ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ- ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಉತ್ತಮ ಆರೋಗಭ್ಯಾಸ ಹೊಂದುವುದರಿಂದ ಮಾತ್ರ ಪ್ರತಿಯೊಬ್ಬರು ಆರೋಗ್ಯವಂತ ದೀರ್ಘಾಯುಷಿಯಾಗಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್‌ಸಿ) ಆಯೋಜಿಸಿದ್ದ “ಲಾಂಗಿವಿಟಿ ಇಂಡಿಯಾ ಕಾನ್ಫರೆನ್ಸ್‌” (ದೀರ್ಘಾಯುಷ್ಯ ಭಾರತ ಸಮ್ಮೇಳನ)ವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಆರೋಗ್ಯವಂತರಾಗಿ ಹೆಚ್ಚು ಕಾಲ ಬದುಕುವುದು ಸವಾಲಿನ ವಿಷಯವಾಗಿದೆ. ನಮ್ಮ ಆಹಾರಭ್ಯಾಸಗಳು ನಮ್ಮನ್ನು ಅನಾರೋಗ್ಯದತ್ತ ಕೊಂಡೊಯ್ಯುತ್ತಿದೆ. ಎಷ್ಟು ವರ್ಷ ಬದುಕಿದ್ದೆವು ಎನ್ನುವುದಕ್ಕಿಂತ ಎಷ್ಟು ವರ್ಷ ಆರೋಗ್ಯವಾಗಿ ಬದುಕುತ್ತೇವೆ ಎನ್ನುವುದು ಮುಖ್ಯ. ಆರೋಗ್ಯವಂತ ದೀರ್ಘಾಯಸ್ಸು ಹೊಂದಲು ಪ್ರತಿಯೊಬ್ಬರು ಇಂದಿನಿಂದಲೇ ಉತ್ತಮ ಆರೋಗಭ್ಯಾಸ ಪ್ರಾರಂಭಿಸಬೇಕು, ಆಗಷ್ಟೇ ಹೆಚ್ಚು ಕಾಲ ಆರೋಗ್ಯವಾಗಿ ಬದುಕಲು ಸಾಧ್ಯ. ಈ ನಿಟ್ಟಿನಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ನಡೆಯಬೇಕು ಎಂದು ಹೇಳಿದರು.
ಎನ್‌ಯುಎಸ್‌ನ ಆರೋಗ್ಯಕರ ದೀರ್ಘಾಯುಷ್ಯ ಕೇಂದ್ರದ ನಿರ್ದೇಶಕ ಬ್ರಿಯಾನ್ ಕೆನಡಿ ಮಾತನಾಡಿ, ಈ ಸಮ್ಮೇಳನದ ಮೂಲಕ ಹೆಚ್ಚು ಜನಸಂಖ್ಯೆ ಇರುವ ಭಾರತದಲ್ಲಿ ಜನರು ಆರೋಗ್ಯಕರವಾಗಿ ವಯಸ್ಸಾಗುವ ಬಗ್ಗೆಯೂ ಆದ್ಯತೆ ನೀಡಲು ಅವಕಾಶ ಮಾಡಿಕೊಟ್ಟಿದೆ. ಪ್ರತಿಯೊಬ್ಬರಿಗೂ ವಯಸ್ಸಾಗಲಿದೆ ಆದರೆ ಅವರು ವಯಸ್ಸಾದ ಸಂದರ್ಭದಲ್ಲಿ ಎಷ್ಟು ಆರೋಗ್ಯವಾಗಿದ್ದಾರೆ ಎಂಬುದು ಮುಖ್ಯ. ಇದಕ್ಕಾಗಿ ವಿಜ್ಞಾನದ ಹೆಜ್ಜೆ ಹಾಗೂ ಜನರಲ್ಲಿನ ಜಾಗೃತಿ ಬಗ್ಗೆಯೂ ಈ ಸಮ್ಮೇಳನದಲ್ಲಿ ಚರ್ಚೆಯಾಗುತ್ತಿರುವುದು ಪ್ರಶಂಸನಾರ್ಹ ಎಂದು ಹೇಳಿದರು.

ಐಐಎಸ್‌ಸಿ ಇಂಟರ್ ಡಿಸಿಪ್ಲಿನರಿ ಸೈನ್ಸಸ್ ವಿಭಾಗದ ಡೀನ್ ನವಕಂತ ಭಟ್ ಮಾತನಾಡಿ, ಭಾರತದಲ್ಲಿ ಮುಂದಿನ ದಿನಗಳಲ್ಲಿ ವಯಸ್ಸಾಗುವವರ ಸರಾಸರಿ ಪ್ರಮಾಣ ಹೆಚ್ಚಾಗಲಿದೆ. ಆದರೆ, ಇಂದು ನಮ್ಮ ಜೀವನಶೈಲಿ, ಆಹಾರಕ್ರಮ ಗಮನಿಸಿದರೆ ಭವಿಷ್ಯದ ಬಗ್ಗೆ ಯೋಚನೆ ಮೂಡಲಿದೆ. ಆರೋಗ್ಯಕರ ಭವಿಷ್ಯ ನಿರ್ಮಾಣಕ್ಕೆ ಯಾವೆಲ್ಲಾ ಕ್ರಮದ ಅಗತ್ಯ ಎಂಬುದರ ಬಗ್ಗೆ ಸುದೀರ್ಘ ಚರ್ಚೆಯಾಗಬೇಕು, ಅನುವಂಶಿಕ ಕಾಯಿಲೆಗಳ ನಿರ್ವಹಣೆ, ಪರಿಸರದಿಂದ ಆಗುವ ಆರೋಗ್ಯ ಸಮಸ್ಯೆ ಸೇರಿದಂತೆ ವಯಸ್ಸಾದ ಬಳಿಕ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಆಯಾ ಕ್ಷೇತ್ರದ ವೈದ್ಯ ಹಾಗೂ ವಿಜ್ಞಾನ ತಜ್ಞರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಈಗಿಂದಲೇ ಈ ವಿಷಯಕ್ಕೆ ಗಮನ ನೀಡದೇ ಹೋದಲ್ಲಿ ಭವಿಷ್ಯದಲ್ಲಿ ಪ್ರತಿಯೊಬ್ಬರೂ ಅನಾರೋಗ್ಯದ ಜೀವನ ಸಾಗಿಸಬೇಕಾಗಬಹುದು ಎಂದು ಎಚ್ಚರಿಸಿದರು.

ಅಧಿವೇಶದಲ್ಲಿ ಆರೋಗ್ಯದ ವಯಸ್ಸಾಗುವಿಕೆಯ ಪ್ರಮಾಣವನ್ನು ಹೆಚ್ಚಿಸಲು ತೆಗೆದುಕೊಳ್ಳಬೇಕಾದ ಕ್ರಮಗಳು, ಸವಾಲುಗಳ ಬಗ್ಗೆ ತಜ್ಞರಿಂದ ಚರ್ಚೆ ನಡೆಯಿತು.
ಸಮಾವೇಶದಲ್ಲಿ ಎಂಎಲ್‌ಸಿ ಮಂಜುನಾಥ ಭಂಡಾರಿ, ಐಐಎಸ್‌ಸಿ ನಿರ್ದೇಶಕ ಗೋವಿಂದನ್‌ ರಂಗರಾಜನ್‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

47 minutes ago

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

2 hours ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

3 hours ago

ವಿರೋಧ ಲೆಕ್ಕಿಸದೆ ಪ್ರೀತಿಸಿ ಮದುವೆಯಾದ ಯುವತಿ…ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ…

ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…

4 hours ago

ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence)

ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…

8 hours ago

ಬಾಣಸವಾಡಿ ರೈಲ್ವೆ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್‌ಗೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಜೆ.ಜಾರ್ಜ್

ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್‌ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್…

9 hours ago