ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ- ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಉತ್ತಮ ಆರೋಗಭ್ಯಾಸ ಹೊಂದುವುದರಿಂದ ಮಾತ್ರ ಪ್ರತಿಯೊಬ್ಬರು ಆರೋಗ್ಯವಂತ ದೀರ್ಘಾಯುಷಿಯಾಗಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್‌ಸಿ) ಆಯೋಜಿಸಿದ್ದ “ಲಾಂಗಿವಿಟಿ ಇಂಡಿಯಾ ಕಾನ್ಫರೆನ್ಸ್‌” (ದೀರ್ಘಾಯುಷ್ಯ ಭಾರತ ಸಮ್ಮೇಳನ)ವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಆರೋಗ್ಯವಂತರಾಗಿ ಹೆಚ್ಚು ಕಾಲ ಬದುಕುವುದು ಸವಾಲಿನ ವಿಷಯವಾಗಿದೆ. ನಮ್ಮ ಆಹಾರಭ್ಯಾಸಗಳು ನಮ್ಮನ್ನು ಅನಾರೋಗ್ಯದತ್ತ ಕೊಂಡೊಯ್ಯುತ್ತಿದೆ. ಎಷ್ಟು ವರ್ಷ ಬದುಕಿದ್ದೆವು ಎನ್ನುವುದಕ್ಕಿಂತ ಎಷ್ಟು ವರ್ಷ ಆರೋಗ್ಯವಾಗಿ ಬದುಕುತ್ತೇವೆ ಎನ್ನುವುದು ಮುಖ್ಯ. ಆರೋಗ್ಯವಂತ ದೀರ್ಘಾಯಸ್ಸು ಹೊಂದಲು ಪ್ರತಿಯೊಬ್ಬರು ಇಂದಿನಿಂದಲೇ ಉತ್ತಮ ಆರೋಗಭ್ಯಾಸ ಪ್ರಾರಂಭಿಸಬೇಕು, ಆಗಷ್ಟೇ ಹೆಚ್ಚು ಕಾಲ ಆರೋಗ್ಯವಾಗಿ ಬದುಕಲು ಸಾಧ್ಯ. ಈ ನಿಟ್ಟಿನಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ನಡೆಯಬೇಕು ಎಂದು ಹೇಳಿದರು.
ಎನ್‌ಯುಎಸ್‌ನ ಆರೋಗ್ಯಕರ ದೀರ್ಘಾಯುಷ್ಯ ಕೇಂದ್ರದ ನಿರ್ದೇಶಕ ಬ್ರಿಯಾನ್ ಕೆನಡಿ ಮಾತನಾಡಿ, ಈ ಸಮ್ಮೇಳನದ ಮೂಲಕ ಹೆಚ್ಚು ಜನಸಂಖ್ಯೆ ಇರುವ ಭಾರತದಲ್ಲಿ ಜನರು ಆರೋಗ್ಯಕರವಾಗಿ ವಯಸ್ಸಾಗುವ ಬಗ್ಗೆಯೂ ಆದ್ಯತೆ ನೀಡಲು ಅವಕಾಶ ಮಾಡಿಕೊಟ್ಟಿದೆ. ಪ್ರತಿಯೊಬ್ಬರಿಗೂ ವಯಸ್ಸಾಗಲಿದೆ ಆದರೆ ಅವರು ವಯಸ್ಸಾದ ಸಂದರ್ಭದಲ್ಲಿ ಎಷ್ಟು ಆರೋಗ್ಯವಾಗಿದ್ದಾರೆ ಎಂಬುದು ಮುಖ್ಯ. ಇದಕ್ಕಾಗಿ ವಿಜ್ಞಾನದ ಹೆಜ್ಜೆ ಹಾಗೂ ಜನರಲ್ಲಿನ ಜಾಗೃತಿ ಬಗ್ಗೆಯೂ ಈ ಸಮ್ಮೇಳನದಲ್ಲಿ ಚರ್ಚೆಯಾಗುತ್ತಿರುವುದು ಪ್ರಶಂಸನಾರ್ಹ ಎಂದು ಹೇಳಿದರು.

ಐಐಎಸ್‌ಸಿ ಇಂಟರ್ ಡಿಸಿಪ್ಲಿನರಿ ಸೈನ್ಸಸ್ ವಿಭಾಗದ ಡೀನ್ ನವಕಂತ ಭಟ್ ಮಾತನಾಡಿ, ಭಾರತದಲ್ಲಿ ಮುಂದಿನ ದಿನಗಳಲ್ಲಿ ವಯಸ್ಸಾಗುವವರ ಸರಾಸರಿ ಪ್ರಮಾಣ ಹೆಚ್ಚಾಗಲಿದೆ. ಆದರೆ, ಇಂದು ನಮ್ಮ ಜೀವನಶೈಲಿ, ಆಹಾರಕ್ರಮ ಗಮನಿಸಿದರೆ ಭವಿಷ್ಯದ ಬಗ್ಗೆ ಯೋಚನೆ ಮೂಡಲಿದೆ. ಆರೋಗ್ಯಕರ ಭವಿಷ್ಯ ನಿರ್ಮಾಣಕ್ಕೆ ಯಾವೆಲ್ಲಾ ಕ್ರಮದ ಅಗತ್ಯ ಎಂಬುದರ ಬಗ್ಗೆ ಸುದೀರ್ಘ ಚರ್ಚೆಯಾಗಬೇಕು, ಅನುವಂಶಿಕ ಕಾಯಿಲೆಗಳ ನಿರ್ವಹಣೆ, ಪರಿಸರದಿಂದ ಆಗುವ ಆರೋಗ್ಯ ಸಮಸ್ಯೆ ಸೇರಿದಂತೆ ವಯಸ್ಸಾದ ಬಳಿಕ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಆಯಾ ಕ್ಷೇತ್ರದ ವೈದ್ಯ ಹಾಗೂ ವಿಜ್ಞಾನ ತಜ್ಞರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಈಗಿಂದಲೇ ಈ ವಿಷಯಕ್ಕೆ ಗಮನ ನೀಡದೇ ಹೋದಲ್ಲಿ ಭವಿಷ್ಯದಲ್ಲಿ ಪ್ರತಿಯೊಬ್ಬರೂ ಅನಾರೋಗ್ಯದ ಜೀವನ ಸಾಗಿಸಬೇಕಾಗಬಹುದು ಎಂದು ಎಚ್ಚರಿಸಿದರು.

ಅಧಿವೇಶದಲ್ಲಿ ಆರೋಗ್ಯದ ವಯಸ್ಸಾಗುವಿಕೆಯ ಪ್ರಮಾಣವನ್ನು ಹೆಚ್ಚಿಸಲು ತೆಗೆದುಕೊಳ್ಳಬೇಕಾದ ಕ್ರಮಗಳು, ಸವಾಲುಗಳ ಬಗ್ಗೆ ತಜ್ಞರಿಂದ ಚರ್ಚೆ ನಡೆಯಿತು.
ಸಮಾವೇಶದಲ್ಲಿ ಎಂಎಲ್‌ಸಿ ಮಂಜುನಾಥ ಭಂಡಾರಿ, ಐಐಎಸ್‌ಸಿ ನಿರ್ದೇಶಕ ಗೋವಿಂದನ್‌ ರಂಗರಾಜನ್‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

2 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

8 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

9 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

10 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

11 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

22 hours ago