ಆರೋಗ್ಯ ಸೇವೆಗಳ ಸೌಲಭ್ಯ ಪಡೆದುಕೊಳ್ಳಿ- ಡಾ. ಶಿವಶಂಕರ್.ಎನ್

ಆರೋಗ್ಯ ಸೇವೆಗಳನ್ನು ಜನಮುಖಿಗೊಳಿಸುವ ನಿಟ್ಟಿನಲ್ಲಿ ಘನ ಭಾರತ ಸರ್ಕಾರವು ಸಾರ್ವತ್ರಿಕ ಜನ ಆರೋಗ್ಯ ಸೇವೆ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಹಾಗೂ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿಯಲ್ಲಿ ಆಯುಷ್ಮಾನ್ ಭವಃ ಅಭಿಯಾನ ಕಾರ್ಯಕ್ರಮವನ್ನು ರೂಪಿಸಿದ್ದು, ಅಭಿಯಾನವನ್ನು ದೇಶದ ಘನ ವೆತ್ತ ರಾಷ್ಟ್ರಪತಿಗಳು ದ್ರೌಪದಿ ಮುರ್ಮು ರವರು ಸೆಪ್ಟೆಂಬರ್ 13ರಂದು ಚಾಲನೆ ನೀಡಿರುತ್ತಾರೆ.‌

ಅದೇ ರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾ, ತಾಲ್ಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಉಪಕೇಂದ್ರಗಳ ಮಟ್ಟದಲ್ಲಿ ಈ ಅಭಿಯಾನ ಚಾಲನೆಗೊಂಡಿರುತ್ತದೆ.

ಈ ಆಯುಷ್ಮಾನ್ ಭವಃ ಅಭಿಯಾನ ಕಾರ್ಯಕ್ರಮ ದಿನಾಂಕ: 17.09.2023ರಿಂದ 31.12.2023 ರವರೆಗೂ ಆರೋಗ್ಯ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ನಡೆಯಲಿದೆ.

ಈ ಅಭಿಯಾನದಲ್ಲಿ ಪ್ರಮುಖವಾಗಿ ಆಯುಷ್ಮಾನ್ ಆಪ್ಕೆದ್ವಾರ 3.0, ಆಯುಷ್ಮಾನ್ ಮೇಳ, ಆಯುಷ್ಮಾನ್ ಸಭಾ, ಸ್ವಚ್ಛತಾ ಅಭಿಯಾನ, ರಕ್ತದಾನ‌ ಶಿಬಿರಗಳು, ಅಂಗಾಂಗ ದಾನ ಜಾಗೃತಿ ಮತ್ತು ನೊಂದಣಿ ಸೌಲಭ್ಯಗಳು ಒಳಗೊಂಡಿದ್ದು, ಸಾರ್ವಜನಿಕರು, ಆರೋಗ್ಯ ಸೇವೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಡಾ.ಶಿವಶಂಕರ.ಎನ್ ತಿಳಿಸಿದ್ದಾರೆ.

ಆಯುಷ್ಮಾನ್ ಆಪ್ಕೆದ್ವಾರ 3.0 (17.09.2023 ರಿಂದ 31.12.2023 ರವರೆಗೆ) ಆಯುಷ್ಮಾನ್ ಕಾರ್ಡ್, ಆಯುಷ್ಮಾನ್ ಭಾರತ್ ಕಾರ್ಡ್ ಗಳ ಮೂಲಕ ಬಿ.ಪಿ.ಎಲ್ ಕುಟುಂಬಗಳಿಗೆ ವಾರ್ಷಿಕ 5 ಲಕ್ಷದವರೆಗೆ ಹಾಗು ಎ.ಪಿ.ಎಲ್ ಕುಟುಂಬಗಳಿಗೆ 1.5 ಲಕ್ಷದವರೆಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸುಸಜ್ಜಿತ ಸರಕಾರಿ ಅಥವಾ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತದೆ. ಪ್ರಸ್ತುತ ಜಿಲ್ಲೆಯಲ್ಲಿ ಗ್ರಾಮ ಒನ್ ವಿವಿಧ ಸೇವಾ ಕೇಂದ್ರಗಳ ಮೂಲಕ 3,62,138 ಲಕ್ಷ ನೊಂದಣಿ ಮಾಡಿಸಲಾಗಿದ್ದು ಅಭಿಯಾನದಲ್ಲಿ ಬಾಕಿ ಉಳಿದ 4,89,772 ಕಾರ್ಡ್ಗಳನ್ನು ವಿತರಿಸಲು ಹೆಚ್ಚು ಒತ್ತು ನೀಡಲಾಗುವುದು.

ಆಯುಷ್ಮಾನ್ ಮೇಳ (17.09.2023 ರಿಂದ 31.12.2023 ರವರೆಗೆ) ಜಿಲ್ಲೆಯ 197 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಹಾಗು ವಿಜಯಪುರ ಮತ್ತು ತ್ಯಾಮಗೊಂಡ್ಲು 2 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ಮಂಗಳವಾರ ಆರೋಗ್ಯ ಮೇಳಗಳನ್ನು ಹಮ್ಮಿಕೊಂಡಿದ್ದು ತಪಾಸಣೆ ಮೂಲಕ ನಿರ್ದಿಷ್ಠ ಕಾಯಿಲೆಗಳನ್ನು ಗುರುತಿಸಿ ಸೇವೆ ಕೊಡುವ ವ್ಯವಸ್ಥೆ ಹಾಗು ಅಗತ್ಯ ಇರುವವರಗೆ ಟೆಲಿಕನ್ಸಲ್ಟೇಷನ್ ಮೂಲಕ ತಜ್ಞರಿಂದ ಸೇವೆ ಮತ್ತೆ ನಿಗದಿ ಪಡಿಸಿದ ನಮೂನೆಯಲ್ಲಿ ರೆಫರಲ್ ಸೇವೆಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು.

ವಿಶೇಷವಾಗಿ ಮೊದಲನೇ ವಾರ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ ಮತ್ತು ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಮತ್ತು ಗರ್ಭಕೋಶ ಕಂಠದ ಕ್ಯಾನ್ಸರ್ ತಪಾಸಣೆ, ಎರಡನೇ ವಾರ ಸಾಂಕ್ರಾಮಿಕ ರೋಗಗಳಾದ ಕ್ಷಯ ರೋಗದ ಮತ್ತು ಕುಷ್ಠ ರೋಗ ಇತರೆ ಸಾಂಕ್ರಾಮಿಕ ರೋಗಗಳ ತಪಾಸಣೆ, ಮೂರನೇ ವಾರ ತಾಯಿ ಮತ್ತು ಮಕ್ಕಳ ಆರೋಗ್ಯ, ಲಸಿಕಾ ಕಾರ್ಯಕ್ರಮ ಮತ್ತು ಪೌಷ್ಟಿಕ ಆಹಾರ, ನಾಲ್ಕನೇ ವಾರ ಜಿಲ್ಲಾ ಮಟ್ಟದ ನಿರ್ದಿಷ್ಠ ರೋಗಗಳು(Sickle Cell Anaemia) ರಕ್ತಹೀನತೆ ಹಾಗು ಕಣ್ಣಿನ ಸುರಕ್ಷತೆ ಸೇವೆಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಆಯುಷ್ಮಾನ್ ಸಭೆ (ಅಕ್ಟೋಬರ್‌02) ಗ್ರಾಮ ಮತ್ತು ವಾರ್ಡ್ ಮಟ್ಟದಲ್ಲಿ ವಿವಿಧ ಆರೋಗ್ಯ ಸೇವೆಗಳ ಕುರಿತು ಜಾಗೃತಿಯೊಂದಿಗೆ ಸ್ಥಳಿಯ ಆರೋಗ್ಯ ಸಮಸ್ಯೆಗಳನ್ನು ನಗರ ಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯತ್, ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ, ಮಹಿಳಾ ಆರೋಗ್ಯ ಸಮಿತಿ, ಜನ ಆರೋಗ್ಯ ಸಮಿತಿ ಮೂಲಕ ಚರ್ಚಿಸಿ ಸ್ಥಳದಲ್ಲಿಯೇ ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸಭೆಯಲ್ಲಿ ಮುಖ್ಯವಾಗಿ ಆಯುಷ್ಮಾನ್ ಭಾರತ್ ಕಾರ್ಡ್ಗಳ ವಿತರಣೆ, ಆರೋಗ್ಯ ಶಿಕ್ಷಣ, ಅಸಾಂಕ್ರಾಮಿಕ ರೋಗಗಳು, ಕ್ಷಯ ರೋಗ ಇತರೆ ರೋಗಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ಸೇವಾ ಪಖ್ವಾಡ : 17.09.2023 ರಿಂದ 02.10.2023 ರವರೆಗೆ ಆಯುಷ್ಮಾನ್ ಭವಃ ಅಭಿಯಾನದ ಜೊತೆಗೆ  ಸ್ವಚ್ಛಾ ಭಾರತ ಅಭಿಯಾನ, ರಕ್ತದಾನ ಶಿಬಿರಗಳು ಹಾಗೂ ಅಂಗಾಂಗ ದಾನದ ಬಗ್ಗೆ ಅರಿವು ಹಾಗು ನೊಂದಾಣಿ ಕಾರ್ಯಕ್ರಮಗಳನ್ನು  ಸಹ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

16 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago