ದೊಡ್ಡಬಳ್ಳಾಪುರ ತಾಲೂಕಿನ ಆರೂಡಿ ಅರಣ್ಯ ಪ್ರದೇಶದಲ್ಲಿ ನೀಲಗಿರಿ ಮರಗಳನ್ನು ತೆರವುಗೊಳಿಸಿರುವ ಅರಣ್ಯದಲ್ಲಿ ವೈವಿಧ್ಯತೆಯ ಕಾಡು ಬೀಜಗಳ ನೇರ ಬೀಜ ಬಿತ್ತನೆ ಕಾರ್ಯಕ್ರಮವನ್ನು ಯುವ ಸಂಚಲನ (ರಿ), ವಲಯ ಅರಣ್ಯ ಇಲಾಖೆ ದೊಡ್ಡಬಳ್ಳಾಪುರ ಹಾಗೂ ಸೇಂಟ್ ಕ್ಲಾರೆಟ್ ಕಾಲೇಜು ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ಎಲ್ಲಾ ಜನರು ಅರಿತುಕೊಂಡರೆ ಪರಿಸರದ ಎಷ್ಟೋ ಸಮಸ್ಯೆಗಳು ಬಗೆಹರಿಯುತ್ತವೆ. ಅದರಲ್ಲೂ, ಇಂದಿನ ಯುವಜನತೆಗೆ ಪರಿಸರದ ಕುರಿತು ಅರಿವು ಮೂಡಿಸುವುದು ಬಹುಮುಖ್ಯ ಕೆಲಸವಾಗಿದೆ. ಇಂತಹ ಪರಿಸರದ ಕಾರ್ಯಗಳು ಯಶಸ್ವಿಯಾಗಬೇಕಾದರೆ ಯುವ ಸಂಚಲನದಂತಹ ಕೊಂಡಿಗಳು ಅರಣ್ಯ ಇಲಾಖೆಗೆ ಬಹುಮುಖ್ಯವಾಗಿ ಬೇಕಾಗುತ್ತದೆ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣೇಗೌಡ ತಿಳಿಸಿದರು.
ಈ ಸಮಯದಲ್ಲಿ ಸೇಂಟ್ ಕ್ಲಾರೆಟ್ ಕಾಲೇಜಿನ ಉಪನ್ಯಾಸಕರಾದ ಶ್ರೀಯುತ ವಿನೀತ್ ಹಾಗೂ ಕಾಲೇಜಿನ ವಿವಿಧ ವಿಭಾಗದ 50 ಕ್ಕೂ ಹೆಚ್ಚು ವಿದ್ಯಾರ್ಥಿ/ವಿದ್ಯಾರ್ಥಿನಿಯರು, ಯುವ ಸಂಚಲನ ತಂಡದ ಸದಸ್ಯರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…