ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ- ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಉತ್ತಮ ಆರೋಗಭ್ಯಾಸ ಹೊಂದುವುದರಿಂದ ಮಾತ್ರ ಪ್ರತಿಯೊಬ್ಬರು ಆರೋಗ್ಯವಂತ ದೀರ್ಘಾಯುಷಿಯಾಗಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್‌ಸಿ) ಆಯೋಜಿಸಿದ್ದ “ಲಾಂಗಿವಿಟಿ ಇಂಡಿಯಾ ಕಾನ್ಫರೆನ್ಸ್‌” (ದೀರ್ಘಾಯುಷ್ಯ ಭಾರತ ಸಮ್ಮೇಳನ)ವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಆರೋಗ್ಯವಂತರಾಗಿ ಹೆಚ್ಚು ಕಾಲ ಬದುಕುವುದು ಸವಾಲಿನ ವಿಷಯವಾಗಿದೆ. ನಮ್ಮ ಆಹಾರಭ್ಯಾಸಗಳು ನಮ್ಮನ್ನು ಅನಾರೋಗ್ಯದತ್ತ ಕೊಂಡೊಯ್ಯುತ್ತಿದೆ. ಎಷ್ಟು ವರ್ಷ ಬದುಕಿದ್ದೆವು ಎನ್ನುವುದಕ್ಕಿಂತ ಎಷ್ಟು ವರ್ಷ ಆರೋಗ್ಯವಾಗಿ ಬದುಕುತ್ತೇವೆ ಎನ್ನುವುದು ಮುಖ್ಯ. ಆರೋಗ್ಯವಂತ ದೀರ್ಘಾಯಸ್ಸು ಹೊಂದಲು ಪ್ರತಿಯೊಬ್ಬರು ಇಂದಿನಿಂದಲೇ ಉತ್ತಮ ಆರೋಗಭ್ಯಾಸ ಪ್ರಾರಂಭಿಸಬೇಕು, ಆಗಷ್ಟೇ ಹೆಚ್ಚು ಕಾಲ ಆರೋಗ್ಯವಾಗಿ ಬದುಕಲು ಸಾಧ್ಯ. ಈ ನಿಟ್ಟಿನಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ನಡೆಯಬೇಕು ಎಂದು ಹೇಳಿದರು.
ಎನ್‌ಯುಎಸ್‌ನ ಆರೋಗ್ಯಕರ ದೀರ್ಘಾಯುಷ್ಯ ಕೇಂದ್ರದ ನಿರ್ದೇಶಕ ಬ್ರಿಯಾನ್ ಕೆನಡಿ ಮಾತನಾಡಿ, ಈ ಸಮ್ಮೇಳನದ ಮೂಲಕ ಹೆಚ್ಚು ಜನಸಂಖ್ಯೆ ಇರುವ ಭಾರತದಲ್ಲಿ ಜನರು ಆರೋಗ್ಯಕರವಾಗಿ ವಯಸ್ಸಾಗುವ ಬಗ್ಗೆಯೂ ಆದ್ಯತೆ ನೀಡಲು ಅವಕಾಶ ಮಾಡಿಕೊಟ್ಟಿದೆ. ಪ್ರತಿಯೊಬ್ಬರಿಗೂ ವಯಸ್ಸಾಗಲಿದೆ ಆದರೆ ಅವರು ವಯಸ್ಸಾದ ಸಂದರ್ಭದಲ್ಲಿ ಎಷ್ಟು ಆರೋಗ್ಯವಾಗಿದ್ದಾರೆ ಎಂಬುದು ಮುಖ್ಯ. ಇದಕ್ಕಾಗಿ ವಿಜ್ಞಾನದ ಹೆಜ್ಜೆ ಹಾಗೂ ಜನರಲ್ಲಿನ ಜಾಗೃತಿ ಬಗ್ಗೆಯೂ ಈ ಸಮ್ಮೇಳನದಲ್ಲಿ ಚರ್ಚೆಯಾಗುತ್ತಿರುವುದು ಪ್ರಶಂಸನಾರ್ಹ ಎಂದು ಹೇಳಿದರು.

ಐಐಎಸ್‌ಸಿ ಇಂಟರ್ ಡಿಸಿಪ್ಲಿನರಿ ಸೈನ್ಸಸ್ ವಿಭಾಗದ ಡೀನ್ ನವಕಂತ ಭಟ್ ಮಾತನಾಡಿ, ಭಾರತದಲ್ಲಿ ಮುಂದಿನ ದಿನಗಳಲ್ಲಿ ವಯಸ್ಸಾಗುವವರ ಸರಾಸರಿ ಪ್ರಮಾಣ ಹೆಚ್ಚಾಗಲಿದೆ. ಆದರೆ, ಇಂದು ನಮ್ಮ ಜೀವನಶೈಲಿ, ಆಹಾರಕ್ರಮ ಗಮನಿಸಿದರೆ ಭವಿಷ್ಯದ ಬಗ್ಗೆ ಯೋಚನೆ ಮೂಡಲಿದೆ. ಆರೋಗ್ಯಕರ ಭವಿಷ್ಯ ನಿರ್ಮಾಣಕ್ಕೆ ಯಾವೆಲ್ಲಾ ಕ್ರಮದ ಅಗತ್ಯ ಎಂಬುದರ ಬಗ್ಗೆ ಸುದೀರ್ಘ ಚರ್ಚೆಯಾಗಬೇಕು, ಅನುವಂಶಿಕ ಕಾಯಿಲೆಗಳ ನಿರ್ವಹಣೆ, ಪರಿಸರದಿಂದ ಆಗುವ ಆರೋಗ್ಯ ಸಮಸ್ಯೆ ಸೇರಿದಂತೆ ವಯಸ್ಸಾದ ಬಳಿಕ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಆಯಾ ಕ್ಷೇತ್ರದ ವೈದ್ಯ ಹಾಗೂ ವಿಜ್ಞಾನ ತಜ್ಞರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಈಗಿಂದಲೇ ಈ ವಿಷಯಕ್ಕೆ ಗಮನ ನೀಡದೇ ಹೋದಲ್ಲಿ ಭವಿಷ್ಯದಲ್ಲಿ ಪ್ರತಿಯೊಬ್ಬರೂ ಅನಾರೋಗ್ಯದ ಜೀವನ ಸಾಗಿಸಬೇಕಾಗಬಹುದು ಎಂದು ಎಚ್ಚರಿಸಿದರು.

ಅಧಿವೇಶದಲ್ಲಿ ಆರೋಗ್ಯದ ವಯಸ್ಸಾಗುವಿಕೆಯ ಪ್ರಮಾಣವನ್ನು ಹೆಚ್ಚಿಸಲು ತೆಗೆದುಕೊಳ್ಳಬೇಕಾದ ಕ್ರಮಗಳು, ಸವಾಲುಗಳ ಬಗ್ಗೆ ತಜ್ಞರಿಂದ ಚರ್ಚೆ ನಡೆಯಿತು.
ಸಮಾವೇಶದಲ್ಲಿ ಎಂಎಲ್‌ಸಿ ಮಂಜುನಾಥ ಭಂಡಾರಿ, ಐಐಎಸ್‌ಸಿ ನಿರ್ದೇಶಕ ಗೋವಿಂದನ್‌ ರಂಗರಾಜನ್‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೂಕ್ತ ಸಮಯದಲ್ಲಿ ಸಿಗದ ಚಿಕಿತ್ಸೆ: 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ‌ ಆಕ್ರಂದನ

ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು…

2 hours ago

ಪ್ರಜ್ವಲ್ ರೇವಣ್ಣ….ಶಿಕ್ಷೆಯ ಪ್ರಮಾಣ ಆದರ್ಶವೇ ಅಥವಾ ಅತಿರೇಕವೇ……?

ಎರಡು ಮುಖಗಳ, ವಿವಿಧ ಆಯಾಮಗಳ ಒಂದು ವಿಮರ್ಶೆ. ಭಾರತದ ಸಂವಿಧಾನ ಪ್ರತಿಪಾದಿಸುವ ಆಶಯಗಳ ಹಿನ್ನೆಲೆಯಲ್ಲಿ....... ಭಾರತದ ಸಂವಿಧಾನ ಮತ್ತು ಅದರ…

3 hours ago

ಕಂದಾಯ ದಾಖಲೆಗಳ ಗಣಕೀಕರಣ: ಭೂ ದಾಖಲೆಗಳ ರಕ್ಷಣೆ: ನಕಲಿಗೆ ಬ್ರೇಕ್

ದೊಡ್ಡಬಳ್ಳಾಪುರ: ಕಂದಾಯ ಇಲಾಖೆಯು ಭೂ ಸುರಕ್ಷಾ ಮಹತ್ವಾಕಾಂಕ್ಷಿ ಯೋಜನೆಯಡಿಯಲ್ಲಿ ತಾಲ್ಲೂಕು ಕಚೇರಿ, ಎ.ಸಿ ಕಚೇರಿ ಮತ್ತು ಡಿ.ಸಿ ಕಚೇರಿಗಳಲ್ಲಿರುವ ಪ್ರಮುಖ…

4 hours ago

ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…

18 hours ago

ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ

ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…

20 hours ago

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

1 day ago