ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ- ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಉತ್ತಮ ಆರೋಗಭ್ಯಾಸ ಹೊಂದುವುದರಿಂದ ಮಾತ್ರ ಪ್ರತಿಯೊಬ್ಬರು ಆರೋಗ್ಯವಂತ ದೀರ್ಘಾಯುಷಿಯಾಗಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್‌ಸಿ) ಆಯೋಜಿಸಿದ್ದ “ಲಾಂಗಿವಿಟಿ ಇಂಡಿಯಾ ಕಾನ್ಫರೆನ್ಸ್‌” (ದೀರ್ಘಾಯುಷ್ಯ ಭಾರತ ಸಮ್ಮೇಳನ)ವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಆರೋಗ್ಯವಂತರಾಗಿ ಹೆಚ್ಚು ಕಾಲ ಬದುಕುವುದು ಸವಾಲಿನ ವಿಷಯವಾಗಿದೆ. ನಮ್ಮ ಆಹಾರಭ್ಯಾಸಗಳು ನಮ್ಮನ್ನು ಅನಾರೋಗ್ಯದತ್ತ ಕೊಂಡೊಯ್ಯುತ್ತಿದೆ. ಎಷ್ಟು ವರ್ಷ ಬದುಕಿದ್ದೆವು ಎನ್ನುವುದಕ್ಕಿಂತ ಎಷ್ಟು ವರ್ಷ ಆರೋಗ್ಯವಾಗಿ ಬದುಕುತ್ತೇವೆ ಎನ್ನುವುದು ಮುಖ್ಯ. ಆರೋಗ್ಯವಂತ ದೀರ್ಘಾಯಸ್ಸು ಹೊಂದಲು ಪ್ರತಿಯೊಬ್ಬರು ಇಂದಿನಿಂದಲೇ ಉತ್ತಮ ಆರೋಗಭ್ಯಾಸ ಪ್ರಾರಂಭಿಸಬೇಕು, ಆಗಷ್ಟೇ ಹೆಚ್ಚು ಕಾಲ ಆರೋಗ್ಯವಾಗಿ ಬದುಕಲು ಸಾಧ್ಯ. ಈ ನಿಟ್ಟಿನಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆ ನಡೆಯಬೇಕು ಎಂದು ಹೇಳಿದರು.
ಎನ್‌ಯುಎಸ್‌ನ ಆರೋಗ್ಯಕರ ದೀರ್ಘಾಯುಷ್ಯ ಕೇಂದ್ರದ ನಿರ್ದೇಶಕ ಬ್ರಿಯಾನ್ ಕೆನಡಿ ಮಾತನಾಡಿ, ಈ ಸಮ್ಮೇಳನದ ಮೂಲಕ ಹೆಚ್ಚು ಜನಸಂಖ್ಯೆ ಇರುವ ಭಾರತದಲ್ಲಿ ಜನರು ಆರೋಗ್ಯಕರವಾಗಿ ವಯಸ್ಸಾಗುವ ಬಗ್ಗೆಯೂ ಆದ್ಯತೆ ನೀಡಲು ಅವಕಾಶ ಮಾಡಿಕೊಟ್ಟಿದೆ. ಪ್ರತಿಯೊಬ್ಬರಿಗೂ ವಯಸ್ಸಾಗಲಿದೆ ಆದರೆ ಅವರು ವಯಸ್ಸಾದ ಸಂದರ್ಭದಲ್ಲಿ ಎಷ್ಟು ಆರೋಗ್ಯವಾಗಿದ್ದಾರೆ ಎಂಬುದು ಮುಖ್ಯ. ಇದಕ್ಕಾಗಿ ವಿಜ್ಞಾನದ ಹೆಜ್ಜೆ ಹಾಗೂ ಜನರಲ್ಲಿನ ಜಾಗೃತಿ ಬಗ್ಗೆಯೂ ಈ ಸಮ್ಮೇಳನದಲ್ಲಿ ಚರ್ಚೆಯಾಗುತ್ತಿರುವುದು ಪ್ರಶಂಸನಾರ್ಹ ಎಂದು ಹೇಳಿದರು.

ಐಐಎಸ್‌ಸಿ ಇಂಟರ್ ಡಿಸಿಪ್ಲಿನರಿ ಸೈನ್ಸಸ್ ವಿಭಾಗದ ಡೀನ್ ನವಕಂತ ಭಟ್ ಮಾತನಾಡಿ, ಭಾರತದಲ್ಲಿ ಮುಂದಿನ ದಿನಗಳಲ್ಲಿ ವಯಸ್ಸಾಗುವವರ ಸರಾಸರಿ ಪ್ರಮಾಣ ಹೆಚ್ಚಾಗಲಿದೆ. ಆದರೆ, ಇಂದು ನಮ್ಮ ಜೀವನಶೈಲಿ, ಆಹಾರಕ್ರಮ ಗಮನಿಸಿದರೆ ಭವಿಷ್ಯದ ಬಗ್ಗೆ ಯೋಚನೆ ಮೂಡಲಿದೆ. ಆರೋಗ್ಯಕರ ಭವಿಷ್ಯ ನಿರ್ಮಾಣಕ್ಕೆ ಯಾವೆಲ್ಲಾ ಕ್ರಮದ ಅಗತ್ಯ ಎಂಬುದರ ಬಗ್ಗೆ ಸುದೀರ್ಘ ಚರ್ಚೆಯಾಗಬೇಕು, ಅನುವಂಶಿಕ ಕಾಯಿಲೆಗಳ ನಿರ್ವಹಣೆ, ಪರಿಸರದಿಂದ ಆಗುವ ಆರೋಗ್ಯ ಸಮಸ್ಯೆ ಸೇರಿದಂತೆ ವಯಸ್ಸಾದ ಬಳಿಕ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಆಯಾ ಕ್ಷೇತ್ರದ ವೈದ್ಯ ಹಾಗೂ ವಿಜ್ಞಾನ ತಜ್ಞರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಈಗಿಂದಲೇ ಈ ವಿಷಯಕ್ಕೆ ಗಮನ ನೀಡದೇ ಹೋದಲ್ಲಿ ಭವಿಷ್ಯದಲ್ಲಿ ಪ್ರತಿಯೊಬ್ಬರೂ ಅನಾರೋಗ್ಯದ ಜೀವನ ಸಾಗಿಸಬೇಕಾಗಬಹುದು ಎಂದು ಎಚ್ಚರಿಸಿದರು.

ಅಧಿವೇಶದಲ್ಲಿ ಆರೋಗ್ಯದ ವಯಸ್ಸಾಗುವಿಕೆಯ ಪ್ರಮಾಣವನ್ನು ಹೆಚ್ಚಿಸಲು ತೆಗೆದುಕೊಳ್ಳಬೇಕಾದ ಕ್ರಮಗಳು, ಸವಾಲುಗಳ ಬಗ್ಗೆ ತಜ್ಞರಿಂದ ಚರ್ಚೆ ನಡೆಯಿತು.
ಸಮಾವೇಶದಲ್ಲಿ ಎಂಎಲ್‌ಸಿ ಮಂಜುನಾಥ ಭಂಡಾರಿ, ಐಐಎಸ್‌ಸಿ ನಿರ್ದೇಶಕ ಗೋವಿಂದನ್‌ ರಂಗರಾಜನ್‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

6 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

7 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

17 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

19 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

20 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

21 hours ago