ಕೋಲಾರ: ಜಿಲ್ಲೆಯಲ್ಲಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಲಭ್ಯತೆಯೊಂದಿಗೆ ದಿನದ 24 ಗಂಟೆಯೂ ಚಿಕಿತ್ಸೆ ನೀಡುವ ವೈದ್ಯರನ್ನೊಳಗೊಂಡ ಚಿಕಿತ್ಸಾ ಸೌಲಭ್ಯವನ್ನು ನೀಡುವಂತೆ ಬಜೆಟ್ ನಲ್ಲಿ ಹಣಕಾಸು ನಿಗದಿ ಪಡಿಸಬೇಕು ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ರಾಜ್ಯ ಬಜೆಟ್ ಕುರಿತಂತೆ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ನಗರದಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯರಿಗೆ ವಿಶೇಷವಾದ ಕ್ಯಾನ್ಸರ್ ನಂತಹ ಆಂತರಿಕ ಚಿಕಿತ್ಸೆಗಳನ್ನು ಒಂದೇ ಸೂರಿನಡಿಯಲ್ಲಿ ಚಿಕಿತ್ಸೆ ನೀಡುವಂತ ಘಟಕವನ್ನು ಸ್ಥಾಪಿಸಿ ಮಹಿಳೆಯರ ಆರೋಗ್ಯ ಗೌಪ್ಯತೆಯನ್ನು ಕಾಪಾಡುವ ನಿಟ್ಟಿನಿಲ್ಲಿ ಹಣಕಾಸು ನಿಗದಿಪಡಿಸಬೇಕು
ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ನಿರ್ಲಕ್ಷ್ಯಕ್ಕೊಳಗಾಗಿ ಹಾಳು ಕೊಂಪೆಗಳಾಗಿವೆ. ಇವುಗಳನ್ನು ತ್ವರಿತವಾಗಿ ಶುಚಿಗೊಳಿಸಿ, ಅಭಿವೃದ್ಧಿ ಪಡಿಸಿ, ಮೂಲಭೂತ ಸೌಕರ್ಯಗಳೊಂದಿಗೆ ಗೈಡ್ ಗಳನ್ನು ನೇಮಕ ಮಾಡಿ ಕೋಲಾರದ ಇತಿಹಾಸ ಸಾರುವ ಮತ್ತು ಧಾರ್ಮಿಕ ಕೇಂದ್ರಗಳನ್ನು ಉಳಿಸಿ ಅಭಿವೃದ್ಧಿಪಡಿಸಲು ಬಜೆಟ್ ನಲ್ಲಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು
ಕೋಲಾರ ನಗರ ಪ್ರದೇಶವನ್ನು ಸ್ಮಾರ್ಟ್ ಸಿಟಿ ಅಡಿಯಲ್ಲಿ ವಿಶೇಷ ಅನುಧಾನ ನಿಗದಿಪಡಿಸಿ ನಗರಾಭಿವೃದ್ಧಿ ಮತ್ತು ಶೌಚಾಲಯಗಳು ಹಾಗೂ ನೈರ್ಮಲ್ಯ ಕಾಪಾಡಬೇಕು ಕೃಷಿ ಉತ್ಪನ್ನ ಮಾರುಕಟ್ಟೆ ಜಾಗ, ವರ್ತುಲ ರಸ್ತೆ ಮತ್ತು ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ಧೀಕರಣ ಹಲವಾರು ವರ್ಷಗಳಿಂದ ಸರ್ಕಾರದ ನಿರ್ಲಕ್ಷ್ಯದಿಂದ ನೆನೆಗುದಿಗೆ ಬಿದ್ದಿದೆ. ಆದ್ದರಿಂದ ಈ ಕೂಡಲೆ ತ್ವರಿತವಾಗಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸುವಂತೆ ಬಜೆಟ್ ಮಂಡನೆಯಾಗಬೇಕು ಎಂದು ಸಿಎಂಆರ್ ಶ್ರೀನಾಥ್ ಒತ್ತಾಯಿಸಿದರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…