆ, ಬಿಳಿದಾಳೆ) ಬೀಜಗಳನ್ನು ನೇರ ಬಿತ್ತನೆಯ ಮೂಲಕ ಮಾಡಲಾಯಿತು. ಪರಿಸರಕ್ಕೆ ನಮ್ಮಿಂದಾಗುವ ಮಟ್ಟಿಗೆ ಸೇವೆ ಸಲ್ಲಿಸಲು ಇದೊಂದು ಉತ್ತಮ ಅವಕಾಶ. ಈ ಕಾರ್ಯವನ್ನು ಇಂದಿಗೆ ಮಾತ್ರ ಸೀಮಿತಗೊಳಿಸದೆ ನಮ್ಮ ನಮ್ಮ ವ್ಯಾಪ್ತಿಯಲ್ಲಿ ನಮಗಾಗುವ ಮಟ್ಟಿಗೆ ಪರಿಸರದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಬಹು ಮುಖ್ಯ ಎಂದು ಯುವ ಜನರಿಗೆ ತಿಳಿಸಿದರು.

ಈ ಸಮಯದಲ್ಲಿ ಸೇಂಟ್ ಕ್ಲಾರೆಟ್ ಕಾಲೇಜಿನ ಉಪನ್ಯಾಸಕರಾದ ಶ್ರೀಯುತ ವಿನೀತ್ ಹಾಗೂ ಕಾಲೇಜಿನ ವಿವಿಧ  ವಿಭಾಗದ 50 ಕ್ಕೂ ಹೆಚ್ಚು ವಿದ್ಯಾರ್ಥಿ/ವಿದ್ಯಾರ್ಥಿನಿಯರು, ಯುವ ಸಂಚಲನ ತಂಡದ ಸದಸ್ಯರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

5 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

5 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

5 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

6 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

7 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

11 hours ago