ಕೋಲಾರ: ಜಿಲ್ಲೆಯಲ್ಲಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಲಭ್ಯತೆಯೊಂದಿಗೆ ದಿನದ 24 ಗಂಟೆಯೂ ಚಿಕಿತ್ಸೆ ನೀಡುವ ವೈದ್ಯರನ್ನೊಳಗೊಂಡ ಚಿಕಿತ್ಸಾ ಸೌಲಭ್ಯವನ್ನು ನೀಡುವಂತೆ ಬಜೆಟ್ ನಲ್ಲಿ ಹಣಕಾಸು ನಿಗದಿ ಪಡಿಸಬೇಕು ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ರಾಜ್ಯ ಬಜೆಟ್ ಕುರಿತಂತೆ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ನಗರದಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯರಿಗೆ ವಿಶೇಷವಾದ ಕ್ಯಾನ್ಸರ್ ನಂತಹ ಆಂತರಿಕ ಚಿಕಿತ್ಸೆಗಳನ್ನು ಒಂದೇ ಸೂರಿನಡಿಯಲ್ಲಿ ಚಿಕಿತ್ಸೆ ನೀಡುವಂತ ಘಟಕವನ್ನು ಸ್ಥಾಪಿಸಿ ಮಹಿಳೆಯರ ಆರೋಗ್ಯ ಗೌಪ್ಯತೆಯನ್ನು ಕಾಪಾಡುವ ನಿಟ್ಟಿನಿಲ್ಲಿ ಹಣಕಾಸು ನಿಗದಿಪಡಿಸಬೇಕು
ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ನಿರ್ಲಕ್ಷ್ಯಕ್ಕೊಳಗಾಗಿ ಹಾಳು ಕೊಂಪೆಗಳಾಗಿವೆ. ಇವುಗಳನ್ನು ತ್ವರಿತವಾಗಿ ಶುಚಿಗೊಳಿಸಿ, ಅಭಿವೃದ್ಧಿ ಪಡಿಸಿ, ಮೂಲಭೂತ ಸೌಕರ್ಯಗಳೊಂದಿಗೆ ಗೈಡ್ ಗಳನ್ನು ನೇಮಕ ಮಾಡಿ ಕೋಲಾರದ ಇತಿಹಾಸ ಸಾರುವ ಮತ್ತು ಧಾರ್ಮಿಕ ಕೇಂದ್ರಗಳನ್ನು ಉಳಿಸಿ ಅಭಿವೃದ್ಧಿಪಡಿಸಲು ಬಜೆಟ್ ನಲ್ಲಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು
ಕೋಲಾರ ನಗರ ಪ್ರದೇಶವನ್ನು ಸ್ಮಾರ್ಟ್ ಸಿಟಿ ಅಡಿಯಲ್ಲಿ ವಿಶೇಷ ಅನುಧಾನ ನಿಗದಿಪಡಿಸಿ ನಗರಾಭಿವೃದ್ಧಿ ಮತ್ತು ಶೌಚಾಲಯಗಳು ಹಾಗೂ ನೈರ್ಮಲ್ಯ ಕಾಪಾಡಬೇಕು ಕೃಷಿ ಉತ್ಪನ್ನ ಮಾರುಕಟ್ಟೆ ಜಾಗ, ವರ್ತುಲ ರಸ್ತೆ ಮತ್ತು ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ಧೀಕರಣ ಹಲವಾರು ವರ್ಷಗಳಿಂದ ಸರ್ಕಾರದ ನಿರ್ಲಕ್ಷ್ಯದಿಂದ ನೆನೆಗುದಿಗೆ ಬಿದ್ದಿದೆ. ಆದ್ದರಿಂದ ಈ ಕೂಡಲೆ ತ್ವರಿತವಾಗಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸುವಂತೆ ಬಜೆಟ್ ಮಂಡನೆಯಾಗಬೇಕು ಎಂದು ಸಿಎಂಆರ್ ಶ್ರೀನಾಥ್ ಒತ್ತಾಯಿಸಿದರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…