ಕೋಲಾರ: ಜಿಲ್ಲೆಯಲ್ಲಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಲಭ್ಯತೆಯೊಂದಿಗೆ ದಿನದ 24 ಗಂಟೆಯೂ ಚಿಕಿತ್ಸೆ ನೀಡುವ ವೈದ್ಯರನ್ನೊಳಗೊಂಡ ಚಿಕಿತ್ಸಾ ಸೌಲಭ್ಯವನ್ನು ನೀಡುವಂತೆ ಬಜೆಟ್ ನಲ್ಲಿ ಹಣಕಾಸು ನಿಗದಿ ಪಡಿಸಬೇಕು ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ರಾಜ್ಯ ಬಜೆಟ್ ಕುರಿತಂತೆ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ನಗರದಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯರಿಗೆ ವಿಶೇಷವಾದ ಕ್ಯಾನ್ಸರ್ ನಂತಹ ಆಂತರಿಕ ಚಿಕಿತ್ಸೆಗಳನ್ನು ಒಂದೇ ಸೂರಿನಡಿಯಲ್ಲಿ ಚಿಕಿತ್ಸೆ ನೀಡುವಂತ ಘಟಕವನ್ನು ಸ್ಥಾಪಿಸಿ ಮಹಿಳೆಯರ ಆರೋಗ್ಯ ಗೌಪ್ಯತೆಯನ್ನು ಕಾಪಾಡುವ ನಿಟ್ಟಿನಿಲ್ಲಿ ಹಣಕಾಸು ನಿಗದಿಪಡಿಸಬೇಕು
ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ನಿರ್ಲಕ್ಷ್ಯಕ್ಕೊಳಗಾಗಿ ಹಾಳು ಕೊಂಪೆಗಳಾಗಿವೆ. ಇವುಗಳನ್ನು ತ್ವರಿತವಾಗಿ ಶುಚಿಗೊಳಿಸಿ, ಅಭಿವೃದ್ಧಿ ಪಡಿಸಿ, ಮೂಲಭೂತ ಸೌಕರ್ಯಗಳೊಂದಿಗೆ ಗೈಡ್ ಗಳನ್ನು ನೇಮಕ ಮಾಡಿ ಕೋಲಾರದ ಇತಿಹಾಸ ಸಾರುವ ಮತ್ತು ಧಾರ್ಮಿಕ ಕೇಂದ್ರಗಳನ್ನು ಉಳಿಸಿ ಅಭಿವೃದ್ಧಿಪಡಿಸಲು ಬಜೆಟ್ ನಲ್ಲಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು
ಕೋಲಾರ ನಗರ ಪ್ರದೇಶವನ್ನು ಸ್ಮಾರ್ಟ್ ಸಿಟಿ ಅಡಿಯಲ್ಲಿ ವಿಶೇಷ ಅನುಧಾನ ನಿಗದಿಪಡಿಸಿ ನಗರಾಭಿವೃದ್ಧಿ ಮತ್ತು ಶೌಚಾಲಯಗಳು ಹಾಗೂ ನೈರ್ಮಲ್ಯ ಕಾಪಾಡಬೇಕು ಕೃಷಿ ಉತ್ಪನ್ನ ಮಾರುಕಟ್ಟೆ ಜಾಗ, ವರ್ತುಲ ರಸ್ತೆ ಮತ್ತು ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ಧೀಕರಣ ಹಲವಾರು ವರ್ಷಗಳಿಂದ ಸರ್ಕಾರದ ನಿರ್ಲಕ್ಷ್ಯದಿಂದ ನೆನೆಗುದಿಗೆ ಬಿದ್ದಿದೆ. ಆದ್ದರಿಂದ ಈ ಕೂಡಲೆ ತ್ವರಿತವಾಗಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸುವಂತೆ ಬಜೆಟ್ ಮಂಡನೆಯಾಗಬೇಕು ಎಂದು ಸಿಎಂಆರ್ ಶ್ರೀನಾಥ್ ಒತ್ತಾಯಿಸಿದರು
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…