ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ- ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಉತ್ತಮ ಆರೋಗಭ್ಯಾಸ ಹೊಂದುವುದರಿಂದ ಮಾತ್ರ ಪ್ರತಿಯೊಬ್ಬರು ಆರೋಗ್ಯವಂತ ದೀರ್ಘಾಯುಷಿಯಾಗಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್‌ಸಿ) ಆಯೋಜಿಸಿದ್ದ “ಲಾಂಗಿವಿಟಿ ಇಂಡಿಯಾ ಕಾನ್ಫರೆನ್ಸ್‌” (ದೀರ್ಘಾಯುಷ್ಯ ಭಾರತ ಸಮ್ಮೇಳನ)ವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಆರೋಗ್ಯವಂತರಾಗಿ ಹೆಚ್ಚು ಕಾಲ ಬದುಕುವುದು ಸವಾಲಿನ ವಿಷಯವಾಗಿದೆ. ನಮ್ಮ ಆಹಾರಭ್ಯಾಸಗಳು ನಮ್ಮನ್ನು ಅನಾರೋಗ್ಯದತ್ತ ಕೊಂಡೊಯ್ಯುತ್ತಿದೆ. ಎಷ್ಟು ವರ್ಷ ಬದುಕಿದ್ದೆವು ಎನ್ನುವುದಕ್ಕಿಂತ ಎಷ್ಟು ವರ್ಷ ಆರೋಗ್ಯವಾಗಿ ಬದುಕುತ್ತೇವೆ ಎನ್ನುವುದು ಮುಖ್ಯ. ಆರೋಗ್ಯವಂತ ದೀರ್ಘಾಯಸ್ಸು ಹೊಂದಲು ಪ್ರತಿಯೊಬ್ಬರು ಇಂದಿನಿಂದಲೇ ಉತ್ತಮ ಆರೋಗಭ್ಯಾಸ ಪ್ರಾರಂಭಿಸಬೇಕು, ಆಗಷ್ಟೇ ಹೆಚ್ಚು ಕಾಲ ಆರೋಗ್ಯವಾಗಿ ಬದುಕಲು ಸಾಧ್ಯ. ಈ ನಿಟ್ಟಿನಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ನಡೆಯಬೇಕು ಎಂದು ಹೇಳಿದರು.
ಎನ್‌ಯುಎಸ್‌ನ ಆರೋಗ್ಯಕರ ದೀರ್ಘಾಯುಷ್ಯ ಕೇಂದ್ರದ ನಿರ್ದೇಶಕ ಬ್ರಿಯಾನ್ ಕೆನಡಿ ಮಾತನಾಡಿ, ಈ ಸಮ್ಮೇಳನದ ಮೂಲಕ ಹೆಚ್ಚು ಜನಸಂಖ್ಯೆ ಇರುವ ಭಾರತದಲ್ಲಿ ಜನರು ಆರೋಗ್ಯಕರವಾಗಿ ವಯಸ್ಸಾಗುವ ಬಗ್ಗೆಯೂ ಆದ್ಯತೆ ನೀಡಲು ಅವಕಾಶ ಮಾಡಿಕೊಟ್ಟಿದೆ. ಪ್ರತಿಯೊಬ್ಬರಿಗೂ ವಯಸ್ಸಾಗಲಿದೆ ಆದರೆ ಅವರು ವಯಸ್ಸಾದ ಸಂದರ್ಭದಲ್ಲಿ ಎಷ್ಟು ಆರೋಗ್ಯವಾಗಿದ್ದಾರೆ ಎಂಬುದು ಮುಖ್ಯ. ಇದಕ್ಕಾಗಿ ವಿಜ್ಞಾನದ ಹೆಜ್ಜೆ ಹಾಗೂ ಜನರಲ್ಲಿನ ಜಾಗೃತಿ ಬಗ್ಗೆಯೂ ಈ ಸಮ್ಮೇಳನದಲ್ಲಿ ಚರ್ಚೆಯಾಗುತ್ತಿರುವುದು ಪ್ರಶಂಸನಾರ್ಹ ಎಂದು ಹೇಳಿದರು.

ಐಐಎಸ್‌ಸಿ ಇಂಟರ್ ಡಿಸಿಪ್ಲಿನರಿ ಸೈನ್ಸಸ್ ವಿಭಾಗದ ಡೀನ್ ನವಕಂತ ಭಟ್ ಮಾತನಾಡಿ, ಭಾರತದಲ್ಲಿ ಮುಂದಿನ ದಿನಗಳಲ್ಲಿ ವಯಸ್ಸಾಗುವವರ ಸರಾಸರಿ ಪ್ರಮಾಣ ಹೆಚ್ಚಾಗಲಿದೆ. ಆದರೆ, ಇಂದು ನಮ್ಮ ಜೀವನಶೈಲಿ, ಆಹಾರಕ್ರಮ ಗಮನಿಸಿದರೆ ಭವಿಷ್ಯದ ಬಗ್ಗೆ ಯೋಚನೆ ಮೂಡಲಿದೆ. ಆರೋಗ್ಯಕರ ಭವಿಷ್ಯ ನಿರ್ಮಾಣಕ್ಕೆ ಯಾವೆಲ್ಲಾ ಕ್ರಮದ ಅಗತ್ಯ ಎಂಬುದರ ಬಗ್ಗೆ ಸುದೀರ್ಘ ಚರ್ಚೆಯಾಗಬೇಕು, ಅನುವಂಶಿಕ ಕಾಯಿಲೆಗಳ ನಿರ್ವಹಣೆ, ಪರಿಸರದಿಂದ ಆಗುವ ಆರೋಗ್ಯ ಸಮಸ್ಯೆ ಸೇರಿದಂತೆ ವಯಸ್ಸಾದ ಬಳಿಕ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಆಯಾ ಕ್ಷೇತ್ರದ ವೈದ್ಯ ಹಾಗೂ ವಿಜ್ಞಾನ ತಜ್ಞರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಈಗಿಂದಲೇ ಈ ವಿಷಯಕ್ಕೆ ಗಮನ ನೀಡದೇ ಹೋದಲ್ಲಿ ಭವಿಷ್ಯದಲ್ಲಿ ಪ್ರತಿಯೊಬ್ಬರೂ ಅನಾರೋಗ್ಯದ ಜೀವನ ಸಾಗಿಸಬೇಕಾಗಬಹುದು ಎಂದು ಎಚ್ಚರಿಸಿದರು.

ಅಧಿವೇಶದಲ್ಲಿ ಆರೋಗ್ಯದ ವಯಸ್ಸಾಗುವಿಕೆಯ ಪ್ರಮಾಣವನ್ನು ಹೆಚ್ಚಿಸಲು ತೆಗೆದುಕೊಳ್ಳಬೇಕಾದ ಕ್ರಮಗಳು, ಸವಾಲುಗಳ ಬಗ್ಗೆ ತಜ್ಞರಿಂದ ಚರ್ಚೆ ನಡೆಯಿತು.
ಸಮಾವೇಶದಲ್ಲಿ ಎಂಎಲ್‌ಸಿ ಮಂಜುನಾಥ ಭಂಡಾರಿ, ಐಐಎಸ್‌ಸಿ ನಿರ್ದೇಶಕ ಗೋವಿಂದನ್‌ ರಂಗರಾಜನ್‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

9 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

14 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago