ಆರೂಡಿ ಅರಣ್ಯ ಪ್ರದೇಶದಲ್ಲಿ ವೈವಿಧ್ಯತೆಯ ಕಾಡು ಬೀಜಗಳ ನೇರ ಬೀಜ ಬಿತ್ತನೆ ಕಾರ್ಯ

ದೊಡ್ಡಬಳ್ಳಾಪುರ ತಾಲೂಕಿನ ಆರೂಡಿ ಅರಣ್ಯ ಪ್ರದೇಶದಲ್ಲಿ ನೀಲಗಿರಿ ಮರಗಳನ್ನು ತೆರವುಗೊಳಿಸಿರುವ ಅರಣ್ಯದಲ್ಲಿ ವೈವಿಧ್ಯತೆಯ ಕಾಡು ಬೀಜಗಳ ನೇರ ಬೀಜ ಬಿತ್ತನೆ ಕಾರ್ಯಕ್ರಮವನ್ನು ಯುವ ಸಂಚಲನ (ರಿ), ವಲಯ ಅರಣ್ಯ ಇಲಾಖೆ ದೊಡ್ಡಬಳ್ಳಾಪುರ ಹಾಗೂ ಸೇಂಟ್ ಕ್ಲಾರೆಟ್ ಕಾಲೇಜು ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ಎಲ್ಲಾ ಜನರು ಅರಿತುಕೊಂಡರೆ ಪರಿಸರದ ಎಷ್ಟೋ ಸಮಸ್ಯೆಗಳು ಬಗೆಹರಿಯುತ್ತವೆ. ಅದರಲ್ಲೂ, ಇಂದಿನ ಯುವಜನತೆಗೆ ಪರಿಸರದ ಕುರಿತು ಅರಿವು ಮೂಡಿಸುವುದು ಬಹುಮುಖ್ಯ ಕೆಲಸವಾಗಿದೆ. ಇಂತಹ ಪರಿಸರದ ಕಾರ್ಯಗಳು ಯಶಸ್ವಿಯಾಗಬೇಕಾದರೆ ಯುವ ಸಂಚಲನದಂತಹ ಕೊಂಡಿಗಳು ಅರಣ್ಯ ಇಲಾಖೆಗೆ ಬಹುಮುಖ್ಯವಾಗಿ ಬೇಕಾಗುತ್ತದೆ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣೇಗೌಡ ತಿಳಿಸಿದರು.

ಯುವ ಸಂಚಲನದ ಅಧ್ಯಕ್ಷ ಚಿದಾನಂದ ಮೂರ್ತಿ ಮಾತನಾಡಿ, ಆರೂಡಿ ಅರಣ್ಯ ಪ್ರದೇಶದ ವ್ಯಾಪ್ತಿಯ ಸುಮಾರು 25 ಹೆಕ್ಟೇರ್ ಪ್ರದೇಶದಲ್ಲಿ 15 ಕ್ಕೂ ಹೆಚ್ಚು ವಿವಿಧ ಜಾತಿಯ (ಅಂಕೋಲೆ, ತಪ್ಸಿ, ಹಿಪ್ಪೆ, ಮಡ್ಡಿಮರ, ಸೀತಾಪಲ, ತಾರೆ, ಕಿರು ಬಿದಿರು, ಕಕ್ಕೆ, ಬಿಕ್ಕೆ, ಬಿಲ್ವರ, ಬೂರಗ, ಗೋಣಿ, ಬಸರೆ, ಅಮಟೆ, ಬಿಳಿದಾಳೆ) ಬೀಜಗಳನ್ನು ನೇರ ಬಿತ್ತನೆಯ ಮೂಲಕ ಮಾಡಲಾಯಿತು. ಪರಿಸರಕ್ಕೆ ನಮ್ಮಿಂದಾಗುವ ಮಟ್ಟಿಗೆ ಸೇವೆ ಸಲ್ಲಿಸಲು ಇದೊಂದು ಉತ್ತಮ ಅವಕಾಶ. ಈ ಕಾರ್ಯವನ್ನು ಇಂದಿಗೆ ಮಾತ್ರ ಸೀಮಿತಗೊಳಿಸದೆ ನಮ್ಮ ನಮ್ಮ ವ್ಯಾಪ್ತಿಯಲ್ಲಿ ನಮಗಾಗುವ ಮಟ್ಟಿಗೆ ಪರಿಸರದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಬಹು ಮುಖ್ಯ ಎಂದು ಯುವ ಜನರಿಗೆ ತಿಳಿಸಿದರು.

ಈ ಸಮಯದಲ್ಲಿ ಸೇಂಟ್ ಕ್ಲಾರೆಟ್ ಕಾಲೇಜಿನ ಉಪನ್ಯಾಸಕರಾದ ಶ್ರೀಯುತ ವಿನೀತ್ ಹಾಗೂ ಕಾಲೇಜಿನ ವಿವಿಧ  ವಿಭಾಗದ 50 ಕ್ಕೂ ಹೆಚ್ಚು ವಿದ್ಯಾರ್ಥಿ/ವಿದ್ಯಾರ್ಥಿನಿಯರು, ಯುವ ಸಂಚಲನ ತಂಡದ ಸದಸ್ಯರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

14 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

15 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

16 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

16 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

24 hours ago