ಆರೋಗ್ಯ ಸೇವೆಗಳ ಸೌಲಭ್ಯ ಪಡೆದುಕೊಳ್ಳಿ- ಡಾ. ಶಿವಶಂಕರ್.ಎನ್

ಆರೋಗ್ಯ ಸೇವೆಗಳನ್ನು ಜನಮುಖಿಗೊಳಿಸುವ ನಿಟ್ಟಿನಲ್ಲಿ ಘನ ಭಾರತ ಸರ್ಕಾರವು ಸಾರ್ವತ್ರಿಕ ಜನ ಆರೋಗ್ಯ ಸೇವೆ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಹಾಗೂ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿಯಲ್ಲಿ ಆಯುಷ್ಮಾನ್ ಭವಃ ಅಭಿಯಾನ ಕಾರ್ಯಕ್ರಮವನ್ನು ರೂಪಿಸಿದ್ದು, ಅಭಿಯಾನವನ್ನು ದೇಶದ ಘನ ವೆತ್ತ ರಾಷ್ಟ್ರಪತಿಗಳು ದ್ರೌಪದಿ ಮುರ್ಮು ರವರು ಸೆಪ್ಟೆಂಬರ್ 13ರಂದು ಚಾಲನೆ ನೀಡಿರುತ್ತಾರೆ.‌

ಅದೇ ರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾ, ತಾಲ್ಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಉಪಕೇಂದ್ರಗಳ ಮಟ್ಟದಲ್ಲಿ ಈ ಅಭಿಯಾನ ಚಾಲನೆಗೊಂಡಿರುತ್ತದೆ.

ಈ ಆಯುಷ್ಮಾನ್ ಭವಃ ಅಭಿಯಾನ ಕಾರ್ಯಕ್ರಮ ದಿನಾಂಕ: 17.09.2023ರಿಂದ 31.12.2023 ರವರೆಗೂ ಆರೋಗ್ಯ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ನಡೆಯಲಿದೆ.

ಈ ಅಭಿಯಾನದಲ್ಲಿ ಪ್ರಮುಖವಾಗಿ ಆಯುಷ್ಮಾನ್ ಆಪ್ಕೆದ್ವಾರ 3.0, ಆಯುಷ್ಮಾನ್ ಮೇಳ, ಆಯುಷ್ಮಾನ್ ಸಭಾ, ಸ್ವಚ್ಛತಾ ಅಭಿಯಾನ, ರಕ್ತದಾನ‌ ಶಿಬಿರಗಳು, ಅಂಗಾಂಗ ದಾನ ಜಾಗೃತಿ ಮತ್ತು ನೊಂದಣಿ ಸೌಲಭ್ಯಗಳು ಒಳಗೊಂಡಿದ್ದು, ಸಾರ್ವಜನಿಕರು, ಆರೋಗ್ಯ ಸೇವೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಡಾ.ಶಿವಶಂಕರ.ಎನ್ ತಿಳಿಸಿದ್ದಾರೆ.

ಆಯುಷ್ಮಾನ್ ಆಪ್ಕೆದ್ವಾರ 3.0 (17.09.2023 ರಿಂದ 31.12.2023 ರವರೆಗೆ) ಆಯುಷ್ಮಾನ್ ಕಾರ್ಡ್, ಆಯುಷ್ಮಾನ್ ಭಾರತ್ ಕಾರ್ಡ್ ಗಳ ಮೂಲಕ ಬಿ.ಪಿ.ಎಲ್ ಕುಟುಂಬಗಳಿಗೆ ವಾರ್ಷಿಕ 5 ಲಕ್ಷದವರೆಗೆ ಹಾಗು ಎ.ಪಿ.ಎಲ್ ಕುಟುಂಬಗಳಿಗೆ 1.5 ಲಕ್ಷದವರೆಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸುಸಜ್ಜಿತ ಸರಕಾರಿ ಅಥವಾ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತದೆ. ಪ್ರಸ್ತುತ ಜಿಲ್ಲೆಯಲ್ಲಿ ಗ್ರಾಮ ಒನ್ ವಿವಿಧ ಸೇವಾ ಕೇಂದ್ರಗಳ ಮೂಲಕ 3,62,138 ಲಕ್ಷ ನೊಂದಣಿ ಮಾಡಿಸಲಾಗಿದ್ದು ಅಭಿಯಾನದಲ್ಲಿ ಬಾಕಿ ಉಳಿದ 4,89,772 ಕಾರ್ಡ್ಗಳನ್ನು ವಿತರಿಸಲು ಹೆಚ್ಚು ಒತ್ತು ನೀಡಲಾಗುವುದು.

ಆಯುಷ್ಮಾನ್ ಮೇಳ (17.09.2023 ರಿಂದ 31.12.2023 ರವರೆಗೆ) ಜಿಲ್ಲೆಯ 197 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಹಾಗು ವಿಜಯಪುರ ಮತ್ತು ತ್ಯಾಮಗೊಂಡ್ಲು 2 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ಮಂಗಳವಾರ ಆರೋಗ್ಯ ಮೇಳಗಳನ್ನು ಹಮ್ಮಿಕೊಂಡಿದ್ದು ತಪಾಸಣೆ ಮೂಲಕ ನಿರ್ದಿಷ್ಠ ಕಾಯಿಲೆಗಳನ್ನು ಗುರುತಿಸಿ ಸೇವೆ ಕೊಡುವ ವ್ಯವಸ್ಥೆ ಹಾಗು ಅಗತ್ಯ ಇರುವವರಗೆ ಟೆಲಿಕನ್ಸಲ್ಟೇಷನ್ ಮೂಲಕ ತಜ್ಞರಿಂದ ಸೇವೆ ಮತ್ತೆ ನಿಗದಿ ಪಡಿಸಿದ ನಮೂನೆಯಲ್ಲಿ ರೆಫರಲ್ ಸೇವೆಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು.

ವಿಶೇಷವಾಗಿ ಮೊದಲನೇ ವಾರ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ ಮತ್ತು ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಮತ್ತು ಗರ್ಭಕೋಶ ಕಂಠದ ಕ್ಯಾನ್ಸರ್ ತಪಾಸಣೆ, ಎರಡನೇ ವಾರ ಸಾಂಕ್ರಾಮಿಕ ರೋಗಗಳಾದ ಕ್ಷಯ ರೋಗದ ಮತ್ತು ಕುಷ್ಠ ರೋಗ ಇತರೆ ಸಾಂಕ್ರಾಮಿಕ ರೋಗಗಳ ತಪಾಸಣೆ, ಮೂರನೇ ವಾರ ತಾಯಿ ಮತ್ತು ಮಕ್ಕಳ ಆರೋಗ್ಯ, ಲಸಿಕಾ ಕಾರ್ಯಕ್ರಮ ಮತ್ತು ಪೌಷ್ಟಿಕ ಆಹಾರ, ನಾಲ್ಕನೇ ವಾರ ಜಿಲ್ಲಾ ಮಟ್ಟದ ನಿರ್ದಿಷ್ಠ ರೋಗಗಳು(Sickle Cell Anaemia) ರಕ್ತಹೀನತೆ ಹಾಗು ಕಣ್ಣಿನ ಸುರಕ್ಷತೆ ಸೇವೆಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಆಯುಷ್ಮಾನ್ ಸಭೆ (ಅಕ್ಟೋಬರ್‌02) ಗ್ರಾಮ ಮತ್ತು ವಾರ್ಡ್ ಮಟ್ಟದಲ್ಲಿ ವಿವಿಧ ಆರೋಗ್ಯ ಸೇವೆಗಳ ಕುರಿತು ಜಾಗೃತಿಯೊಂದಿಗೆ ಸ್ಥಳಿಯ ಆರೋಗ್ಯ ಸಮಸ್ಯೆಗಳನ್ನು ನಗರ ಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯತ್, ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ, ಮಹಿಳಾ ಆರೋಗ್ಯ ಸಮಿತಿ, ಜನ ಆರೋಗ್ಯ ಸಮಿತಿ ಮೂಲಕ ಚರ್ಚಿಸಿ ಸ್ಥಳದಲ್ಲಿಯೇ ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸಭೆಯಲ್ಲಿ ಮುಖ್ಯವಾಗಿ ಆಯುಷ್ಮಾನ್ ಭಾರತ್ ಕಾರ್ಡ್ಗಳ ವಿತರಣೆ, ಆರೋಗ್ಯ ಶಿಕ್ಷಣ, ಅಸಾಂಕ್ರಾಮಿಕ ರೋಗಗಳು, ಕ್ಷಯ ರೋಗ ಇತರೆ ರೋಗಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ಸೇವಾ ಪಖ್ವಾಡ : 17.09.2023 ರಿಂದ 02.10.2023 ರವರೆಗೆ ಆಯುಷ್ಮಾನ್ ಭವಃ ಅಭಿಯಾನದ ಜೊತೆಗೆ  ಸ್ವಚ್ಛಾ ಭಾರತ ಅಭಿಯಾನ, ರಕ್ತದಾನ ಶಿಬಿರಗಳು ಹಾಗೂ ಅಂಗಾಂಗ ದಾನದ ಬಗ್ಗೆ ಅರಿವು ಹಾಗು ನೊಂದಾಣಿ ಕಾರ್ಯಕ್ರಮಗಳನ್ನು  ಸಹ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

4 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

4 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

17 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

18 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

20 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago