ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತಾಲೂಕಿನ ಜಿಂಕೆ ಬಚ್ಚಹಳ್ಳಿ ಗ್ರಾಮದಲ್ಲಿ ನಿರ್ಮಾಣ ಮಾಡಲಾಗಿರುವ ಆರೋಗ್ಯ ಮತ್ತು ಕ್ಷೇಮ ಉಪಕೇಂದ್ರವನ್ನು ಸೋಮವಾರ ಲೋಕಾರ್ಪಣೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ನಗರಕ್ಕೆ ಕೂಗಳತೆಯ ದೂರದಲ್ಲಿರುವ ಚಿಕ್ಕತುಮಕೂರು, ದೊಡ್ಡ ತುಮಕೂರು, ಜಿಂಕೆ ಬಚ್ಚಹಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಲ್ಲಿ ಆರೋಗ್ಯ ಕೇಂದ್ರದ ಅಗತ್ಯತೆ ತೀವ್ರವಾಗಿತ್ತು. ಸಣ್ಣಪುಟ್ಟ ಕಾಯಿಲೆಗಳಿಗೂ ಗ್ರಾಮಸ್ಥರು ನಗರದ ಸರಕಾರಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ತೆರಳಬೇಕಿತ್ತು. ಇಲ್ಲಿ ಆರೋಗ್ಯ ಕೇಂದ್ರ ನಿರ್ಮಾಣ ವಾಗಿರುವುದರಿಂದ ರೋಗಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದರು.
ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಎಚ್.ಎ ಆನಂದ್ ಕುಮಾರ್ ಮಾತನಾಡಿ ಆರೋಗ್ಯ ಕೇಂದ್ರಕ್ಕೆ ಸೂಕ್ತ ವೈದ್ಯರನ್ನು ಅಗತ್ಯ ಸಿಬ್ಬಂದಿಯನ್ನು ನೇಮಿಸಿ ವೈದ್ಯಕೀಯ ಪರಿಕರಗಳು ಒದಗಿಸಬೇಕು ಎಂದರು.ಕ
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಜಿಲ್ಲಾ ಸಹಕಾರ ಸಂಘದ ಉಪಾಧ್ಯಕ್ಷ ಬಿ.ಟಿ ಶ್ರೀನಿವಾಸ್, ಮುಖಂಡರಾದ ಬಿಎಚ್ ಕೆಂಪಣ್ಣ, ಲಕ್ಷ್ಮೀನಾರಾಯಣ, ಸಂದೇಶ್, ಭೈರೇಗೌಡ ಮತ್ತಿತರರು ಇದ್ದರು.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…