Categories: ಲೇಖನ

ಆರೋಗ್ಯ: ಸಂತೃಪ್ತಿ: ವಿಶ್ವಾಸಾರ್ಹತೆ ಉಳಿಸಿಕೊಳ್ಳುವ ಪ್ರಯತ್ನ…

ಆರೋಗ್ಯ ಎಂಬುದು ದೊಡ್ಡ ಕೊಡುಗೆ,

ಸಂತೃಪ್ತಿ ದೊಡ್ಡ ಸಂಪತ್ತು,
ವಿಶ್ವಾಸಾರ್ಹತೆ ಎಂಬುದು ಅತ್ಯುತ್ತಮ ಸಂಬಂಧ…..,
ಗೌತಮ ಬುದ್ಧ….

ಇನ್ನೊಮ್ಮೆ ಓದಿ ನೋಡಿ. ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಬದುಕು ಇನ್ನು ಸಂಕೀರ್ಣವಾಗದ, ಅತ್ಯಂತ ಕಡಿಮೆ ಜನಸಂಖ್ಯೆಯ, ಯಾವುದೇ ಆಧುನಿಕ ತಂತ್ರಜ್ಞಾನ ಇಲ್ಲದ, ಪ್ರಕೃತಿಯ ಮಡಿಲಲ್ಲಿ ಇನ್ನೂ ಮನುಷ್ಯ ಮಗುವಾಗಿರುವಾಗಲೇ ಸಿದ್ದಾರ್ಥನೆಂಬ ಗೌತಮ ಬುದ್ಧ ಈ ಮಾತುಗಳನ್ನು ತನ್ನ ಜ್ಞಾನೋದಯದ ನಂತರ ಹೇಳಿರುವುದಾದರೆ ಅವರ ದೂರದೃಷ್ಟಿ ಎಷ್ಟಿರಬಹುದು ಊಹಿಸಿ……

ನಾವು ಕಳೆದುಕೊಂಡಿರುವುದು ಏನು, ಹುಡುಕುತ್ತಿರುವುದು ಏನು, ಪಡೆಯಬೇಕಾಗಿರುವುದು ಏನು ಎಂಬುದನ್ನು ಅರಿಯಬಹುದು…….

ಆರೋಗ್ಯ, ಸಂತೃಪ್ತಿ ವಿಶ್ವಾಸಾರ್ಹತೆ ಇದೇ ಇಂದು ನಮ್ಮಿಂದ ದೂರವಾಗಿ ಅತ್ಯಂತ ವಿರಳವಾಗಿ ಕಂಡುಬರುತ್ತಿದೆ. ಈ ಸಮಾಜದಲ್ಲಿ ಇವುಗಳ ಕೊರತೆ ತೀವ್ರವಾಗಿ ಕಾಡುತ್ತಿದೆ. ಯಾರನ್ನೇ ಕೇಳಿ ಇವುಗಳೇ ನಮ್ಮ ಬದುಕಿನಲ್ಲಿ ನಾವು ಕಳೆದುಕೊಳ್ಳುತ್ತಿರುವ ಅತ್ಯಮೂಲ್ಯ ಮೌಲ್ಯಗಳು ಎಂದೇ ಹೇಳುತ್ತಾರೆ…..

ಆರೋಗ್ಯ….
****************
ವೈದ್ಯಕೀಯ ವಿಜ್ಞಾನ ಎಷ್ಟು ಮುಂದುವರಿದಿದೆ ಎಂದರೆ ವಿಶ್ವದಲ್ಲಿ ಕೆಲವೇ ಸಂಪೂರ್ಣ ಆರೋಗ್ಯವಂತ ಜನರು ಉಳಿದಿದ್ದಾರೆ. ಇದು ಹಾಸ್ಯ ಎನಿಸಿದರು ವಾಸ್ತವಕ್ಕೆ ಹತ್ತಿರವಿದೆ. ಆರೋಗ್ಯವೇ ಭಾಗ್ಯ ಅನಾರೋಗ್ಯವೇ ನರಕ ಎಂದು ತಿಳಿದಿದ್ದರೂ ಇಂದಿನ ವೇಗ ಮತ್ತು ಸ್ಪರ್ಧಾತ್ಮಕ ಸಮಾಜದಲ್ಲಿ ಆರೋಗ್ಯ ಸಾಕಷ್ಟು ಕೈಕೊಡುತ್ತಿದೆ. ಬಿಪಿ, ಶುಗರ್, ಥೈರಾಯ್ಡ್, ಆಸ್ತಮಾ, ಅಸಿಡಿಟಿ, ಮೈಗ್ರೇನ್‌, ನಿದ್ರಾಹೀನತೆ, ಖಿನ್ನತೆ ಇವುಗಳಲ್ಲಿ ಯಾವುದೂ ಒಂದು ಇಲ್ಲದ ಮಧ್ಯ ವಯಸ್ಸಿನ ಆರೋಗ್ಯವಂತ ವ್ಯಕ್ತಿ ಸಿಗುವುದು ತೀರಾ ಅಪರೂಪ. ಕೊರೋನಾ ನಂತರವಂತೂ ಆರೋಗ್ಯವೇ ಎಲ್ಲರ ಬದುಕಿನ ಬಹುದೊಡ್ಡ ಕಾಳಜಿಯಾಗಿದೆ. ನಮ್ಮ ಸಂಪಾದನೆ ಮತ್ತು ಉಳಿತಾಯವನ್ನು ನಾವು ಸುಖ ಪಡುವುದಕ್ಕಿಂತ ಅನಾರೋಗ್ಯದ ಭಯದಿಂದಲೇ ಸಂಗ್ರಹ ಮಾಡುವ ಅನಿವಾರ್ಯ ಮನಸ್ಥಿತಿಗೆ ಬಂದಿದ್ದೇವೆ. ಸಣ್ಣ ಖಾಯಿಲೆಗೂ ಲಕ್ಷಾಂತರ ಹಣ ಖರ್ಚು ಮಾಡಬೇಕಾಗಿದೆ. ಹಣದ ಮೋಹದ ಫಲವಿದು……

ಸಂತೃಪ್ತಿ…….
*****************
ನಾನು ಈ ಬದುಕಿನಲ್ಲಿ ಸಂಪೂರ್ಣ ತೃಪ್ತ ಎನ್ನುವ ಜನರು ಸ್ವಲ್ಪ ಅಪರೂಪ. ಇನ್ನೂ ಕೆಲವರು ಮೇಲ್ನೋಟಕ್ಕೆ ಹೇಳಿದರು ಒಳಗೆ ನಾನಾ ರೀತಿಯ ಅತೃಪ್ತಿ ಇದ್ದೇ ಇರುತ್ತದೆ. ವಿದ್ಯಾಭ್ಯಾಸ, ಉದ್ಯೋಗ, ಮದುವೆ ಮಕ್ಕಳು ಹಣ ಸಂಬಂಧ ಎಲ್ಲದರಲ್ಲೂ ಏನಾದರೂ ಕೊರತೆ ಇದ್ದೇ ಇರುತ್ತದೆ. ಸಂತೃಪ್ತಿ ದೊಡ್ಡ ಸಂಪತ್ತು ಎಂದು ಬುದ್ದರು ಹೇಳಿದ್ದಾರೆ. ಆದರೆ ಈಗ ಆ ಸಂಪತ್ತಿನ ಒಡೆಯರು ತುಂಬಾ ಕಡಿಮೆ. ಕೊಳ್ಳುಬಾಕ ಸಂಸ್ಕೃತಿ, ಇತರರೊಂದಿಗೆ ಹೋಲಿಸಿಕೊಳ್ಳುವುದು, ಇಲ್ಲದಿರುವುದರ ಬಗ್ಗೆಯೇ ಹೆಚ್ಚು ಚಿಂತಿಸುವ ಕಾರಣದಿಂದ ನಮ್ಮಲ್ಲಿ ಸಂತೃಪ್ತಿ ಮಾಯವಾಗಿದೆ. ಇನ್ನೂ ಬೇಕು, ಇನ್ನೂ ಬೇಕು ಎನ್ನುವ ಬಯಕೆಗಳು ನಿಯಂತ್ರಿಸುವವರಗೆ ಅಸಂತೃಪ್ತಿ ನಿರಂತರ…….

ವಿಶ್ವಾಸಾರ್ಹತೆ……
********************
ಎಲ್ಲಿ ಹುಡುಕುವುದು ಇದನ್ನು. ವಿಶ್ವಾಸಾರ್ಹತೆಯೇ ದೊಡ್ಡ ಸಂಬಂಧ ಎಂದು ಬುದ್ಧರು ಹೇಳುತ್ತಾರೆ. ಯಾವ ಸಂಬಂಧಗಳಲ್ಲಿ ವಿಶ್ವಾಸಾರ್ಹತೆ ಉಳಿದಿದೆ. ಆತ್ಮ ವಂಚನೆ ಮಾಡಿಕೊಳ್ಳದೆ ಉತ್ತರಿಸಿಕೊಳ್ಳಿ.
ನಮ್ಮದೇ ಸಮಾಜದ ಒಂದು ಹೆಣ್ಣು, ಒಂದು ಗಂಡು ನೋಡಿ ಮದುವೆ ಮಾಡಲು ಎಷ್ಟೊಂದು ಅಡ್ಡಿ ಆತಂಕಗಳು ಅನುಮಾನಗಳು ಕಾಡುತ್ತವೆ ಎಂಬುದು ಅನುಭವಿಗಳಿಗೆ ತಿಳಿದಿರುತ್ತದೆ. ನಂತರವೂ ಆ ಸಂಬಂಧ ದೀರ್ಘಕಾಲ ಉಳಿದರೆ ಅದೇ ದೊಡ್ಡ ಸಾಧನೆ. ಇನ್ನು ಸ್ನೇಹಿತರು, ಅಕ್ಕ ತಂಗಿ, ಅಣ್ಣ ತಮ್ಮ, ಅತ್ತೆ ಸೊಸೆ, ಅಪ್ಪ ಮಕ್ಕಳು, ಚಿಕ್ಕಪ್ಪ ದೊಡ್ಡಪ್ಪ ಎಂಬ ಸಂಬಂಧಗಳು ಅದೇ ಅರ್ಥದಲ್ಲಿ ಈಗಲೂ ತೀವ್ರ ಪ್ರೀತಿಯನ್ನು ಉಳಿಸಿಕೊಂಡಿದ್ದರೆ ನಿಮ್ಮನ್ನು ನೀವು ಅದೃಷ್ಟಶಾಲಿಗಳು ಎಂದೇ ಪರಿಗಣಿಸಿ.
ಯಾವುದೇ ಜಮೀನು, ಮನೆ, ವ್ಯಾಪಾರ, ವ್ಯವಹಾರಗಳಲ್ಲಿ ಎಲ್ಲಾ ರೀತಿಯ ಎಚ್ಚರಿಕೆಯ ನಂತರವೂ ಸಾಕಷ್ಟು ಅಡ್ಡಿ ಆತಂಕಗಳನ್ನು ಎದುರಿಸುವುದು, ಮೋಸ ಹೋಗುವುದು, ನ್ಯಾಯಾಲಯಗಳಿಗೆ ಅಲೆದಾಡುವುದು ನಮ್ಮ ಜೀವನದ ಭಾಗವೇ ಆಗಿದೆ. ಯಾರನ್ನು ಯಾರೂ ನಂಬದ ಸ್ಥಿತಿ ತಲುಪಿದ್ದೇವೆ…‌

ಕ್ರಿಸ್ತ ಪೂರ್ವದ ಬುದ್ದನ ಮಾತುಗಳು 2024 ರ ಈ ಕ್ಷಣದಲ್ಲಿ ನಿಂತು ಒಮ್ಮೆ ಅವಲೋಕಿಸಿ. ನಾವು ಸಾಗುತ್ತಿರುವ ದಿಕ್ಕಿನ ಬಗ್ಗೆಯೇ ನಮಗೆ ಅಸಮಾಧಾನ ಮೂಡಿಸುತ್ತದೆ….

ಈಗಲೂ ಕಾಲ ಮಿಂಚಿಲ್ಲ. ಎಲ್ಲ ಸ್ಪರ್ಧೆ, ಆಧುನಿಕ ತಂತ್ರಜ್ಞಾನ, ವೇಗದ ನಡುವೆಯೂ ಮಾನವೀಯ ಮೌಲ್ಯಗಳನ್ನು ನಾವು ಕನಿಷ್ಠ ಪ್ರಮಾಣದಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸಿದರೆ ಖಂಡಿತ ಬುದ್ದರ ಹೇಳಿಕೆಗಳಲ್ಲಿರುವ ಆ ಮೌಲ್ಯಗಳನ್ನು ಅನುಭವಿಸಬಹುದು. ಅದಕ್ಕಾಗಿ ನಿರಂತರ ಪ್ರಯತ್ನ ಮಾಡಬೇಕಾಗಿದೆ.
ಅದನ್ನು ಸದಾ ನೆನಪಿಸುವ ಪ್ರಯತ್ನ ಮನಸ್ಸುಗಳ ಅಂತರಂಗದ ಚಳವಳಿ ಸದಾ ಮಾಡುತ್ತದೆ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

14 minutes ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

1 hour ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

12 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

21 hours ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago

ತಮಿಳುನಾಡಿನ ಮಹಿಳೆಯರಿಗೆ ಬಂಪರ್‌ ಕೊಡುಗೆ ಘೋಷಿಸಿ ಹೆಣ್ಮಕ್ಕಳ ಕಣ್ಮಣಿಯಾಗಲು ಹೊರಟ ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್

ನಟಿ ತ್ರಿಷಾ ಜತೆ ಅಫೇರ್‌ ಆರೋಪ, ಹೆಂಡ್ತಿ ಡಿವೋರ್ಸ್‌ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್‌ ಮೀಡಿಯಾದಲ್ಲಿ…

1 day ago