ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತಾಲೂಕಿನ ಜಿಂಕೆ ಬಚ್ಚಹಳ್ಳಿ ಗ್ರಾಮದಲ್ಲಿ ನಿರ್ಮಾಣ ಮಾಡಲಾಗಿರುವ ಆರೋಗ್ಯ ಮತ್ತು ಕ್ಷೇಮ ಉಪಕೇಂದ್ರವನ್ನು ಸೋಮವಾರ ಲೋಕಾರ್ಪಣೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ನಗರಕ್ಕೆ ಕೂಗಳತೆಯ ದೂರದಲ್ಲಿರುವ ಚಿಕ್ಕತುಮಕೂರು, ದೊಡ್ಡ ತುಮಕೂರು, ಜಿಂಕೆ ಬಚ್ಚಹಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಲ್ಲಿ ಆರೋಗ್ಯ ಕೇಂದ್ರದ ಅಗತ್ಯತೆ ತೀವ್ರವಾಗಿತ್ತು. ಸಣ್ಣಪುಟ್ಟ ಕಾಯಿಲೆಗಳಿಗೂ ಗ್ರಾಮಸ್ಥರು ನಗರದ ಸರಕಾರಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ತೆರಳಬೇಕಿತ್ತು. ಇಲ್ಲಿ ಆರೋಗ್ಯ ಕೇಂದ್ರ ನಿರ್ಮಾಣ ವಾಗಿರುವುದರಿಂದ ರೋಗಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದರು.
ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಎಚ್.ಎ ಆನಂದ್ ಕುಮಾರ್ ಮಾತನಾಡಿ ಆರೋಗ್ಯ ಕೇಂದ್ರಕ್ಕೆ ಸೂಕ್ತ ವೈದ್ಯರನ್ನು ಅಗತ್ಯ ಸಿಬ್ಬಂದಿಯನ್ನು ನೇಮಿಸಿ ವೈದ್ಯಕೀಯ ಪರಿಕರಗಳು ಒದಗಿಸಬೇಕು ಎಂದರು.ಕ
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಜಿಲ್ಲಾ ಸಹಕಾರ ಸಂಘದ ಉಪಾಧ್ಯಕ್ಷ ಬಿ.ಟಿ ಶ್ರೀನಿವಾಸ್, ಮುಖಂಡರಾದ ಬಿಎಚ್ ಕೆಂಪಣ್ಣ, ಲಕ್ಷ್ಮೀನಾರಾಯಣ, ಸಂದೇಶ್, ಭೈರೇಗೌಡ ಮತ್ತಿತರರು ಇದ್ದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…